Wednesday, 9 Jul 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • SHIMOGA NEWS LIVE
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAY

mp renukacharya ಜುಲೈ 08 ಭದ್ರಾ ನಾಲೆ ವಿವಾದ, ನಾಳೆ ಚೀಫ್ ಇಂಜಿನಿಯರ್ ಕಚೇರಿಗೆ ಮುತ್ತಿಗೆ | ರಕ್ತ ಕ್ರಾಂತಿಯಾದರೂ ಹೋರಾಟ ನಿಲ್ಲಿಸುವುದಿಲ್ಲ | ಎಂಪಿ ರೇಣುಕಾಚಾರ್ಯ

prathapa thirthahalli
Last updated: July 8, 2025 12:06 pm
Prathapa thirthahalli - content producer
Share
SHARE

mp renukacharya ಶಿವಮೊಗ್ಗ :  ಭದ್ರಾ ಬಲದಂಡೆ ಕಾಮಗಾರಿ ವಿಚಾರವಾಗಿ ಜುಲೈ 9 ರಂದು ಬೆಳಿಗ್ಗೆ ಸಾಗರ ರಸ್ತೆಯಲ್ಲಿರುವ ಚೀಫ್ ಇಂಜಿನಿಯರ್ ಕಚೇರಿಗೆ ಮುತ್ತಿಗೆ ಹಾಕುತ್ತಿದ್ದೇವೆ ಎಂದು ಮಾಜಿ ಶಾಸಕ ಎಂ ಪಿ ರೇಣುಕಾಚಾರ್ಯ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರೇಣುಕಾಚಾರ್ಯ, ಭದ್ರಾ ಬಲದಂಡೆ ಕುಡಿಯುವ ನೀರಿನ ಯೋಜನೆಗೆ ನೀರನ್ನು ಬಿಡುತ್ತಿರುವುದರಿಂದ ದಾವಣಗೆರೆ ಜಿಲ್ಲೆಯ ರೈತರಿಗೆ “ಮರ್ಮಾಘಾತ” ಉಂಟಾಗಿದೆ. ಈ ಹಿಂದೆ ಇದರ ವಿರುದ್ಧ ಹಲವು ಹಂತಗಳಲ್ಲಿ ಹೋರಾಟ ನಡೆಸಿದ್ದೆವು. ಆದರೆ ಸರ್ಕಾರ ನಮ್ಮ ಹೋರಾಟಕ್ಕೆ ಸ್ಪಂದಿಸಲಿಲ್ಲ. ಜೂನ್ 21 ರಂದು ಭದ್ರಾ ನಾಲೆ ವೀಕ್ಷಣೆ, ಜೂನ್ 23 ರಂದು ಬೃಹತ್ ಹೋರಾಟ ನಡೆಸಲಾಗಿತ್ತು. ಆದರೆ, ಆ ಸಂದರ್ಭದಲ್ಲಿ ರಕ್ಷಣಾ ಇಲಾಖೆ ಸರ್ಕಾರದ ಏಜೆಂಟ್ ಆಗಿ ಕಾರ್ಯನಿರ್ವಹಿಸಿತು. ನಾವು ಭಯೋತ್ಪಾದಕರಲ್ಲದಿದ್ದರೂ, ಸೆಕ್ಷನ್ 144 ಜಾರಿಗೊಳಿಸಿ ತಮ್ಮನ್ನು ಬಂಧಿಸಲಾಯಿತು. ಜೂನ್ 25 ರಂದು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡುವಾಗ ತಮ್ಮ ಮುಖಂಡರ ಮೇಲೆ ಬಲವಂತವಾಗಿ ಹಲ್ಲೆ ನಡೆಸಲಾಯಿತು ಎಂದು ಅವರು ಆರೋಪಿಸಿದರು.

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ನನ್ನನ್ನೂ ಒಳಗೊಂಡಂತೆ ಎಲ್ಲಾ ರೈತರನ್ನು ಪೊಲೀಸರು ಬಂಧಿಸಿದ್ದರು. ನಂತರ ಎಸ್ಪಿ ಮತ್ತು ಡಿಸಿ ಅವರೊಂದಿಗೆ ಮಾತುಕತೆ ನಡೆಸಲಾಗಿತ್ತು. ಈ ಹೋರಾಟ ಸ್ವಾರ್ಥಕ್ಕಾಗಿ ಅಲ್ಲ, ರೈತರ ಜೀವನಕ್ಕಾಗಿ ಎಂದು ರೇಣುಕಾಚಾರ್ಯ ಸ್ಪಷ್ಟಪಡಿಸಿದರು. 

car decor

ಜುಲೈ 4 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಸಮಸ್ಯೆ ಬಗ್ಗೆ ಮನವರಿಕೆ ಮಾಡಿಕೊಡಲಾಗಿತ್ತು. ಅವರು ಭರವಸೆ ನೀಡಿದ್ದರೂ, ಅದು ಕೇವಲ ಭರವಸೆಯಾಗಿಯೇ ಉಳಿದಿದೆ. ನಂತರ ಕರಪತ್ರಗಳನ್ನು ಹಂಚುವ ಮೂಲಕ ಯೋಜನೆಯಿಂದ ರೈತರಿಗೆ ಆಗುವ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸಲಾಗಿತ್ತು.

mp renukacharya  ರಕ್ತ ಕ್ರಾಂತಿಯಾದರೂ ನಾವು ಹೋರಾಟವನ್ನು ನಿಲ್ಲಿಸುವುದಿಲ್ಲ

ಈ ವಿಚಾರವಾಗಿ ನಮ್ಮ ಹೋರಾಟ ನಿಲ್ಲುವುದಿಲ್ಲ, ನಾವು ಯಾವುದೇ ತ್ಯಾಗಕ್ಕೂ ಸಿದ್ಧರಿದ್ದೇವೆ” ಮುಖ್ಯಮಂತ್ರಿಗಳು ತಕ್ಷಣ ಭದ್ರಾ ಕಾಮಗಾರಿಯನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ಬೇರೆ ಬೇರೆ ಹಂತದ ಹೋರಾಟಕ್ಕೆ ನಾವು ಸಿದ್ಧರಿದ್ದೇವೆ. ಈ ಭದ್ರಾ ಬಲದಂಡೆಯಲ್ಲಿ ಒಟ್ಟು 65 ಸಾವಿರ ಹೆಕ್ಟೇರ್ ಭೂಪ್ರದೇಶಕ್ಕೆ ನೀರನ್ನು ಬಿಡಬೇಕು. ಆದರೆ ಭತ್ತ ನಾಟಿ ಮಾಡುವ ಸಂಧರ್ಭ ಈಗ ರೈತರಿಗೆ ನೀರನ್ನು ಬಿಡುತ್ತಿಲ್ಲ. ಕಾಮಗಾರಿ ನಡೆಯುತ್ತಿರುವ ಸ್ಥಳವನ್ನು ಯಾರಿಗೂ ವೀಕ್ಷಿಸಲು ಬಿಡುತ್ತಿಲ್ಲ. “ರಕ್ತ ಕ್ರಾಂತಿಯಾದರೂ ಪರವಾಗಿಲ್ಲ, ಹೋರಾಟ ಮಾಡಿಯೇ ಮಾಡುತ್ತೇವೆ” ಎಂದು ಅವರು ತೀಕ್ಷ್ಣವಾಗಿ ನುಡಿದರು. 

ಕುಡಿಯುವ ನೀರಿಗೆ ತಮ್ಮ ವಿರೋಧವಿಲ್ಲ. 7 ಟಿಎಂಸಿ ನೀರು ಕುಡಿಯುವುದಕ್ಕಾಗಿ ಮೀಸಲಿಟ್ಟಿದ್ದು, ಅದನ್ನು ಜಾಕ್ವೆಲ್ ಮೂಲಕ ಕುಡಿಯಲು ಬಿಡುಗಡೆ ಮಾಡಬಹುದು. ಆದರಿಂದ. ತಕ್ಷಣ ಕಾಮಗಾರಿ ನಿಲ್ಲಿಸಿ ತಡೆಗೋಡೆ ಕಟ್ಟಬೇಕು. ಎಂದು ಆಗ್ರಹಿಸಿದರು

mp renukacharya ಸುರ್ಜೇವಾಲಾ ರಾಜ್ಯ ಭೇಟಿ ಮತ್ತು ಕಾಂಗ್ರೆಸ್ ಆಂತರಿಕ ಕಲಹ

ಸುರ್ಜೇವಾಲಾ ಅವರ ರಾಜ್ಯ ಭೇಟಿ ಕುರಿತು ಪ್ರತಿಕ್ರಿಯಿಸಿದ ರೇಣುಕಾಚಾರ್ಯ, ಅವರು ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ. ಕಾಂಗ್ರೆಸ್‌ನ ಹಿರಿಯ ಶಾಸಕರೇ ತಮ್ಮದೇ ಸರ್ಕಾರದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಹೇಳಿದ್ದಾರೆ. ಸರಣಿ ಸಭೆಗಳು ನಡೆಸಿದರೂ ಕುರ್ಚಿ ಕದನ ನಿಲ್ಲಲಿಲ್ಲ. ಸುರ್ಜೇವಾಲಾ ಎಷ್ಟೇ ತೇಪೆ ಹಚ್ಚಿದರೂ ಶಾಸಕರ ಮನ ಒಲಿಸಲು ಸಾಧ್ಯವಾಗಲಿಲ್ಲ. ಯಾರೇ ಎಷ್ಟೇ ಪ್ರಯತ್ನಪಟ್ಟರೂ ಆಂತರಿಕ ಕಚ್ಚಾಟದಿಂದ ಸರ್ಕಾರ ಪತನವಾಗುತ್ತದೆ ಎಂದು ಭವಿಷ್ಯ ನುಡಿದರು.

mp renukacharya ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರ:

ರಾಜ್ಯಾಧ್ಯಕ್ಷ ಬದಲಾವಣೆ ವಿಚಾರದ ಬಗ್ಗೆ ಮಾತನಾಡಿದ ಅವರು ವಿಜಯೇಂದ್ರ ಅವರನ್ನು ಹೈಕಮಾಂಡ್ ನೇಮಕ ಮಾಡಿದೆ. ಅವರು ರಾಜ್ಯದಾದ್ಯಂತ  ಪಾರದರ್ಶಕವಾಗಿ ಪಕ್ಷವನ್ನು ಸಂಘಟನೆ ಮಾಡುತ್ತಿದ್ದಾರೆ. ಇಡೀ ರಾಜ್ಯದಲ್ಲಿ ಅವರದ್ದೇ ಆದ ವರ್ಚಸ್ಸು ಇದೆ. ವಿಜಯೇಂದ್ರ ಅವರು ಕಿರಿಯ ವಯಸ್ಸಿನಲ್ಲಿ ಜವಾಬ್ದಾರಿಯನ್ನು ಚೆನ್ನಾಗಿ ನಿಭಾಯಿಸಿದ್ದಾರೆ. ಮೂಡಾ ವಾಲ್ಮೀಕಿ ಹಗರಣದಲ್ಲಿ ಅನೇಕ ಹೋರಾಟಗಳನ್ನು ಮಾಡಿದ್ದಾರೆ. 2028 ರಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕೆಂಬ ಅವರ ಕನಸಿಗೆ ನಾವೆಲ್ಲ ಒಗ್ಗಟ್ಟಾಗಿ ನಿಲ್ಲುತ್ತೇವೆ. ಅವರನ್ನೇ ಮುಂದುವರಿಸಬೇಕು ಎಂಬುದು ನಮ್ಮ ಅಭಿಪ್ರಾಯ ಎಂದು ರೇಣುಕಾಚಾರ್ಯ ತಿಳಿಸಿದರು.

ಈ ಪತ್ರಿಕಾಗೋಷ್ಠಿಯಲ್ಲಿ ಭಾರತೀಯ ಜನತಾ ಪಾರ್ಟಿ ಮಂಡಲ ಅಧ್ಯಕ್ಷ ಹರಕೆರೆ ನಾಗರಾಜ್, ಹೊನ್ನಾಳಿ ಕುಬೇಂದ್ರಪ್ಪ, ರಂಗಪ್ಪ ಮತ್ತಿತರರು ಉಪಸ್ಥಿತರಿದ್ದರು.

malenadutoday add
TAGGED:mp renukacharya
Share This Article
Facebook Whatsapp Whatsapp Telegram Threads Copy Link
prathapa thirthahalli
ByPrathapa thirthahalli
content producer
Follow:
Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Previous Article Karnataka Congress july 08 Karnataka Congress july 08 / ಶಿವಮೊಗ್ಗ, ಭದ್ರಾವತಿ ಶಾಸಕರ ಜೊತೆ ರಣದೀಪ್ ಸಿಂಗ್ ಸುರ್ಜೇವಾಲಾ ಮೀಟಿಂಗ್​/ ಯಾವಾಗ ಗೊತ್ತಾ
Next Article Bhadra Dam Water Level today  Bhadra Dam Water Level today  ಜುಲೈ 08, ಭದ್ರಾ ಜಲಾಶಯದಲ್ಲಿ ನೀರಿನ ಮಟ್ಟ ಎಷ್ಟಿದೆ ಇವತ್ತು
Leave a Comment

Leave a Reply Cancel reply

Your email address will not be published. Required fields are marked *

You Might Also Like

ಉಚಿತ ಹೃದಯ ತಪಾಸಣೆಗೆ ಇಲ್ಲಿದೆ ಅವಕಾಶ | ವಿವರ ಹೀಗಿದೆ

By 131

ಶ್ರೀ ಕೃಷ್ಣನ ಜೀವನ ಚರಿತ್ರೆಯನ್ನು ನೃತ್ಯದ ಮೂಲಕ ಅನಾವರಣಗೊಳಿಸಲಿದೆ ಅವತರಿಸು ಬಾ ಕಾರ್ಯಕ್ರಮ

By 131
SHIVAMOGGA NEWS TODAY

ಜನವರಿ 29 ಕ್ಕೆ ಕರ್ನಾಟಕ ದಲಿತ ಸಂಘರ್ಷ  ಸಂವಿಧಾನ ಜಾಗೃತಿ ಸಮಾವೇಶ

By 131

AI ಟೂಲ್‌ನ್ನು ಭಾವುಕತೆಯಿಂದ ಗೆಲ್ಲಿ | ಜೋಗಿ ಗಿರೀಶ್‌ ರಾವ್‌

By 131
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up