SHIVAMOGGA NEWS TODAY

6 ವರ್ಷದ ಹಿಂದೆ ಕಾಣೆಯಾಗಿದ್ದ ವ್ಯಕ್ತಿ ಕೊನೆಗೂ ಪತ್ತೆ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಶಿವಮೊಗ್ಗ ಜಿಲ್ಲೆಯಭದ್ರಾವತಿ ತಾಲ್ಲೂಕಿನ ಬಂಡಾರಹಳ್ಳಿ ಗ್ರಾಮದ ಮಂಜೇಶ್ ಎಂಬುವವರು ಕಳೆದ ಆರು ವರ್ಷಗಳ ಹಿಂದೆ ಕಾಣೆಯಾಗಿದ್ದು, ಇದೀಗ ನ್ಯೂಟೌನ್ ಪೊಲೀಸರು ಅವರನ್ನು ಯಶಸ್ವಿಯಾಗಿ ಪತ್ತೆಹಚ್ಚಿ ಪೋಷಕರಿಗೆ ಒಪ್ಪಿಸಿದ್ದಾರೆ.

ಶಿವಮೊಗ್ಗದಲ್ಲಿ ರಾಷ್ಟ್ರ ಮಟ್ಟದ ಟಗರುಗಳ ಭರ್ಜರಿ  ಕಾಳಗ: ಹೇಗಿತ್ತು ಗೊತ್ತಾ..?

ಹೌದು, ಭದ್ರಾವತಿಯ 20 ವರ್ಷದ ಯುವಕ ಮಂಜೇಶ್ ಕಳೆದ 2019 ರಲ್ಲಿ ನಾಪತ್ತೆಯಾಗಿದ್ದರು. ಈ ಸಂಬಂಧ ಮಗನನ್ನು ಹುಡುಕಿಕೊಡುವಂತೆ ಪೋಷಕರು ಅಂದು ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. 

ಈ ಬಗ್ಗೆ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಗುನ್ನೆ ಸಂಖ್ಯೆ 132/ 2019 ಕಲಂ ಮನುಷ್ಯ ಕಾಣೆ ಪ್ರಕರಣ ವರದಿಯಾಗಿ ತನಿಖೆ ನಡೆಯುತ್ತಿತ್ತು. ಇದೀಗ ನ್ಯೂಟೌನ್ ಪೊಲೀಸ್ ಠಾಣೆಯ ಪಿಎಸ್ಐ ಹಾಗೂ ಸಿಬ್ಬಂದಿಗಳ ತಂಡವು ದಿನಾಂಕ 19-02-2026 ರಂದು ಮಂಜೇಶ್ ಅವರನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಪತ್ತೆ ಮಾಡಿದ್ದಾರೆ.

ಹಿರಿಯೂರಿನಿಂದ ಪತ್ತೆ ಮಾಡಲಾದ ವ್ಯಕ್ತಿಯನ್ನು ಪೊಲೀಸರು ಭದ್ರಾವತಿಗೆ ಕರೆತಂದು ಅವರ ಪೋಷಕರಿಗೆ ಹಸ್ತಾಂತರಿಸಿದ್ದಾರೆ.

Missing Man Bhadravathi Found After 6 Years

Missing Man
Missing Man

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.