ಹೊಸನಗರ: ಖಾಸಗಿ ಬಸ್ ಹಾಗೂ ಲಾರಿ ನಡುವೆ ಭೀಕರ ಅಪಘಾತ :  ಇಬ್ಬರಿಗೆ ಗಂಭೀರ ಗಾಯ

prathapa thirthahalli
Prathapa thirthahalli - content producer

Major Accident

ಶಿವಮೊಗ್ಗ :  ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಸಮೀಪದ ಗುರುಟೆ ಬಳಿ ಇಂದು ಬೆಳಿಗ್ಗೆ ಖಾಸಗಿ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸಾಗರದಿಂದ ಹೊರಟು ನಿಟ್ಟೂರು ಮಾರ್ಗವಾಗಿ ಕುಂದಾಪುರ ಕಡೆಗೆ ಸಾಗುತ್ತಿದ್ದ ಖಾಸಗಿ ಬಸ್, ಎದುರುಗಡೆಯಿಂದ ಬರುತ್ತಿದ್ದ ಲಾರಿಗೆ ತೀವ್ರವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬಸ್‌ನಲ್ಲಿದ್ದ ಇಬ್ಬರು ಪ್ರಯಾಣಿಕರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.

- Advertisement -

ಕೆಎಸ್ಆರ್​​ಟಿಸಿ ಬಸ್​ನಲ್ಲಿ ಟಿಕೆಟ್​ ಮಾಡಿಸಲು ವ್ಯಾನಿಟಿ ಬ್ಯಾಕ್​ ತೆಗೆದ ಮಹಿಳೆಗೆ ಕಾದಿತ್ತು ಶಾಕ್​ 

ಗಾಯಾಳುಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಸ್‌ನಲ್ಲಿದ್ದ ಇತರ ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. 

ಬಸ್​ ಹಾಗೂ ಲಾರಿ ನಡುವೆ ಅಪಘಾತ
ಬಸ್​ ಹಾಗೂ ಲಾರಿ ನಡುವೆ ಅಪಘಾತ

 

 

Share This Article
1 Comment

Leave a Reply

Your email address will not be published. Required fields are marked *