ಶಿವಮೊಗ್ಗಕ್ಕೆ ಇಂದು ಸಚಿವ ಮಧು ಬಂಗಾರಪ್ಪ ಆಗಮಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಅವರು ಇವತ್ತು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಅವರ ಪ್ರವಾಸ ಹಾಗೂ ಕಾರ್ಯಕ್ರಮದ ವಿವರಗಳನ್ನು ಗಮನಿಸುವುದಾದರೆ, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಇವತ್ತು ಬೆಳಿಗ್ಗೆ 10 ಗಂಟೆಗೆ ಭದ್ರಾವತಿಗೆ ಆಗಮಿಸಲಿದ್ದಾರೆ. ಅಲ್ಲಿ ಅಗಸನಹಳ್ಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

madhu Bangarappa /ಸಚಿವರ ಕಚೇರಿಯಲ್ಲಿ ಅಹವಾಲು ಸ್ವೀಕಾರ
ಆನಂತೆ ಬೆಳಿಗ್ಗೆ 10.45ಕ್ಕೆ ಸಚಿವರ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸುವರು. 12.30ಕ್ಕೆ ಸಾಗರ ತಾಲ್ಲೂಕು ಕುಗ್ವೆಯಲ್ಲಿ ಈಶ್ವರ ದೇವಸ್ಥಾನ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.