SHIVAMOGGA NEWS TODAY

ಶಿವಮೊಗ್ಗ: ರಾಗಿಗುಡ್ಡದ 15 ವರ್ಷದ ಬಾಲಕ ನಾಪತ್ತೆ; ಸುಳಿವು ಸಿಕ್ಕರೆ ಪೊಲೀಸರಿಗೆ ಮಾಹಿತಿ ನೀಡಿ 

Prathapa thirthahalli ನವೀಕರಣ: 02 ಮಾರ್ಚ್ 2026, 1:52 ಅಪರಾಹ್ನ ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ: ನಗರದ ರಾಗಿಗುಡ್ಡ ನಿವಾಸಿಯಾದ 15 ವರ್ಷದ ಬಾಲಕನೊಬ್ಬ ಕಳೆದ ಐದು ದಿನಗಳಿಂದ ಕಾಣೆಯಾಗಿರುವ ಘಟನೆ ವರದಿಯಾಗಿದೆ. ಎಜುಕೇಲ್ ರಾಜು ಎಂಬ ಹೆಸರಿನ ಈ ಬಾಲಕನು ಫೆಬ್ರವರಿ 25ರಂದು ಮನೆಯಿಂದ ಹೊರಗೆ ಹೋದವನು ಈವರೆಗೆ ವಾಪಸ್ಸಾಗದೆ ನಾಪತ್ತೆಯಾಗಿದ್ದಾನೆ ಎಂದು ಪೊಲೀಸರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

ಶಿವಮೊಗ್ಗ ಮಾರಿಜಾತ್ರೆ ಹೇಗಿದೆ ವ್ಯವಸ್ಥೆ ಪೂರ್ತಿ ವಿವರ ಇವತ್ತಿನ ಇ-ಪೇಪರ್​ ಓದಿ

ಕಾಣೆಯಾದ ಬಾಲಕನು ಟೌನ್ ಡಿವಿಎಸ್ ಶಾಲೆಯಲ್ಲಿ 8 ನೇ ತರಗತಿ ಓದುತ್ತಿದ್ದು ಸುಮಾರು 5 ಅಡಿ ಎತ್ತರ,ಸಾಧಾರಣ ಮೈಕಟ್ಟು,ಬಿಳಿ ಮೈಬಣ್ಣ,ಕೋಲು ಮುಖ ಹೊಂದಿದ್ದು ಕನ್ನಡ, ಇಂಗ್ಲೀಷ್,ತಮಿಳು,ತೆಲುಗು ಭಾಷೆ ಮಾತನಾಡುತ್ತಾನೆ. 

ಈತನು ಮನೆಯಿಂದ ಹೋಗುವಾಗ ಬಿಳಿ ಬಣ್ಣದ ಶರ್ಟ್,ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಈತನ ಬಗ್ಗೆ ಯಾರಿಗಾದರೂ ಸುಳಿವು ದೊರೆತಲ್ಲಿ ಪಿ.ಐ ಗ್ರಾಮಾಂತರ ಪೋಲೀಸ್ ಠಾಣೆ ದೂ.ಸಂ.: 08182-261400, 261418, 9480803332, 9480803350 ನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಗ್ರಾಮಾಂತರ ಪೋಲಿಸ್ ಠಾಣೆ ಪ್ರಕಟಣೆ ತಿಳಿಸಿದೆ.

Missing Alert Student Ezequiel Raju Missing

Missing Alert Student Ezequiel Raju Missing
Missing Alert Student Ezequiel Raju Missing

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.