SHIVAMOGGA NEWS TODAY

ಊರುಗಡೂರು ಕೇಸ್​,ಕುಟುಂಬಕ್ಕೆ 1 ಲಕ್ಷ ನೆರವು ನೀಡಿದ ಸಂಸದ ಬಿ.ವೈ. ರಾಘವೇಂದ್ರ; ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ

Prathapa thirthahalli ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

Mp byr ಶಿವಮೊಗ್ಗ: ನಗರದ ಊರುಗಡೂರಿನಲ್ಲಿ ಹತ್ಯೆಗೀಡಾದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಂಕೇತ್ ನಿವಾಸಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅವರು ಇಂದು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಮಗನನ್ನು ಕಳೆದುಕೊಂಡು ಕಂಗಾಲಾಗಿದ್ದ ಪೋಷಕರಿಗೆ ಧೈರ್ಯ ತುಂಬಿದ ಸಂಸದರು, ವೈಯಕ್ತಿಕವಾಗಿ ₹1 ಲಕ್ಷ ರೂಪಾಯಿಗಳ ಆರ್ಥಿಕ ನೆರವು ಹಸ್ತಂತರಿಸಿದರು. ಇದೇ ವೇಳೆ, ಮೃತ ಸಂಕೇತ್ ಅಕ್ಕನಿಗೆ ಉದ್ಯೋಗ ಕೊಡಿಸುವ ಭರವಸೆಯನ್ನೂ ನೀಡಿದರು.

ವಿಶ್ವ ಎಐ ಸಮ್ಮೇಳನದಲ್ಲಿ ಶಿವಮೊಗ್ಗ ಜಿಲ್ಲೆಯ ವಿದ್ಯಾರ್ಥಿಗಳ ಕರಾಮತ್ತು!

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದರು, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕ್ಷುಲ್ಲಕ ಕಾರಣಕ್ಕೆ ಜಗಳ ಬಿಡಿಸಲು ಹೋದ ಅಮಾಯಕ ಬಾಲಕನನ್ನು ಬರ್ಬರವಾಗಿ ಕೊಲೆ ಮಾಡಿರುವುದು ಪೈಶಾಚಿಕ ಕೃತ್ಯ. ಸಣ್ಣ ವಯಸ್ಸಿನ ಹುಡುಗರನ್ನು ಮುಂದಿಟ್ಟುಕೊಂಡು ಪದೇ ಪದೇ ಇಂತಹ ರಾಕ್ಷಸಿ ಕೃತ್ಯಗಳನ್ನು ಎಸಗಲಾಗುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕಿಡಿಗೇಡಿಗಳಿಗೆ ತಾವು ಏನು ಮಾಡಿದರೂ ನಡೆಯುತ್ತದೆ ಎಂಬ ಧೋರಣೆ ಬಂದಿದೆ ಎಂದು ಅವರು ಆಕ್ರೋಶ ಹೊರಹಾಕಿದರು. 

ಶಿವಮೊಗ್ಗದಲ್ಲಿ ಬೈಕ್ ತ್ರಿಪಲ್ ರೈಡ್ ಹೋಗುವುದು, ಕೈಯಲ್ಲಿ ಕೋಲು ಹಿಡಿದು ಜನರನ್ನು ಹೆದರಿಸುವುದು ಸಾಮಾನ್ಯವಾಗುತ್ತಿದೆ. ಶಿರಾಳಕೊಪ್ಪದಲ್ಲೂ ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆಯಾಗಿದೆ. ಸರ್ಕಾರದ ಓಲೈಕೆ ರಾಜಕಾರಣವೇ ಇಂತಹ ಘಟನೆಗಳಿಗೆ ಪ್ರೇರಣೆ ನೀಡುತ್ತಿದೆ. ಇನ್ನೆಷ್ಟು ಅಮಾಯಕರ ಬಲಿ ತೆಗೆದುಕೊಳ್ಳುತ್ತೀರಿ? ಎಂದು ನೇರವಾಗಿ ಪ್ರಶ್ನಿಸಿದರು. ಘಟನೆಯಲ್ಲಿ ಗಾಯಗೊಂಡಿರುವ ಮತ್ತೊಬ್ಬ ಬಾಲಕನ ಮನೆಗೂ ಭೇಟಿ ನೀಡಿದ ಅವರು ಕುಟುಂಬಕ್ಕೆ ಆತ್ಮಸ್ಥೈರ್ಯ ತುಂಬಿದರು. 

Mp byr Donates 1 Lakh to Sankeths Family

Mp byr Donates 1 Lakh to Sankeths Family
Mp byr Donates 1 Lakh to Sankeths Family
shivamogga car decor sun control house
shivamogga car decor sun control house

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

Prathapa thirthahalli

Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.