madhu bangarappa ಶಿವಮೊಗಕ್ಕೆ ಇಂದು ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಬರಲಿದ್ಧಾರೆ. ಇವತ್ತು ಮತ್ತು ನಾಳೆ ಅವರು ಜಿಲ್ಲಾ ಪ್ರವಾಸ ಕೈಗೊಡಿದ್ದಾರೆ. ಮಂಜುನಾಥ್ ರಾವ್ರವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ತೆರಳಿದ್ದ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಇದೀಗ ವಿವಿಧ ಕೆಲಸಗಳ ನಿಮಿತ್ತ ಇವತ್ತು ಮತ್ತು ನಾಳೆ ಅಂದರೆ, ಏಪ್ರಿಲ್ 28, 29ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
madhu bangarappa /ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಪ್ರವಾಸ
ಇವತ್ತು ಅಂದರೆ, ಏಪ್ರಿಲ್ 28ರಂದು ಬೆಳಿಗ್ಗೆ 11.30ಕ್ಕೆ ಸಚಿವರು ಶಿಕಾರಿಪುರ ಸಾಂಸ್ಕೃತಿಕ ಭವನದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಹಾಗೂ ಬಾಬು ಜಗಜೀವನ್ ರಾಮ್ ಅವರ ಜನ್ಮ ದಿನಾಚರಣೆಯಲ್ಲಿ ಪಾಲ್ಗೊಳ್ಳುವರು.
ಆನಂತರ ಸಂಜೆ 4.30ಕ್ಕೆ ಉತ್ತರ ಕನ್ನಡ ಜಿಲ್ಲೆಯ ಕುಮುಟಾ ತಾಲ್ಲೂಕು ಕಾಗಾಲ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ತರ ಸ್ವರ್ಣ ಸಂಭ್ರಮದಲ್ಲಿ ಪಾಲ್ಗೊಳ್ಳುವರು.
ತದನಂತರ ಮರು ದಿನ ಅಂದರೆ, ಏಪ್ರಿಲ್ 29ರಂದು ಬೆಳಗ್ಗೆ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆಯುವ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವರು
(madhu bangarappa )ಈ ಬಗ್ಗೆ ಸಚಿವ ಮಧು ಬಂಗಾರಪ್ಪರವರ ಆಪ್ತ ಕಾರ್ಯದರ್ಶಿ ಮಾದ್ಯಮ ಪ್ರಕಟಣೆಯಲ್ಲಿ ಪೂರ್ಣ ಮಾಹಿತಿ ತಿಳಿಸಿದ್ದಾರೆ.