MISSING / ಇವರಿಬ್ಬರನ್ನ ಎಲ್ಲಾದರೂ ಕಂಡೀದ್ದೀರಾ? ಸುಳಿವು ಸಿಕ್ಕರೆ ಪೊಲೀಸರಿಗೆ ಮಾಹಿತಿ ನೀಡಿ

MISSING / Inform the police if you get a clue about the duo / ಇಬ್ಬರು ವ್ಯಕ್ತಿಗಳು ಕಾಣೆಯಾಗಿರುವ ಬಗ್ಗೆ ಶಿವಮೊಗ್ಗ ವಾರ್ತಾ ಇಲಾಖೆಯ ಮೂಲಕ ಪೊಲೀಸ್ ಪ್ರಕಟಣೆಯನ್ನು ನೀಡಲಾಗಿದೆ. ಇವರ ಬಗ್ಗೆ ಸುಳಿವು ಸಿಕ್ಕಲ್ಲಿ ಪೊಲೀಸರಿಗೆ ಮಾಹಿತಿ ನೀಡಿ, ದಾವಣಗೆರೆ ಜಿಲ್ಲೆಯ ಇವರುಗಳ ವಿವರ ನೀಡಲಾಗಿದೆ.

MISSING /  ಇವರಿಬ್ಬರನ್ನ ಎಲ್ಲಾದರೂ ಕಂಡೀದ್ದೀರಾ? ಸುಳಿವು ಸಿಕ್ಕರೆ ಪೊಲೀಸರಿಗೆ ಮಾಹಿತಿ ನೀಡಿ

KARNATAKA NEWS/ ONLINE / Malenadu today/ May 7, 2023 GOOGLE NEWS 

ಶಿವಮೊಗ್ಗ & ದಾವಣಗೆರೆ ಹಾಗೂ  ಹರಿಹರದಿಂದ ಇಬ್ಬರು ವ್ಯಕ್ತಿಗಳು ಕಾಣೆಯಾಗಿದ್ದಾರೆ. ಅವರ ಸುಳಿವು ಸಿಕ್ಕಲ್ಲಿ ಹುಡುಕಿಕೊಡಿ  ಎಂದು ಪ್ರಕಟಣೆ ನೀಡಲಾಗಿದೆ. ಈ ಇಬ್ಬರು ವ್ಯಕ್ತಿಗಳ ಗುರುತು ಪತ್ತೆಯಾದಲ್ಲಿ ಪೊಲೀಸರಿಗೆ ಮಾಹಿತಿ ನೀಡುವಂತೆ ದೂರವಾಣಿ ಸಂಖ್ಯೆಯನ್ನು ಕೂಡ ನೀಡಲಾಗಿದೆ. 

Karnataka election/  ಕಡೆಯ ಆಟ... ಕೊನೆಯ ಪ್ರಚಾರ... ಸ್ಟಾರ್​ ಅಭ್ಯರ್ಥಿ,  ಸ್ಟಾರ್​ ಪ್ರಚಾರ/ ಸ್ವಾಭಿಮಾನ/ ಶಾಂತಿಯ ನಡಿಗೆ! ಹೇಗಿತ್ತು ಪ್ರಚಾರ ಇಲ್ಲಿದೆ ವಿವರ 

ದಾವಣಗೆರೆ ಯಲ್ಲಮ್ಮನಗರದಿಂದ ವ್ಯಕ್ತಿ ನಾಪತ್ತೆ

ದಾವಣೆಗೆರೆಯ ಯಲ್ಲಮನಗರ, ದೇವರಾಜ ಅರಸ್ ಬಡಾವಣೆ 4ನೇ ಕ್ರಾಸ, 3ನೇ ಮುಖ್ಯರಸ್ತೆ ವಾಸಿ ಬಸವರಾಜು ಎಂಬುವವರ ಮಗ 45 ವರ್ಷದ ಗುರುರಾಜು ನಾಪತ್ತೆಯಾಗಿದ್ದಾರೆ. 

ಇವರು 2023ರ ಜನವರಿ 03 ರಂದು ಮನೆ ಬಿಟ್ಟು ಹೋಗಿರುತ್ತಾರೆ. ಈತನ ಚಹರೆ 5.5 ಅಡಿ ಎತ್ತರ, ಗೋಧಿ ಮೈ ಬಣ್ಣ, ದುಂಡು ಮುಖ, ಸಾಧಾರಣ ಮೈ ಕಟ್ಟು ಹೊಂದಿದ್ದು, ಕಾಣೆಯಾದ ವೇಳೆ ಬಿಳಿ ಬಣ್ಣದ ಶರ್ಟ್, ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ.

ಹರಿಹರದಿಂದ ಯುವಕ ಕಾಣೆ

ಹರಿಹರ ನಗರದ ಮಹಾತ್ಮಗಾಂಧಿ ಪ್ರದೇಶ, 16ನೇ ಕ್ರಾಸ್ ಟ್ಯಾಂಕ್ ಹತ್ತಿರ ವಾಸವಿರುವ ಹಫೀಜ್ ಸಾಬ್ ಎಂಬುವವರ ಮಗ  35 ವರ್ಷದ ಫೈರೋಜ್ ಖಾನ್ ಎಂಬುವವರು  ದಿ: 05/06/2022 ಕಾಣೆಯಾಗಿರುತ್ತಾರೆ.   

ಈತನ ಚಹರೆ ಸುಮಾರು 5.8 ಅಡಿ ಎತ್ತರ, ಎಣ್ಣೆಗೆಂಪು  ಮೈ ಬಣ್ಣ, ಕೋಲು ಮುಖ, ಸಾಧಾರಣ ಮೈ ಕಟ್ಟು ಹೊಂದಿದ್ದು, ಕಾಣೆಯಾದ ವೇಳೆ ಕಪ್ಪು ಬಣ್ಣದ ಶರ್ಟ್, ನೀಲಿ ಜೀನ್ಸ್ ಪ್ಯಾಂಟ್ ಧರಿಸಿರುತ್ತಾರೆ.

 

Karnataka election/  ಕಡೆಯ ಆಟ... ಕೊನೆಯ ಪ್ರಚಾರ... ಸ್ಟಾರ್​ ಅಭ್ಯರ್ಥಿ,  ಸ್ಟಾರ್​ ಪ್ರಚಾರ/ ಸ್ವಾಭಿಮಾನ/ ಶಾಂತಿಯ ನಡಿಗೆ! ಹೇಗಿತ್ತು ಪ್ರಚಾರ ಇಲ್ಲಿದೆ ವಿವರ 

 ವಿವಿಧ ದಿನಾಂಕಗಳಂದು ಕಾಣೆಯಾದ ಇವರು ಎಲ್ಲಿಯಾದರೂ ಕಂಡು ಬಂದಲ್ಲಿ ಹರಿಹರ ನಗರ ಪೊಲೀಸ್ ಠಾಣೆ-08192-272016/ 9480803257, ದಾವಣಗೆರೆ-08192-253100/08192-253400 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.   

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ/ ಇಬ್ಬರ ದುರ್ಮರಣ 



ಆಯನೂರು ಮಂಜುನಾಥ್ ಬಗ್ಗೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಸಂವಾದ ! ತಲೆ ತಗ್ಗಿಸಬೇಕು ಎಂದಿದ್ದೇಕೆ ಕೆಪಿಸಿಸಿ ಅಧ್ಯಕ್ಷ 

ಶಿವಮೊಗ್ಗ/ ಶಿವಮೊಗ್ಗ ಜೆಡಿಎಸ್​ ಅಭ್ಯರ್ಥಿ ಬಗ್ಗೆ ಕಾಂಗ್ರೆಸ್ ನಾಯಕರು ಮಾತನಾಡಿರುವ ವಿಡಿಯೋ ಇದೀಗ ಸದ್ದು ಮಾಡುತ್ತಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮತದಾರರ ಗಮನ ಸೆಳೆಯಲು ಪರಸ್ಪರ ಸಂವಾದ ನಡೆಸಿದ್ದರು. ಈ ಸಂವಾದ ಸಾಕಷ್ಟು ವಿಷಯಗಳನ್ನು ಹೊರಹಾಕಿತ್ತು. ಸಿಎಂ ನಾನು ಎನ್ನುವ ಪೈಪೋಟಿಯನ್ನು ಬದಿಗೊತ್ತಿದ ಈ ಸಂವಾದದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ರವರು ಸಿದ್ದರಾಮಯ್ಯರನ್ನ ಲೋಕಾರೂಡಿಯಾಗಿ ಮಾತನಾಡಿಸುತ್ತಾ ಟಿಕೆಟ್ ಹಂಚಿಕೆಯಿಂದ ಹಿಡಿದು ಯಾರು ಗೆಲ್ಲುತ್ತಾರೆ ಎಂಬುದರ ವರೆಗೂ ಚರ್ಚೆ ನಡೆಸಿದ್ದಾರೆ. 

ವಿಶೇಷ ಅಂದರೆ, ಈ ಚರ್ಚೆಯಲ್ಲಿ ಶಿವಮೊಗ್ಗದ ಜೆಡಿಎಸ್​ ಅಭ್ಯರ್ಥಿ ಆಯನೂರು ಮಂಜುನಾಥ್​ರವರ ಹೆಸರು ಸಹ ಪ್ರಸ್ತಾಪವಾಗಿದೆ. ಇಬ್ಬರ ನಡುವಿನ ಮಾತುಕತೆಯ ನಡುವೆ,  ಪಾಪ ಅವರು ದಳಕ್ಕೆ ಹೋಗಿ ನಿಂತಿದ್ಧಾರೆ ಎಂದು ಡಿಕೆ ಶಿವಕುಮಾರ್​ರವರು ಮಾತು ಆರಂಭಿಸುತ್ತಾರೆ. ಆಯನೂರು ಮಂಜುನಾಥ್​ ಟಿಕೆಟ್ ಕೇಳಿದ್ರು ನಾವು ಕೊಡಲಿಲ್ಲ. ಆದರೆ ಅವರ ಜಾಹಿರಾತು ಇದ್ಯಲ್ಲ ಸರ್ ಶಿವಮೊಗ್ಗದ ಬಗ್ಗೆ,  ನಿಜವಾಗಲು ನಾವು ತಲೆ ತಗ್ಗಿಸಬೇಕು ಎಂದಿದ್ಧಾರೆ. ಅವರು ಟಿಕೆಟ್ ಕೇಳ್ತಿದ್ರು ನಾವು ಕೊಡ್ಲಿಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದಾಗ, ಸಿದ್ದರಾಮಯ್ಯರವರು ನಿಜವಾಗಲು ನನಗೂ ಅರ್ಪೋಚ್ ಮಾಡಿದ್ದ ಎಂದಿದ್ಧಾರೆ. 

ಕಾಂಗ್ರೆಸ್ ಬಿಡುಗಡೆ ಮಾಡಿರುವ ಸಂದರ್ಶನದ ಎರಡನೇ ಪಾರ್ಟ್​ನಲ್ಲಿ ಈ ಸಂಭಾಷಣೆಯಿದ್ದು ಆಯನೂರು ಮಂಜುನಾಥ್​ರವರ ಫೇಸ್​​ಬುಕ್​ ಪೇಜ್​ನಲ್ಲಿ ವಿಡಿಯೋವನ್ನು ಸಹ ಫೋಸ್ಟ್​ ಮಾಡಲಾಗಿದೆ.


ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ/ ಇಬ್ಬರ ದುರ್ಮರಣ

ತೀರ್ಥಹಳ್ಳಿ/ ಶಿವಮೊಗ್ಗ:  ಇಲ್ಲಿನ ದೇವಂಗಿ ಬಳಿ ಭೀಕರ ಅಪಘಾತವೊಂದು ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. 

Narendra modi/  ಪ್ರಧಾನಿ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಕುಂಸಿ ಪೊಲೀಸ್ ಸ್ಟೇಷನ್​ನಲ್ಲಿ ಕೇಸ್

ಘಟನೆಯಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ತೀರ್ಥಹಳ್ಳಿಯ ವಾಟಗಾರು ಸಮೀಪ ಘಟನೆ ಸಂಭವಿಸಿದೆ. 

ಕೊಪ್ಪದಿಂದ ತೀರ್ಥಹಳ್ಳಿಗೆ ಬರುವ ಮಾರ್ಗ ಇದಾಗಿದ್ದು, ಮಾರುತಿ ಸ್ವಿಫ್ಟ್ ಹಾಗೂ ಫಿಗೋ ಕಾರಿನ ನಡುವೆ ಡಿಕ್ಕಿಯಾಗಿದೆ. 

ಹೈವೆಯಲ್ಲಿ ನಿಯಂತ್ರಣ ತಪ್ಪಿದ ಕಾರು/ ಧರೆಗೆ ಗುದ್ದಿ ನುಜ್ಜುಗುಜ್ಜು! 

ಘಟನೆಯಲ್ಲಿ  ತೀರ್ಥಹಳ್ಳಿ ಸೊಪ್ಪುಗುಡ್ಡೆಯ ಡಾಕಪ್ಪ ಗೌಡ(70), ಶ್ರೀನಿವಾಸ್ ಗೌಡ ಶಿರೂರು (72) ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಶ್ರೇಯಸ್ ಸೊಪ್ಪುಗುಡ್ಡೆ ಅವರಿಗೆ ಗಂಭೀರ ಗಾಯವಾಗಿದೆ. ಇನ್ನೊಂದು ಕಾರಿನಲ್ಲಿದ್ದ ಮೂವರು ಗಂಭೀರ ಗಾಯಗೊಂಡವರು ವೆನ್ಲಾಕ್ ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದು  ಚಿಕಿತ್ಸೆ ಪಡೆಯುತ್ತಿದ್ದಾರೆ. 


Read/ Bhadravati/  ಸಂಜೆ ಹೊತ್ತಿನಲ್ಲಿ ಮನೆಗೆ ನುಗ್ಗಿ ದರೋಡೆ! ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ರಾ ಪೊಲೀಸ್ 

Read/ Kichcha Sudeepa/  ನಟ ಸುದೀಪ್​ಗೆ ಬೆದಕಿಗೆ ಹಾಕಿದ್ದ ಆಪ್ತ ಡೈರಕ್ಟರ್​ ಬಂಧನ! ಸಿಕ್ಕಿಬಿದ್ದಿದ್ದು ಹೇಗೆ ಗೊತ್ತಾ? 

Malenadutoday.com Social media