ಮೊಬೈಲ್​ನಲ್ಲಿ ಫೋಟೋ ತೆಗೆದು, ಟಾರ್ಚ್​ರ್​ ಕೊಟ್ಟ ಯುವಕನಿಗೆ 1 ವರ್ಷ ಕಠಿಣ ಶಿಕ್ಷೆ! ಎಚ್ಚರ ಯುವಕರೇ?

Man sentenced to 1 year's rigorous imprisonment for harassing him after taking photos on mobile phone Beware young people?

ಮೊಬೈಲ್​ನಲ್ಲಿ ಫೋಟೋ ತೆಗೆದು, ಟಾರ್ಚ್​ರ್​ ಕೊಟ್ಟ ಯುವಕನಿಗೆ 1 ವರ್ಷ ಕಠಿಣ ಶಿಕ್ಷೆ! ಎಚ್ಚರ ಯುವಕರೇ?

KARNATAKA NEWS/ ONLINE / Malenadu today/ May 3, 2023 GOOGLE NEWS


ಶಿವಮೊಗ್ಗ/ ಮನಸ್ಸಿನ ಹುಚ್ಚು ಆಲಾಪಗಳಲ್ಲಿ ಮಾಡುವ ವಿಕೃತಿ, ಭವಿಷ್ಯ ಕಟ್ಟಿಕೊಳ್ಳಬೇಕಾದ ಬದುಕನ್ನ ಸೆರೆವಾಸ ಅನುಭವಿಸುವಂತೆ ಮಾಡುತ್ತದೆ. ಇದಕ್ಕೆ ಸಾಕ್ಷಿ ಎಂಬಂತೆ 24 ವರ್ಷದ ಯುವಕನಿಗೆ ಶಿವಮೊಗ್ಗ ಕೋರ್ಟ್  ಒಂದು ವರ್ಷ ಕಠಿಣ ಶಿಕ್ಷೆ ವಿಧಿಸಿದೆ. 

ಓದಿ :  ನಾನೊಬ್ಬ ಬಜರಂಗಿ: ಕಾಂಗ್ರೆಸ್ ವಿರುದ್ಧ ಬಿಜೆಪಿ  ‘ಬ್ಯಾನ್​ ಅಸ್ತ್ರ’ ಶುರುವಾಯ್ತು ನಾಯಿ ಬಿಡುವ ಅಭಿಯಾನ!

ಏನಿದು ಪ್ರಕರಣ

2019 ನೇ ಸಾಲಿನಲ್ಲಿ ಶಿವಮೊಗ್ಗದ ಮಹಿಳಾ ಪೊಲೀಸ್ ಸ್ಟೇಷನ್​ (shivamogga woman police station) ನಲ್ಲಿ ಕೇಸ್​ವೊಂದು ದಾಖಲಾಗಿತ್ತು.  24 ವರ್ಷದ  ಯುವಕನೊಬ್ಬ, ತನ್ನ ಮೊಬೈಲ್  ನಲ್ಲಿ 14 ವರ್ಷದ ಅಪ್ರಾಪ್ತೆಯ ಅಶ್ಲೀಲ  ಫೋಟೋ  ತೆಗೆದು,  ಆಕೆಗೆ ಲೈಂಗಿಕ  ಕಿರುಕುಳ ನೀಡಿದ್ದ ಎಂಬುದು ಆರೋಪವಾಗಿತ್ತು. ಈ ಸಂಬಂಧ ಬಾಲಕಿಯೇ ದೂರುಕೊಟ್ಟಿದ್ದರು 

ಓದಿ : BREAKING NEWS /  ಪ್ರಯಾಣಿಕರ ಗಮನಕ್ಕೆ ಇವತ್ತು ಕೆಎಸ್​ಆರ್​ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ! ಕಾರಣ ಇಲ್ಲಿದೆ 

ಅವತ್ತಿನ ತನಿಖಾಧಿಕಾರಿ ಅಭಯ್ ಪ್ರಕಾಶ್ ಸೋಮನಾಳ್,ಪಿಐ, ಪ್ರಕರಣದ ತನಿಖೆ ನಡೆಸಿ, ಕೋರ್ಟ್​ಗೆ ಚಾರ್ಜ್ ಶೀಟ್​ ಸಲ್ಲಿಸಿದ್ರು. ಇನ್ನೂ ಕೋರ್ಟ್​ನಲ್ಲಿ ಸರ್ಕಾರದ ಪರವಾಗಿ ಹರಿಪ್ರಸಾದ್ ರವರು ವಾದ ಮಂಡಿಸಿದ್ರು. 

ಇದೀಗ  The Addl District and Sessions Court, FTSC–II (POCSO) Shivamogga  ಕೋರ್ಟ್ ತೀರ್ಪು ನೀಡಿದೆ.  ನ್ಯಾಯಾಧೀಶರು  ಆರೋಪಿತನಿಗೆ 01 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು 3,01,000/- ರೂ ದಂಡ ವಿಧಿಸಿ  ಆದೇಶ ನೀಡಿದ್ದಾರೆ. 


ಸಾಗರ ಪೇಟೆಯಲ್ಲಿ ಬೈಕ್​ನಲ್ಲಿ ಹೋಗುತ್ತಿದ್ದ ಮಹಿಳೆಗೆ ಲಾರಿ ಡಿಕ್ಕಿ

ಸಾಗರ/ ಶಿವಮೊಗ್ಗ  ಬೃಹತ್​ ಲಾರಿಯ ಚಕ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿ ಸಂಭವಿಸಿದೆ. ನಿನ್ನೆ ಬೆಳಗ್ಗೆ ಸಾಗರ ಪೇಟೆಯ ಐಬಿ ವೃತ್ತದ ಸಮೀಪ ಈ ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಬೆಳಲಮಕ್ಕಿ ನಿವಾಸಿಯೊಬ್ಬರು ಸಾವನ್ನಪ್ಪಿದ್ದಾರೆ. 



ಹೇಗಾಯ್ತು ಘಟನೆ

ಬೈಕ್​ನಲ್ಲಿ ಸಂಬಂಧಿಕರ ಜೊತೆ ಹೋಗುತ್ತಿದ್ದ ಮಹಿಳೆಗೆ, ಲಾರಿಯು ಡಿಕ್ಕಿಯಾಗಿದೆ. ಪರಿಣಾಮ ಅವರು ಕೆಳಕ್ಕೆ ಬಿದ್ದಿದ್ದಾರೆ. ಈ ವೇಳೆ ಲಾರಿ ಚಕ್ರವೂ ಮಹಿಳೆಯ ಮೇಲೆ ಹರಿದಿದೆ. ತಕ್ಷಣವೇ ಅಲ್ಲಿದ್ದವರು ಮಹಿಳೆಯನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಸಾವನ್ನಪ್ಪಿದ್ದಾರೆ. 





ಘಟನೆ ಸಂಬಂದ ಸಾಗರ ಟೌನ್ ಪೊಲೀಸ್ (sagara town police) ಕೇಸ್​ ದಾಖಲಿಸಿಕೊಂಡಿದ್ದು, ಚಾಲಕನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸ್ತಿದ್ಧಾರೆ. 

 


ಒಂದೇ ಕೇಸ್​ನಲ್ಲಿ ಆರೋಪಿಗೆ 20 ವರ್ಷ ಶಿಕ್ಷೆ ವಿಧಿಸಿದ ಶಿವಮೊಗ್ಗ ಕೋರ್ಟ್ ! ಕಾರಣ ಗೊತ್ತಾ?

ಭದ್ರಾವತಿ/ ಶಿವಮೊಗ್ಗ ತನಗಿಂತ 20 ವರ್ಷ ಕಡಿಮೆ ವಯಸ್ಸಿನ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿಯಲ್ಲಿ, ಭದ್ರಾವತಿಯ ವ್ಯಕ್ತಿಯೊಬ್ಬರಿಗೆ ಕೋರ್ಟ್​ ಬರೋಬ್ಬರಿ 20 ವರ್ಷ ಶಿಕ್ಷೆ ವಿಧಿಸಿದೆ. 

ಏನಿದು ಕೇಸ್​

2019 ನೇ ಸಾಲಿನಲ್ಲಿ ಭದ್ರಾವತಿ ತಾಲ್ಲೂಕಿನ 33 ವರ್ಷದ ವ್ಯಕ್ತಿಯೊಬ್ಬ, 13 ವರ್ಷದ ಅಪ್ರಾಪ್ತೆಗೆ  ಲೈಂಗಿಕ ಕಿರುಕುಳ ನೀಡಿದ್ದ. ಈ ಸಂಬಂಧ  ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 

ಆನಂತರ ಕೇಸ್​ನ ತನಿಖೆ ಕೈಗೊಂಡ ಭದ್ರಾವತಿ ಗ್ರಾಮಾಂತರ ವೃತ್ತದ ಸಿಪಿಐ ಮಂಜುನಾಥ್​  ಆರೋಪಿ ವಿರುದ್ಧ  ಕೋರ್ಟ್​ ಚಾರ್ಜ್ ಶೀಟ್​ ಸಲ್ಲಿಸಿದ್ರು.  

ಸದ್ಯ ಈ ಕೇಸ್​ನ ವಿಚಾರಣೆ ನಡೆದು  The Addl District and Sessions Court, FTSC–II (POCSO) Shivamogga ನ್ಯಾಯಾಲಯ ತೀರ್ಪು ನೀಡಿದೆ. 

ಏನು ಶಿಕ್ಷೆ ?

ನ್ಯಾಯಾಧೀಶರು ದಿನಾಂಕ: 02-05-2023ರಂದು ಆರೋಪಿಗೆ ಶಿಕ್ಷೆ ವಿಧಿಸಿದ್ದು 20 ವರ್ಷ ಕಠಿಣ ಕಾರಾವಾಸ ಶಿಕ್ಷೆ ಮತ್ತು 20,000/- ರೂ ದಂಡ, ದಂಡವನ್ನು ಕಟ್ಟಲು ವಿಫಲನಾದರೆ ಹೆಚ್ಚುವರಿಯಾಗಿ 06 ತಿಂಗಳು ಸಾದಾ ಕಾರವಾಸ ಶಿಕ್ಷೆ ನೀಡಿ  ಆದೇಶ ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಹರಿಪ್ರಸಾದ್ ವಾದ ಮಂಡಿಸಿದ್ರು. 


Malenadutoday.com Social media