ಮೊಬೈಲ್ನಲ್ಲಿ ಫೋಟೋ ತೆಗೆದು, ಟಾರ್ಚ್ರ್ ಕೊಟ್ಟ ಯುವಕನಿಗೆ 1 ವರ್ಷ ಕಠಿಣ ಶಿಕ್ಷೆ! ಎಚ್ಚರ ಯುವಕರೇ?
Man sentenced to 1 year's rigorous imprisonment for harassing him after taking photos on mobile phone Beware young people?
KARNATAKA NEWS/ ONLINE / Malenadu today/ May 3, 2023 GOOGLE NEWS
ಶಿವಮೊಗ್ಗ/ ಮನಸ್ಸಿನ ಹುಚ್ಚು ಆಲಾಪಗಳಲ್ಲಿ ಮಾಡುವ ವಿಕೃತಿ, ಭವಿಷ್ಯ ಕಟ್ಟಿಕೊಳ್ಳಬೇಕಾದ ಬದುಕನ್ನ ಸೆರೆವಾಸ ಅನುಭವಿಸುವಂತೆ ಮಾಡುತ್ತದೆ. ಇದಕ್ಕೆ ಸಾಕ್ಷಿ ಎಂಬಂತೆ 24 ವರ್ಷದ ಯುವಕನಿಗೆ ಶಿವಮೊಗ್ಗ ಕೋರ್ಟ್ ಒಂದು ವರ್ಷ ಕಠಿಣ ಶಿಕ್ಷೆ ವಿಧಿಸಿದೆ.
ಓದಿ : ನಾನೊಬ್ಬ ಬಜರಂಗಿ: ಕಾಂಗ್ರೆಸ್ ವಿರುದ್ಧ ಬಿಜೆಪಿ ‘ಬ್ಯಾನ್ ಅಸ್ತ್ರ’ ಶುರುವಾಯ್ತು ನಾಯಿ ಬಿಡುವ ಅಭಿಯಾನ!
ಏನಿದು ಪ್ರಕರಣ
2019 ನೇ ಸಾಲಿನಲ್ಲಿ ಶಿವಮೊಗ್ಗದ ಮಹಿಳಾ ಪೊಲೀಸ್ ಸ್ಟೇಷನ್ (shivamogga woman police station) ನಲ್ಲಿ ಕೇಸ್ವೊಂದು ದಾಖಲಾಗಿತ್ತು. 24 ವರ್ಷದ ಯುವಕನೊಬ್ಬ, ತನ್ನ ಮೊಬೈಲ್ ನಲ್ಲಿ 14 ವರ್ಷದ ಅಪ್ರಾಪ್ತೆಯ ಅಶ್ಲೀಲ ಫೋಟೋ ತೆಗೆದು, ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದ ಎಂಬುದು ಆರೋಪವಾಗಿತ್ತು. ಈ ಸಂಬಂಧ ಬಾಲಕಿಯೇ ದೂರುಕೊಟ್ಟಿದ್ದರು
ಓದಿ : BREAKING NEWS / ಪ್ರಯಾಣಿಕರ ಗಮನಕ್ಕೆ ಇವತ್ತು ಕೆಎಸ್ಆರ್ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ! ಕಾರಣ ಇಲ್ಲಿದೆ
ಅವತ್ತಿನ ತನಿಖಾಧಿಕಾರಿ ಅಭಯ್ ಪ್ರಕಾಶ್ ಸೋಮನಾಳ್,ಪಿಐ, ಪ್ರಕರಣದ ತನಿಖೆ ನಡೆಸಿ, ಕೋರ್ಟ್ಗೆ ಚಾರ್ಜ್ ಶೀಟ್ ಸಲ್ಲಿಸಿದ್ರು. ಇನ್ನೂ ಕೋರ್ಟ್ನಲ್ಲಿ ಸರ್ಕಾರದ ಪರವಾಗಿ ಹರಿಪ್ರಸಾದ್ ರವರು ವಾದ ಮಂಡಿಸಿದ್ರು.
ಇದೀಗ The Addl District and Sessions Court, FTSC–II (POCSO) Shivamogga ಕೋರ್ಟ್ ತೀರ್ಪು ನೀಡಿದೆ. ನ್ಯಾಯಾಧೀಶರು ಆರೋಪಿತನಿಗೆ 01 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು 3,01,000/- ರೂ ದಂಡ ವಿಧಿಸಿ ಆದೇಶ ನೀಡಿದ್ದಾರೆ.
ಸಾಗರ ಪೇಟೆಯಲ್ಲಿ ಬೈಕ್ನಲ್ಲಿ ಹೋಗುತ್ತಿದ್ದ ಮಹಿಳೆಗೆ ಲಾರಿ ಡಿಕ್ಕಿ
ಸಾಗರ/ ಶಿವಮೊಗ್ಗ ಬೃಹತ್ ಲಾರಿಯ ಚಕ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ಸಂಭವಿಸಿದೆ. ನಿನ್ನೆ ಬೆಳಗ್ಗೆ ಸಾಗರ ಪೇಟೆಯ ಐಬಿ ವೃತ್ತದ ಸಮೀಪ ಈ ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಬೆಳಲಮಕ್ಕಿ ನಿವಾಸಿಯೊಬ್ಬರು ಸಾವನ್ನಪ್ಪಿದ್ದಾರೆ.
ಹೇಗಾಯ್ತು ಘಟನೆ
ಬೈಕ್ನಲ್ಲಿ ಸಂಬಂಧಿಕರ ಜೊತೆ ಹೋಗುತ್ತಿದ್ದ ಮಹಿಳೆಗೆ, ಲಾರಿಯು ಡಿಕ್ಕಿಯಾಗಿದೆ. ಪರಿಣಾಮ ಅವರು ಕೆಳಕ್ಕೆ ಬಿದ್ದಿದ್ದಾರೆ. ಈ ವೇಳೆ ಲಾರಿ ಚಕ್ರವೂ ಮಹಿಳೆಯ ಮೇಲೆ ಹರಿದಿದೆ. ತಕ್ಷಣವೇ ಅಲ್ಲಿದ್ದವರು ಮಹಿಳೆಯನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಸಾವನ್ನಪ್ಪಿದ್ದಾರೆ.
ಘಟನೆ ಸಂಬಂದ ಸಾಗರ ಟೌನ್ ಪೊಲೀಸ್ (sagara town police) ಕೇಸ್ ದಾಖಲಿಸಿಕೊಂಡಿದ್ದು, ಚಾಲಕನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸ್ತಿದ್ಧಾರೆ.
ಒಂದೇ ಕೇಸ್ನಲ್ಲಿ ಆರೋಪಿಗೆ 20 ವರ್ಷ ಶಿಕ್ಷೆ ವಿಧಿಸಿದ ಶಿವಮೊಗ್ಗ ಕೋರ್ಟ್ ! ಕಾರಣ ಗೊತ್ತಾ?
ಭದ್ರಾವತಿ/ ಶಿವಮೊಗ್ಗ ತನಗಿಂತ 20 ವರ್ಷ ಕಡಿಮೆ ವಯಸ್ಸಿನ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿಯಲ್ಲಿ, ಭದ್ರಾವತಿಯ ವ್ಯಕ್ತಿಯೊಬ್ಬರಿಗೆ ಕೋರ್ಟ್ ಬರೋಬ್ಬರಿ 20 ವರ್ಷ ಶಿಕ್ಷೆ ವಿಧಿಸಿದೆ.
ಏನಿದು ಕೇಸ್
2019 ನೇ ಸಾಲಿನಲ್ಲಿ ಭದ್ರಾವತಿ ತಾಲ್ಲೂಕಿನ 33 ವರ್ಷದ ವ್ಯಕ್ತಿಯೊಬ್ಬ, 13 ವರ್ಷದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ್ದ. ಈ ಸಂಬಂಧ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆನಂತರ ಕೇಸ್ನ ತನಿಖೆ ಕೈಗೊಂಡ ಭದ್ರಾವತಿ ಗ್ರಾಮಾಂತರ ವೃತ್ತದ ಸಿಪಿಐ ಮಂಜುನಾಥ್ ಆರೋಪಿ ವಿರುದ್ಧ ಕೋರ್ಟ್ ಚಾರ್ಜ್ ಶೀಟ್ ಸಲ್ಲಿಸಿದ್ರು.
ಸದ್ಯ ಈ ಕೇಸ್ನ ವಿಚಾರಣೆ ನಡೆದು The Addl District and Sessions Court, FTSC–II (POCSO) Shivamogga ನ್ಯಾಯಾಲಯ ತೀರ್ಪು ನೀಡಿದೆ.
ಏನು ಶಿಕ್ಷೆ ?
ನ್ಯಾಯಾಧೀಶರು ದಿನಾಂಕ: 02-05-2023ರಂದು ಆರೋಪಿಗೆ ಶಿಕ್ಷೆ ವಿಧಿಸಿದ್ದು 20 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು 20,000/- ರೂ ದಂಡ, ದಂಡವನ್ನು ಕಟ್ಟಲು ವಿಫಲನಾದರೆ ಹೆಚ್ಚುವರಿಯಾಗಿ 06 ತಿಂಗಳು ಸಾದಾ ಕಾರವಾಸ ಶಿಕ್ಷೆ ನೀಡಿ ಆದೇಶ ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಹರಿಪ್ರಸಾದ್ ವಾದ ಮಂಡಿಸಿದ್ರು.
Malenadutoday.com Social media