SHIVAMOGGA NEWS TODAY

ಶಿವಮೊಗ್ಗ :  ಶಾಸಕ ರಿಜ್ವಾನ್ ಅರ್ಷದ್‌ಗೆ ಸಚಿವ ಸ್ಥಾನಕ್ಕಾಗಿ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

Minister Post ಶಿವಮೊಗ್ಗ: ಕಾಂಗ್ರೆಸ್ ಪಕ್ಷದ ಬೆಂಗಳೂರಿನ ಶಿವಾಜಿನಗರ ವಿಧಾನ ಸಭಾ ಕ್ಷೇತ್ರದ ಶಾಸಕ  ರಿಜ್ವಾನ್ ಅರ್ಷದ್ ಅವರಿಗೆ ರಾಜ್ಯ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಹೈಕಮಾಂಡ್‌ಗೆ ಮನವಿ ಸಲ್ಲಿಸುವ ನಿಟ್ಟಿನಲ್ಲಿ ಅವರ ಅಭಿಮಾನಿಗಳು ಶಿವಮೊಗ್ಗದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಶಿವಮೊಗ್ಗದ ಹಜ್ರತ್ ಸೈಯದ್ ಷಾ ಅಲೀಂ ದೀವಾನ್ ಷಾ ಖಾದ್ರಿ ದರ್ಗಾದಲ್ಲಿ ಶಾಸಕರ ಬೆಂಬಲಿಗರು ಭಕ್ತಿಯಿಂದ ಪ್ರಾರ್ಥನೆ ಸಲ್ಲಿಸಿದರು.

ಶಿವಮೊಗ್ಗ ವಿಮಾನ ನಿಲ್ದಾಣಶಿವಮೊಗ್ಗ ಏರ್​ಪೋರ್ಟ್​ ವಿಶ್ವೇಶ್ವರ್​ ಭಟ್​ Facebook post ,ಷೇರ್ ಮಾಡಿ ರಿಪ್ಲೆ ನೀಡಿದ ಸಂಸದ

ರಿಜ್ವಾನ್ ಅರ್ಷಾದ್ ಅಭಿಮಾನಿ ಬಳಗದ ಅಧ್ಯಕ್ಷರಾದ ಮೊಹಮ್ಮದ್ ಅರಿಫ್ ಉಲ್ಲಾ ಅವರ ನೇತೃತ್ವದಲ್ಲಿ ಅನೇಕ ಕಾರ್ಯಕರ್ತರು ಮತ್ತು ಅಭಿಮಾನಿಗಳು, ತಮ್ಮ ನೆಚ್ಚಿನ ನಾಯಕನಿಗೆ ಶೀಘ್ರದಲ್ಲೇ ಮಂತ್ರಿ ಭಾಗ್ಯ ಸಿಗಲಿ ಎಂದು ದರ್ಗಾಕ್ಕೆ ಪವಿತ್ರ ಘಲಪ್ ಹೊದಿಸಿ ಹರಕೆ ನೇರವೇರಿಸಿದರು.

ರಿಜ್ವಾನ್ ಅರ್ಷದ್ ಅವರು ಆರಂಭದಿಂದಲೂ ಪಕ್ಷದ ಸಿದ್ಧಾಂತಕ್ಕೆ ಬದ್ಧರಾಗಿ ದುಡಿದಿದ್ದಾರೆ. ಅವರಿಗೆ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಕಾಂಗ್ರೆಸ್ ಹೈಕಮಾಂಡ್‌ಗೆ ಅಭಿಮಾನಿಗಳು ಈ ಸಂದರ್ಭದಲ್ಲಿ ಬಹಿರಂಗವಾಗಿ ಮನವಿ ಮಾಡಿದರು.

Minister Post for Rizwan Arshad Fans Pray

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.