Minister Ramalinga Reddy ಶಿವಮೊಗ್ಗ | ಜಲಸಂಪನ್ಮೂಲ ಸಚಿವರಾದ ರಾಮಲಿಂಗಾರೆಡ್ಡಿ ಅವರು ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಪ್ರವಾಸ ಹಮ್ಮಿಕೊಂಡಿದ್ದಾರೆ. ಈ ಕುರಿತು ಜಲಸಂಪನ್ಮೂಲ ಸಚಿವರ ಆಪ್ತ ಕಾರ್ಯದರ್ಶಿಗಳ ಕಚೇರಿಯಿಂದ ಅಧಿಕೃತ ಪ್ರವಾಸದ ವೇಳಾಪಟ್ಟಿ ಬಿಡುಗಡೆಯಾಗಿದೆ. ಭದ್ರಾ ಮೇಲ್ದಂಡೆ ಯೋಜನೆಯ ವಿವಿಧ ಹಂತದ ಪ್ರಮುಖ ಕಾಮಗಾರಿಗಳನ್ನು ಖುದ್ದಾಗಿ ವೀಕ್ಷಣೆ ಮಾಡಲು ಹಾಗೂ ಪ್ರಗತಿ ಪರಿಶೀಲನೆ ನಡೆಸಲು ಸಚಿವರು ಈ ಜಿಲ್ಲೆಗಳಿಗೆ ಭೇಟಿ ನೀಡುತ್ತಿದ್ದಾರೆ.
ಶಿವಮೊಗ್ಗ : ಬ್ಯಾಂಕ್ನಲ್ಲಿ ಅಗ್ನಿ ಅವಘಡ: ಲಕ್ಷಾಂತರ ಮೌಲ್ಯದ ವಸ್ತುಗಳು ಬೆಣಕಿಗಾಹುತಿ
Minister Ramalinga Reddy ಜುಲೈ 5ರ ಭಾನುವಾರದಂದು ಬೆಳಗ್ಗೆ 06:00 ಗಂಟೆಗೆ ಬೆಂಗಳೂರು ರಸ್ತೆ ಮೂಲಕ ಪ್ರಯಾಣ ಬೆಳೆಸಲಿರುವ ಸಚಿವರು, ಬೆಳಗ್ಗೆ 10:30ಕ್ಕೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆಗೆ ಆಗಮಿಸಲಿದ್ದಾರೆ. ಅಲ್ಲಿ ಭದ್ರಾ ಮೇಲ್ದಂಡೆ ಯೋಜನೆ ಪ್ಯಾಕೇಜ್-1 ಕಾಮಗಾರಿಯ ವಿದ್ಯುತ್ ಸಂಪರ್ಕದ ಟವರ್ ನಿರ್ಮಾಣ ಕೆಲಸದ ಪರಿವಿಕ್ಷಣೆ ನಡೆಸಲಿದ್ದಾರೆ. ತದನಂತರ ಬೆಳಗ್ಗೆ 11:00 ಗಂಟೆಗೆ ಮುತ್ತಿನಕೊಪ್ಪ ರಸ್ತೆ ಮೂಲಕ ಎನ್.ಆರ್.ಪುರ ತಾಲೂಕಿನ ಮುತ್ತಿನಕೊಪ್ಪಕ್ಕೆ ತೆರಳಿ ಪ್ಯಾಕೇಜ್-1 ಕಾಮಗಾರಿಗಳ ಪರಿಶೀಲನೆ ನಡೆಸಿ ಅಧಿಕಾರಿಗಳೊಂದಿಗೆ ಚರ್ಚಿಸಲಿದ್ದಾರೆ. ಮಧ್ಯಾಹ್ನ 12:15ಕ್ಕೆ ಮುತ್ತಿನಕೊಪ್ಪ ರಸ್ತೆಯಿಂದ ಹೊರಟು ತರೀಕೆರೆ ಮಾರ್ಗ ಮಧ್ಯದಲ್ಲಿ ಭದ್ರಾ ಜಲಾಶಯ ಮತ್ತು ಭದ್ರಾ ಮೇಲ್ದಂಡೆ ಯೋಜನೆ ಇನ್ಟೇಕ್ ಕಾಮಗಾರಿ ಪರಿಶೀಲಿಸಲಿದ್ದಾರೆ. ಮಧ್ಯಾಹ್ನ 01:30ಕ್ಕೆ ತರೀಕೆರೆ-ಕಡೂರು ಕೆರೆ ತುಂಬಿಸುವ ಯೋಜನೆಯ ಪಂಪ್ಹೌಸ್-2 ಕಾಮಗಾರಿಯ ವೀಕ್ಷಣೆ ಮುಗಿಸಿ, ಮಧ್ಯಾಹ್ನ 02:00 ಗಂಟೆಗೆ ಕಡೂರು ಪಂಪ್ಹೌಸ್ ರಸ್ತೆ ಮೂಲಕ ಅಜ್ಜಂಪುರಕ್ಕೆ ಪ್ರಯಾಣಿಸಲಿದ್ದಾರೆ.
ಅಜ್ಜಂಪುರಕ್ಕೆ ಮಧ್ಯಾಹ್ನ 02:30ಕ್ಕೆ ತಲುಪಲಿರುವ ಸಚಿವರು, ಭದ್ರಾ ಮೇಲ್ದಂಡೆ ಯೋಜನೆ ಮುಖ್ಯ ಕಾಲುವೆಯ ವೈ-ಜಂಕ್ಷನ್ ಮತ್ತು ಚಿತ್ರದುರ್ಗ ಶಾಖಾ ಕಾಲುವೆ ಪ್ಯಾಕೇಜ್-4ರ ಬಾಟಲ್ನೆಕ್ಸ್ ಕಾಮಗಾರಿ ಪರಿಶೀಲನೆ ನಡೆಸಲಿದ್ದಾರೆ. ಬಳಿಕ ಮಧ್ಯಾಹ್ನ 03:30ಕ್ಕೆ ಚಿತ್ರದುರ್ಗ ಶಾಖಾ ಕಾಲುವೆ ಹೊಸದುರ್ಗ ಮಾರ್ಗವಾಗಿ ಸಂಜೆ 04:30ಕ್ಕೆ ಗೋನೂರು ಅಕ್ವಿಡಕ್ಟ್ಗೆ ಆಗಮಿಸಿ, ಚಿತ್ರದುರ್ಗ ಶಾಖಾ ಕಾಲುವೆಯ ಪ್ಯಾಕೇಜ್-11ರ ಕಾಮಗಾರಿ ವೀಕ್ಷಣೆ ಮಾಡಲಿದ್ದಾರೆ. ಅಂತಿಮವಾಗಿ ಸಂಜೆ 05:30ಕ್ಕೆ ಚಿತ್ರದುರ್ಗದ ಭದ್ರಾ ಮೇಲ್ದಂಡೆ ಯೋಜನೆ ವಲಯ ಕಚೇರಿ ಸಭಾಂಗಣದಲ್ಲಿ ಉನ್ನತ ಅಧಿಕಾರಿಗಳೊಂದಿಗೆ ಮಹತ್ವದ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಸಭೆಯ ನಂತರ ಮರಳಿ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.


