KARNATAKA NEWS/ ONLINE / Malenadu today/ Jun 1, 2023 SHIVAMOGGA NEWS
ಶಿವಮೊಗ್ಗ ಶಿಕ್ಷಣ ಸಚಿವ ಮಧು ಬಂಗಾರಪ್ಪ (madhu bangarappa)ಅವರು ಸಚಿವರಾದ ಮೇಲೆ ಇದೇ ಮೊದಲ ಬಾರಿಗೆ ಶಿವಮೊಗ್ಗ ಜಿಲ್ಲೆ ಹಾಗೂ ತವರು ಕ್ಷೇತ್ರ ಸೊರಬಕ್ಕೆ ಆಗಮಿಸುತ್ತಿದ್ದು, ಅವರನ್ನು ಅದ್ದೂರಿಯಾಗಿ ಸ್ವಾಗತಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಆರ್ಎಂ ಮಂಜುನಾಥ್ ಗೌಡರಿಗೆ ಕೆಪಿಸಿಸಿಯಿಂದ ಸಿಕ್ತು ಮಹತ್ತರ ಜವಾಬ್ದಾರಿ!
ಚುನಾವಣೆ ಫಲಿತಾಂಶದ ಬಳಿಕ ಬೆಂಗಳೂರಿಗೆ ಹೋಗಿದ್ದ ಮಧು ಬಂಗಾರಪ್ಪ ಅವರು ಸಂಪುಟ ವಿಸ್ತರಣೆ ಮತ್ತು ಬಿಡುವಿಲ್ಲದ ರಾಜಕೀಯ ಚಟುವಟಿಕೆಯಲ್ಲಿ ಸಕ್ರಿಯರಾ ಗಿದ್ದರು. ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಪ್ರಮುಖವಾದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ಶಾಲಾ ಕಾಲೇಜುಗಳು ಮೇ 31 ರಿಂದಲೇ ಆರಂಭವಾಗಿದ್ದರಿಂದ ಇಲಾಖೆಯ ಅಧಿ ಕಾರಿಗಳ ಸಭೆ, ಮಕ್ಕಳ ಸ್ವಾಗತ ಇತ್ಯಾದಿ ಕಾರ್ಯಕ್ರಮ ಗಳಿಂದಾಗಿ ತವರು ಜಿಲ್ಲೆಗೆ ಬರಲಾಗಿಲ್ಲ.
ಮೊಬೈಲ್ ಕಳೆದುಕೊಂಡ ಬೆನ್ನಲ್ಲೆ ಅಕೌಂಟ್ನಲ್ಲಿದ್ದ ಲಕ್ಷ ರೂಪಾಯಿನೂ ಮಾಯವಾಯ್ತು! ಹೀಗೂ ಮಾಡ್ತಾರೆ ಎಚ್ಚರ!
ಜೂ. 3 ರಂದು ಮಧು ಬಂಗಾರಪ್ಪ ಅವರು ಬೆಳಗ್ಗೆ 10 ಸರ್ಕಲ್ನಿಂದ ಬೈಕ್ ರಾಲಿ ಮೂಲಕ ಅವರನ್ನು ಬರಮಾಡಿ ಕೊಳ್ಳಲಾಗುವುದು. ಬಳಿಕ ಶಿವಮೊಗ್ಗದ ಲಗನ ಮಂದಿರದಲ್ಲಿ ಸನ್ಮಾನ ಸಮಾರಂಭ ಆಯೋಜಿಸಲಾಗಿದೆ. ಜಿಲ್ಲಾ ಕಾಂಗ್ರೆಸ್ ಹಾಗೂ ಮಧು ಬಂಗಾರಪ್ಪ ಬೆಂಬಲಿಗರು ಸಚಿವರನ್ನು ಸ್ವಾಗತಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ನಗರದೆಲ್ಲೆಡೆ ಸ್ಥಳೀಯ ನಾಯಕರುಗಳ ಪ್ಲೆಕ್ಸ್ಗಳು ರಾರಾಜಿಸುತ್ತಿವೆ.
ಇದನ್ನು ಸಹ ಓದಿ : ಚೀಲೂರು ಡಬ್ಬಲ್ ಅಟ್ಯಾಕ್! ಹಂದಿ ಅಣ್ಣಿ ಕೊಲೆ ಆರೋಪಿಗಳ ಮೇಲಿನ ದಾಳಿಯಲ್ಲಿ ಯಾರೆಲ್ಲಾ ಆರೋಪಿಗಳು ಗೊತ್ತಾ? ಫಿಟ್ ಆದನಾ ಹೆಬ್ಬೆಟ್ಟು ಮಂಜಾ?