SHIMOGA NEWS LIVE

ರಾಘವೇಂದ್ರ ಸ್ವಾಮಿ ಮಠದ ಸಮೀಪ, ಮರವೊಂದರಲ್ಲಿ ನೇತಾಡುತ್ತಿತ್ತು ಯುವಕನ ಮೃತದೇಹ! ಜೊತೆಯಲ್ಲಿತ್ತು 1 ಲೆಟರ್​

ajjimane ganesh ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ / ನಗರದ ಪಾರ್ಕ್ ಬಡಾವಣೆಯ ರಸ್ತೆ ಬದಿಯಿರುವ ಮರವೊಂದಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಯುವಕನೊಬ್ಬನ ಮೃತದೇಹ ಪತ್ತೆಯಾಗಿದೆ. ನಿನ್ನೆ ದಿನ ಅಂದರೆ ಏಪ್ರಿಲ್ 12, 2026 ರಂದು ಮಧ್ಯಾಹ್ನ ಈ ವಿಚಾರ ಗೊತ್ತಾಗಿದೆ. ಸ್ಥಳದಲ್ಲಿ ಡೆತ್ ನೋಟ್ ಕೂಡ ಲಭ್ಯವಾಗಿದ್ದು, ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಘವೇಂದ್ರ ಸ್ವಾಮಿ ಮಠದ ಸಮೀಪ ಘಟನೆ

ಮೃತ ಯುವಕನನ್ನು ಹರಮಘಟ್ಟ ಮೂಲದ ದೇವರಾಜ್ (34) ಎಂದು ಗುರುತಿಸಲಾಗಿದೆ. ಮಥುರಾ ಪ್ಯಾರಡೈಸ್ ರಸ್ತೆಯ ಪಕ್ಕದಲ್ಲಿರುವ ಮರದ ಕೊಂಬೆಯೊಂದಕ್ಕೆ ಯುವಕ ನೇಣಿಗೆ ಶರಣಾಗಿದ್ದಾನೆ. ಮರದ ಎಲೆಗಳು ದಟ್ಟವಾಗಿದ್ದರಿಂದ ವಿಚಾರ ತಡವಾಗಿ ಗೊತ್ತಾಗಿದೆ. ಪುಟ್ ಪಾತ್ ಮೇಲೆ ತೆರಳುತ್ತಿದ್ದವರು ಶವ ನೇತಾಡುತ್ತಿರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿಯನ್ನು ರವಾನಿಸಿದ್ದರು.

ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಕೆಳಕ್ಕೆ ಇಳಿಸಿದ್ದಾರೆ. ಪಂಚನಾಮೆ ಮುಗಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಇನ್ನೂ ಈ ಪರಿಶೀಲನೆ ವೇಳೆ ಯುವಕ ಬರೆದಿದ್ದಾನೆನ್ನಲಾದ ಡೆತ್ ನೋಟ್ ಪತ್ತೆಯಾಗಿದ್ದು, ಅದರಲ್ಲಿ ಸಾವು ಮಹಾಪಾಪ ಆದರೂ ಸಾಯ್ತಾಯಿದ್ದೀನಿ ಅಮ್ಮ ಮಿಸ್ ಯು ಎಂದು ಬರೆಯಲಾಗಿದೆ ಎಂಬ ಮಾಹಿತಿಯು ಲಭ್ಯವಾಗಿದೆ. ಜಯನಗರ ಪೊಲೀಸ್ ಠಾಣೆ ಸಿಬ್ಬಂದಿ ಹೆಚ್ಚಿನ ತನಿಖೆ ನಡೆಸ್ತಿದ್ದಾರೆ.

Young Man Found Hanging in Shivamogga Park Layout ರಾಘವೇಂದ್ರ ಸ್ವಾಮಿ ಮಠದ ಸಮೀಪ, ಮರವೊಂದರಲ್ಲಿ ನೇತಾಡುತ್ತಿತ್ತು ಯುವಕನ ಮೃತದೇಹ! ಜೊತೆಯಲ್ಲಿತ್ತು 1 ಲೆಟರ್​
Young Man Found Hanging in Shivamogga Park Layout ರಾಘವೇಂದ್ರ ಸ್ವಾಮಿ ಮಠದ ಸಮೀಪ, ಮರವೊಂದರಲ್ಲಿ ನೇತಾಡುತ್ತಿತ್ತು ಯುವಕನ ಮೃತದೇಹ! ಜೊತೆಯಲ್ಲಿತ್ತು 1 ಲೆಟರ್​
ನಮ್ಮ ಮಲೆನಾಡು ಟುಡೆಯ ವಿಡಿಯೋಗಳನ್ನು ನೀವಿಲ್ಲಿ ನೋಡಬಹುದು: https://www.youtube.com/shorts/x8I63rpLvyw

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ajjimane ganesh

ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯರ್​​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ