ಶಿಕಾರಿಪುರ: ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ಮೆಸ್ಕಾಂ ಸಿಬ್ಬಂದಿಯೊಬ್ಬರು ಸಾವನ್ನಪ್ಪಿರುವ ಘಟನೆ ಶಿಕಾರಿಪುರ ಪಟ್ಟಣದಲ್ಲಿ ಸಂಭವಿಸಿದೆ . ಮೃತರನ್ನು 52 ವರ್ಷದ ಹರೀಶ್ ಎಂದು ಗುರುತಿಸಲಾಗಿದೆ.
ಶಿವಮೊಗ್ಗ: ಜಿಲ್ಲೆಯ ಮೂವರಿಗೆ 2025ನೇ ಸಾಲಿನ ಮುಖ್ಯಮಂತ್ರಿ ಪದಕ ಘೋಷಣೆ!
ಶನಿವಾರ ಶಿಕಾರಿಪುರ ಪಟ್ಟಣದಾದ್ಯಂತ ಸುರಿದ ಭಾರೀ ಮಳೆಗೆ ಶಿವಮೊಗ್ಗ ರಸ್ತೆಯಲ್ಲಿರುವ ಕೆಇಬಿ ಸ್ಟೇಷನ್ ಮುಂಭಾಗದಲ್ಲಿ ವಿದ್ಯುತ್ ತಂತಿಯೊಂದು ತುಂಡಾಗಿ ಬಿದ್ದಿತ್ತು . ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ತುಂಡಾದ ತಂತಿಯನ್ನು ಸರಿಪಡಿಸಲು ಹರೀಶ್ ಅವರು ಮುಂದಾಗಿದ್ದರು. ಆದರೆ, ದುರಸ್ತಿ ಕಾರ್ಯದ ನಡುವೆ ಹಠಾತ್ತನೆ ವಿದ್ಯುತ್ ಪ್ರವಹಿಸಿದ್ದರಿಂದ ಗಂಭೀರವಾಗಿ ಗಾಯಗೊಂಡಿದ್ದರು.
ವಿದ್ಯುತ್ ಶಾಕ್ನಿಂದ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣವೇ ಸ್ಥಳದಲ್ಲಿದ್ದ ಸಹೋದ್ಯೋಗಿಗಳು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು . ಆದರೆ, ಚಿಕಿತ್ಸೆಯು ಫಲಕಾರಿಯಾಗದೆ ಹರೀಶ್ ಅವರು ಕೊನೆಯುಸಿರೆಳೆದಿದ್ದಾರೆ.
MESCOM Lineman Electrocuted in Shikaripura


