ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಸಮಾವೇಶದಲ್ಲಿ ಮಧು ಬಂಗಾರಪ್ಪರವರ ಮಹತ್ವದ ಮಾತು
Madhu Bangarappa's important speech at the Guarantee Scheme Beneficiaries' Conference
Shivamogga Feb 24, 2024 ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ಕಾಂಗ್ರೆಸ್ ಗ್ಯಾರಂಟಿಗಳ ಫಲಾನುಭವಿಗಳ ಸಮಾವೇಶ ನಡೆಯುತ್ತಿದೆ.ಸಮಾವೇಶದಲ್ಲಿ ಮಾತನಾಡಿದ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ರವರು ನಮ್ಮ ಕಾಂಗ್ರೆಸ್ ಸರ್ಕಾರ ಮುಂದಿನ ಚುನಾವಣೆಯನ್ನು ಗ್ಯಾರಂಟಿ ಯೋಜನೆಗಳ ಆಧಾರದ ಮೇಲೆ ಕೇಳಿ ಎಂದು ಸೂಚಿಸಿದೆ. ಅದೇ ರೀತಿಯಲ್ಲಿ ನಾನು ಚುನಾವಣೆಯ ತಯಾರಿ ನಡೆಸ್ತಿದ್ದೇವೆ..
ಈ ಹಿಂದೆ ಬಿಲ್ ಜಾಸ್ತಿ ಬರುತ್ತಿದೆ , ಲೈಟ್ ಆಫ್ ಮಾಡು ಎನ್ನುತ್ತಿದ್ದರು. ಈಗ ನಿಮ್ಮ ಮನೆಯ ಫ್ಯೂಜ್ ಕಟ್ ಮಾಡುವ ದೈರ್ಯ ಯಾರು ತೋರುತ್ತಿದ್ದಾರೆ. ಅಂತಹದ್ದೊಂದು ಅವಕಾಶವನ್ನು ಸಿದ್ದರಾಮಯ್ಯ ಸರ್ಕಾರ ತಂದುಕೊಟ್ಟಿದ್ದಾರೆ. ಈ ಹಿಂದೆ ಬಂಗಾರಪ್ಪರವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ನೀಡಿದ್ದ ಉಚಿತ ವಿದ್ಯುತ್ ನಿಂದ ರೈತರ ಹೊಲ ಹಸಿರಾಗಿದೆ.
ಇದು ನೀವು ಕೊಟ್ಟಿರುವ ಸರ್ಕಾರ, ಈ ಸರ್ಕಾರಕ್ಕೆ ಬಾಳಿಕೆ ಇಲ್ಲ ಎಂದು ಟೀಕಿಸಿದ್ರು. ಆದರೆ ಇದು ನೀವು ಹೆತ್ತಿರುವ ಸರ್ಕಾರ ಎಂದ ಮಧು ಬಂಗಾರಪ್ಪರವರು, ಈ ಸಲ ಶಿಕ್ಷಣ ಇಲಾಖೆಗೆ 44 ಸಾವಿರ ಕೋಟಿ ರೂಪಾಯಿಯನ್ನ ಸಿದ್ದರಾಮಯ್ಯ ಸರ್ಕಾರ ನೀಡಿದೆ. ಸಿದ್ದರಾಮಯ್ಯ ಸರ್ಕಾರದ ಖಜಾನೆ ಖಾಲಿಯಾಗುವುದಿಲ್ಲ ಎಂದ ಸಚಿವರು ಸಾಹುಕಾರ ಕೈಯಲ್ಲಿ ದುಡ್ಡಿರಬಾರದು, ಸಾಹುಕಾರರ ಕೈಯಲ್ಲಿ ದುಡ್ಡಿದ್ದರೇ ಬ್ಯಾಂಕ್ನಲ್ಲಿ ಇಡುತ್ತಾರೆ, ಬಡವರ ಕೈಗೆ ದುಡ್ಡು ಕೊಟ್ಟರೆ ಅದನ್ನ ವ್ಯಯಿಸುವ ಮೂಲಕ ಸರ್ಕಾರ ನೀಡುತ್ತಾರೆ.
ರಾಜ್ಯದಲ್ಲಿ ಕಮಿಷನ್ ಯುಗ ಮುಗಿದುಹೋಗಿದೆ. ರಾಜ್ಯದ ಯೋಜನೆಗಳ ಹಣವು ನೇರವಾಗಿ ನಿಮ್ಮ ಅಕೌಂಟ್ಗೆ ಬರುತ್ತಿದೆ. ರಾಜ್ಯದಲ್ಲಿ ಐದು ವರ್ಷ ಅಧಿಕಾರಿದಲ್ಲಿ ಇರುತ್ತದೆ. ಗ್ಯಾರಂಟಿಗಳನ್ನ ಒದಗಿಸಿದ ಸರ್ಕಾರಕ್ಕೆ ಹಾಗೂ ಕಾರ್ಯಕ್ರಮಕ್ಕೆ ಆಗಮಿಸಿದ ಡಿಸಿಎಂ ಡಿಕೆ ಶಿವಕುಮಾರ್ರವರಿಗೆ ಧನ್ಯವಾದ ಎಂದರು