SHIVAMOGGA | MALENADUTODAY NEWS
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ
Sep 12, 2024 mani dam full
ಶಿವಮೊಗ್ಗದ ಜಲಾಶಯಗಳು ಈಗಾಗಲೇ ಭರ್ತಿಯಾಗಿ ನದಿಗಳಿಗೆ ನೀರನ್ನ ಬಿಡುಗಡೆ ಮಾಡಲಾಗುತ್ತಿದೆ. ಇದರ ನಡುವೆ ಹೊಸನಗರದ ಮಾಣಿ ಜಲಾಶಯ ಕೂಡ ಭರ್ತಿಯಾಗಿದ್ದು, ಇದೀಗ ನದಿಗೆ ನೀರು ಬಿಡುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಕೆಪಿಸಿಎಲ್ ಹೊಸನಗರ ವಿಭಾಗ ಅಂತಿಮ ಮುನ್ನೆಚ್ಚರಿಕೆಯನ್ನ ನೀಡಿದೆ. ಈ ಸಂಬಂಧ ಪ್ರಕಟಣೆಯನ್ನ ಹೊರಡಿಸಿದೆ.
ಏನಿದೆ ಕೆಪಿಸಿಎಲ್ ಪ್ರಕಟಣೆಯಲ್ಲಿ? Kpcl announcement
ವರಾಹಿ ಯೋಜನೆಯ ಮಾಣಿ ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆಯಾಗುತ್ತಿದ್ದು ಜಲಾಶಯಕ್ಕೆ ಹೇರಳವಾಗಿ ನೀರು ಹರಿದು ಬರುತ್ತಿದೆ. ಸತತವಾಗಿ ಬೀಳುತ್ತಿರುವ ಮಳೆಯಿಂದ ಜಲಾಶಯದ ನೀರಿನ ಮಟ್ಟವು ಏಕಪ್ರಕಾರವಾಗಿ ಏರುತ್ತಿದೆ.

ಮಾಣಿ ಜಲಾಶಯದ ಗರಿಷ್ಟ ಮಟ್ಟವು 594.36 ಮೀಟರ್ ಆಗಿದ್ದು ಮತ್ತು ಈಗಿನ ಜಲಾಶಯದ ಮಟ್ಟವು ದಿನಾಂಕ:12.09.2024 ರಂದು ಬೆಳಗ್ಗೆ 8:00 ಘಂಟೆಗೆ 591.90 (85.16%) ಮೀಟರ್ಗಳಾಗಿರುತ್ತದೆ.
ಈ ದಿನದ ಮಾಣಿ ಜಲಾಶಯದ ಒಳಹರಿವು ಸುಮಾರು 2462 ಕ್ಯುಸೆಕ್ಸ್ ಆಗಿರುತ್ತದೆ. ಇದೇ ರೀತಿ ಜಲಾಶಯಕ್ಕೆ ಒಳಹರಿವು ಮುಂದುವರೆದ ಪಕ್ಷದಲ್ಲಿ, ಜಲಾಶಯವು ಗರಿಷ್ಠ ಮಟ್ಟವನ್ನು ತಲುಪುವ ಸಾಧ್ಯತೆಯಿರುತ್ತದೆ.
ಮಾಣಿ ಅಣೆಕಟ್ಟಿನ ಸುರಕ್ಷತಾ ದೃಷ್ಟಿಯಿಂದ ಯಾವುದೇ ಸಮಯದಲ್ಲಿ ಹೆಚ್ಚಾದ ನೀರನ್ನು ಹೊರಬಿಡಲಾಗುವುದು. ಆದ್ದರಿಂದ, ಅಣೆಕಟ್ಟೆಯ ಕೆಳದಂಡೆಯಲ್ಲಿ ಹಾಗೂ ವರಾಹಿ/ಹಾಲಾಡಿ ನದಿಯ ಪಾತ್ರದುದ್ದಕ್ಕೂ ವಾಸಿಸುತ್ತಿರುವ ಸಾರ್ವಜನಿಕರು ತಮ್ಮ ಜನ, ಜಾನುವಾರು ವಗೈರೆಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಿಕೊಳ್ಳಬೇಕೆಂದು ಹಾಗೂ ಪ್ರವಾಸಿಗರು ಅನಗತ್ಯವಾಗಿ ನದಿಗೆ ಇಳಿಯಬಾರದೆಂದು ಈ ಮೂಲಕ ತಿಳಿಸಲಾಗಿದೆ.
weekly astrology kannada | ವಾರದ ಭವಿಷ್ಯ | ಈ ವಾರ ಈ ರಾಶಿಗಳಿಗೆ ವಿಶೇಷ ಸುದ್ದಿ
naga yakshi mata | ಸಾಮಾನ್ಯ ಸಾಧುವಾಗಿದ್ದು ಹೇಗೆ? ಶಿವಮೊಗ್ಗದ ನಿಗೂಢ ಅವಧೂತ ! JP ಬರೆಯುತ್ತಾರೆ
ನಿಮ್ಮ ವಾಟ್ಸಾಪ್ನಲ್ಲಿ ನೋಡಿ, ಜಸ್ಟ್ ಒಂದು ಫಾಲೋ ಕೊಡಿ