Sunday, 10 Aug 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • SHIMOGA NEWS LIVE
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAY

ಮಾಲೆಗಾಂವ್ ಸ್ಫೋಟ ಪ್ರಕರಣ: ಹಿಂದೂಗಳಿಗೆ ಕಳಂಕ ಹಚ್ಚುವ ಪ್ರಯತ್ನ ವಿಫಲವಾಗಿದೆ : ಆರಗ ಜ್ಞಾನೇಂದ್ರ

prathapa thirthahalli
Last updated: August 1, 2025 1:36 pm
Prathapa thirthahalli - content producer
Share
SHARE

Malegaon Blast Case ಶಿವಮೊಗ್ಗ: 2008ರ ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಹಿಂದೂ ಧರ್ಮಕ್ಕೆ ಕಳಂಕ ಹಚ್ಚುವ ಪ್ರಯತ್ನ ನಡೆದಿತ್ತು, ಆದರೆ ನ್ಯಾಯಾಲಯದ ತೀರ್ಪಿನಿಂದ ಆ ಕಳಂಕ ತೊಲಗಿ ಹಿಂದೂಗಳ ಸಹನೆ ಮತ್ತು ಅಹಿಂಸಾತತ್ವ ಜಗತ್ತಿಗೆ ಗೊತ್ತಾಗಿದೆ ಎಂದು ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಉದ್ದೇಶಪೂರ್ವಕವಾಗಿ ಹಿಂದೂ ಮುಖಂಡರನ್ನು ಬಂಧಿಸಲಾಗಿತ್ತು. ಕಾಂಗ್ರೆಸ್ ಸರ್ಕಾರ ಹಿಂದೂಗಳನ್ನು ಭಯೋತ್ಪಾದಕರು ಎಂದು ಬಿಂಬಿಸುವ ಪ್ರಯತ್ನ ಮಾಡಿತ್ತು. ಆದರೆ ಹಿಂದೂ ಎಂದಿಗೂ ಭಯೋತ್ಪಾದಕ ಆಗಲು ಸಾಧ್ಯವಿಲ್ಲ. ಹಿಂದೂಗಳಿಗೆ ಸಹನೆ ಮತ್ತು ಅಹಿಂಸಾತತ್ವ ರಕ್ತಗತವಾಗಿ ಬಂದಿದೆ” ಎಂದು ಜ್ಞಾನೇಂದ್ರ ಹೇಳಿದರು.

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ಮಾಲೆಗಾಂವ್ ಸ್ಫೋಟದಲ್ಲಿ ಆರು ಮಂದಿ ಮೃತಪಟ್ಟು, ನೂರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಏಳು ಆರೋಪಿಗಳನ್ನು ಸಾಕ್ಷ್ಯಾಧಾರಗಳ ಕೊರತೆಯಿಂದ ನ್ಯಾಯಾಲಯ ಖುಲಾಸೆಗೊಳಿಸಿದೆ. ಈ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ ಮುಸ್ಲಿಂ ಭಯೋತ್ಪಾದನೆಯನ್ನು ಸಹಿಸಿಕೊಂಡಿದೆ ಮತ್ತು ದೇಶದ ಮಾನವನ್ನು ಅಡವಿಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Malegaon Blast Case ಧರ್ಮಸ್ಥಳ ವಿಚಾರದಲ್ಲಿ ಅಧಿಕಾರಿಗಳು ಯಾರ ನಾಟಕಕ್ಕೂ ಬಲಿ ಆಗಬೇಡಿ

ಇದೇ ವೇಳೆ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಕೊಲೆ ಮತ್ತು ಅತ್ಯಾಚಾರ ಪ್ರಕರಣದ ಬಗ್ಗೆಯೂ ಮಾತನಾಡಿದ ಜ್ಞಾನೇಂದ್ರ, ರಾಜ್ಯ ಸರ್ಕಾರದ ಎಸ್ಐಟಿ ತನಿಖೆಯನ್ನು ಸ್ವಾಗತಿಸಿದರು. “ಯಾರು ನಕ್ಸಲರ ಪರ ಇದ್ದರು, ನಗರ ನಕ್ಸಲರು ಆಗಿದ್ದರೋ ಅವರು ಈ ಪ್ರಕರಣದಲ್ಲಿ ಭಾಗಿಯಾಗಿ ಮ್ಯಾನೇಜ್ ಮಾಡಲು ಯತ್ನಿಸುತ್ತಿದ್ದಾರೆ. ಎಸ್ಐಟಿಯಲ್ಲಿರುವ ಪೊಲೀಸ್ ಅಧಿಕಾರಿಗಳು ಒಳ್ಳೆಯವರು. ಅವರು ಈ ನಾಟಕಕ್ಕೆ ಬಲಿಯಾಗದೆ, ಪ್ರಾಮಾಣಿಕವಾಗಿ ತನಿಖೆ ನಡೆಸಿ ಸತ್ಯವನ್ನು ಹೊರಗೆ ತರಬೇಕು” ಎಂದು ಒತ್ತಾಯಿಸಿದರು.

ಧರ್ಮಸ್ಥಳ ಹಿಂದೂಗಳ ದೊಡ್ಡ ಶ್ರದ್ಧಾಕೇಂದ್ರವಾಗಿದ್ದು, ಅದಕ್ಕೆ ಕೆಟ್ಟ ಹೆಸರು ತರುವ ಕುತಂತ್ರ ನಡೆಯುತ್ತಿದೆ. ಹಿಂದೂಗಳ ಭಾವನೆ ಅಳಿಸಲು ಈ ಪ್ರಯತ್ನಗಳು ವಿಫಲವಾಗುತ್ತವೆ. ತನಿಖೆಯಿಂದ ಸತ್ಯ ಹೊರಬರಲಿ, ಮತ್ತು ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂದು ಅವರು ಹೇಳಿದರು.

Malegaon Blast Case ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಾಂಧಿ ಆರೋಪ:

ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಾಂಧಿ ಹೋರಾಟದ ಕುರಿತು ಪ್ರತಿಕ್ರಿಯಿಸಿದ ಜ್ಞಾನೇಂದ್ರ, ಕಾಂಗ್ರೆಸ್ ತನ್ನ ಸೋಲಿಗೆ ನಿಖರ ಕಾರಣಗಳನ್ನು ಹುಡುಕುವ ಬದಲು, ಚುನಾವಣಾ ಆಯೋಗದ ಮೇಲೆ ಗೂಬೆ ಕೂರಿಸುತ್ತದೆ ಎಂದರು.

ಕಾಂಗ್ರೆಸ್ ಸೋತರೆ ಚುನಾವಣಾ ಆಯೋಗ ತಪ್ಪು ಮಾಡಿದೆ, ಗೆದ್ದರೆ ಏನೂ ಹೇಳಲ್ಲ. ಕಾಂಗ್ರೆಸ್ ಪಕ್ಷ ಹೀಗೆ ವರ್ತಿಸುತ್ತಾ ಹೋದರೆ ಜನರಿಂದ ಮತ್ತಷ್ಟು ದೂರವಾಗುತ್ತದೆ” ಎಂದು ಹೇಳಿದರು. ಟ್ರಂಪ್ ಹೇಳಿಕೆಯನ್ನು ರಾಹುಲ್ ಗಾಂಧಿ ಸಮರ್ಥಿಸಿಕೊಂಡಿರುವುದು ವಿಚಿತ್ರ. ರಾಹುಲ್ ಗಾಂಧಿ ದೇಶ ವಿರೋಧಿ ರೀತಿಯಲ್ಲಿಯೇ ಮಾತನಾಡುತ್ತಾರೆ. ಅವರ ನಾಯಕತ್ವದಲ್ಲಿ ಕಾಂಗ್ರೆಸ್ ಮತ್ತಷ್ಟು ದುರ್ಬಲಗೊಳ್ಳುತ್ತದೆ ಎಂದು ಟೀಕಿಸಿದರು.

Malegaon Blast Case
Malegaon Blast Case
TAGGED:Malegaon Blast Case
Share This Article
Facebook Whatsapp Whatsapp Telegram Threads Copy Link
prathapa thirthahalli
ByPrathapa thirthahalli
content producer
Follow:
Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Previous Article Threat case ಜಾಹೀರಾತು ನೋಡಿ 25 ಲಕ್ಷದ ಆಸೆಗೆ ಭದ್ರಾವತಿಯ ವ್ಯಕ್ತಿ ಕಳೆದುಕೊಂಡ ಹಣವೆಷ್ಟು ಗೊತ್ತಾ
Next Article Bjp protest against congress ಶಿವಮೊಗ್ಗದಲ್ಲಿ ಬಿಜೆಪಿ ರೈತ ಮೋರ್ಚಾದ ಪ್ರತಿಭಟನೆ  : ಯಾರೆಲ್ಲಾ ಏನೆಲ್ಲಾ ಹೇಳಿದ್ರು
Leave a Comment

Leave a Reply Cancel reply

Your email address will not be published. Required fields are marked *

You Might Also Like

SHIVAMOGGA NEWS TODAY

ಸೂಕ್ತ ವಧುವರರನ್ನು ಆಯ್ಕೆ ಮಾಡಿಕೊಳ್ಳಲು ಇಲ್ಲಿದೆ ಸುವರ್ಣವಕಾಶ ಸೇರಿದಂತೆ ಟಾಪ್‌ 5 ಚಟ್‌ ಪಟ್‌ ಸುದ್ದಿ

By 131

ಚಿತ್ರದುರ್ಗ, ಶಿವಮೊಗ್ಗದ ಮೂವರಿಗೆ ಕುವೆಂಪು ವಿವಿಯಿಂದ PHD ಪದವಿ

By 13
Malegaon blast
SHIVAMOGGA NEWS TODAY

ಹಿಂದೂ ರಾಷ್ಟ್ರಕ್ಕೆ ಕಾಂಗ್ರೆಸ್ ಪಕ್ಷ ಕ್ಷಮೆಯಾಚಿಸಬೇಕು -ಶಾಸಕ ಎಸ್.ಎನ್. ಚನ್ನಬಸಪ್ಪ

By Prathapa thirthahalli
mescom lineman video
SHIVAMOGGA NEWS TODAY

mescom lineman video ಜುಲೈ 05 : ಮಳೆ ನಡುವೆ ಕೆರೆಯ ಮಧ್ಯೆ ವಿದ್ಯುತ್ ಕಂಬ ದುರಸ್ತಿ: ಮೆಸ್ಕಾಂ ಸಿಬ್ಬಂದಿಗಳ ಸಾಹಸಕ್ಕೆ ಎಲ್ಲೆಡೆ ಮೆಚ್ಚುಗೆ

By Prathapa thirthahalli
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up