ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ನಬಾರ್ಡ್​ ಫೌಂಡೇಶನ್​ ದಿನಾಚರಣೆ

NABARD Foundation Day at DCC Bank Auditorium

ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ನಬಾರ್ಡ್​ ಫೌಂಡೇಶನ್​  ದಿನಾಚರಣೆ

KARNATAKA NEWS/ ONLINE / Malenadu today/ Jul 13, 2023 SHIVAMOGGA NEWS

ನಬಾರ್ಡ್​ ಮತ್ತು ಚೈತನ್ಯ ರೂರಲ್ ಡೆವೆಲಪ್ ಮೆಂಟ್ ಸೊಸೈಟಿ , ಶಿವಮೊಗ್ಗ ಇವರ ಸಹಯೋಗದೊಂದಿಗೆ ನಬಾಡ೯ ಫೌಂಡೇಶನ್ ದಿನಾಚರಣೆಯ ನ್ನು ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ದಿನಾಂಕ 12/07/2023 ರಂದು ಆಚರಿಸಲಾಯಿತು

ನಬಾಡ೯ ಡಿ ಡಿ ಎಂ ಶರತ್ ಗೌಡ ರವರು ಉದ್ಫಾಟಿಸಿ ಮಾತನಾಡುತ್ತಾ ನಬಾರ್ಡ್​ ಪ್ರಾರಂಭವಾಗಿ 42 ವಷ೯ ಕಳೆದಿದ್ದು ದೇಶದಾದ್ಯಂತ ರೈತರಿಗಾಗಿ ಹಣಕಾಸಿನ ಸಹಾಯ ಮಾಡುತ್ತಾ ಬಂದಿದೆ ಮುಂದೆಯೂ ಸಹ ಹೆಚ್ಚಿನ ಸವಲತ್ತುಗಳನ್ನು ನೀಡಲಿದೆ ರೈತರು ಸದ್ಬಳಕೆ ಮಾಡಿಕೊಳ್ಳಬೇಕೆಂದು ತಿಳಿಸಿದರು ಈ ಕಾಯ೯ಕ್ರಮದಲ್ಲಿ  ಅಮರ್ ನಾಥ್  ಶೆಟ್ಟಿ Lead bank Manager ,, Canara bank shimoga, ಬಿ. ಟಿ ಭದ್ರೀಶ್ CEO , ಚೈತನ್ಯ ರೂರಲ್ ಡೆವೆಲಪ್ ಮೆಂಟ್ ಸೊಸೈಟಿ , ಶಿವಮೊಗ್ಗ,  ವಾಸುದೇವ್ DCC bank assistant director,  ಸಣ್ಣತಿಮ್ಮಪ್ಪ ಯೋಜನಾ ಸಂಯೋಜಕರು ಕೃಷಿ ವಿಜ್ಞಾನ ಕೇಂದ್ರ ಶಿವಮೊಗ್ಗ ಮತ್ತು ದಿನಕರ ಜಾದವ್ , ಇವರು ಬಾಗವಹಿಸಿದ್ದರು


ಹುಡುಗನ ಪ್ರೀತಿ ಕಿರುಕುಳ! ಸಾಗರ ಟೌನ್​ನಲ್ಲಿ ಉತ್ತರ ಕನ್ನಡ ಯುವತಿ ಆತ್ಮಹತ್ಯೆ! ಆರೋಪಿ ಬಂಧನ

ಮದುವೆಯಾಗು ಎಂದು ಪೀಡಿಸ್ತಿದ್ದ ಹುಡುಗನ ಕಾರಣಕ್ಕೆ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಸಾವನ್ನಪ್ಪಿದ್ದಾಳೆ . ಈ ಸಂಬಂಧ ಸಾಗರ ಟೌನ್ ಪೊಲೀಸ್ ಸ್ಟೇಷನ್​ನಲ್ಲಿ ಎಫ್ಐಆರ್ ದಾಖಲಾಗಿದ್ದು,  ಪೊಲೀಸರು ನೊಂದ ಕುಟುಂಬಸ್ಥರು ನೀಡಿದ ದೂರಿನನ್ವಯ ಆರೋಪಿಯನ್ನು ಸಹ ಬಂಧಿಸಿದ್ದಾರೆ.. 

ನಡೆದಿದ್ದೇನು?

ಉತ್ತರ ಕನ್ನಡ ಜಿಲ್ಲೆಯ ಮೂಲದ ಯುವತಿ ಸಾಗರ ಪೇಟೆಯಲ್ಲಿರುವ ಕಾಲೇಜೊಂದರಲ್ಲಿ ವಿದ್ಯಾಬ್ಯಾಸ ಮಾಡುತ್ತಿದ್ದಳು. ಈಕೆಯ ಸಂಪರ್ಕಕ್ಕೆ ಬಂದಿದ್ದ ಯುವಕನೊಬ್ಬ, ತನ್ನನ್ನು ಪ್ರೀತಿಸು ಎಂದು ಪದೇ ಪದೇ ಹೇಳುತ್ತಿದ್ದನಂತೆ. ಅಲ್ಲದೆ, ತನ್ನನ್ನ ಮದುವೆಯಾಗು ಎಂದು ನಿರಂತರವಾಗಿ ಫೋನ್​ ಮಾಡುತ್ತಿದ್ದ ಎಂದು ದೂರಲಾಗಿದೆ. ಇದೇ ವಿಚಾರದಲ್ಲಿ ಒಂದು ಸಲ ಯುವತಿಯ ತಂದೆ,  ಯುವತಿಯ ಫೋನ್​ ತೆಗೆದುಕೊಂಡು ಆರೋಪಿಗೆ ಎಚ್ಚರಿಕೆಯನ್ನು ಸಹ ನೀಡಿದ್ದಾರೆ. 

ನಡೆದ ಘಟನೆಗಳಿಂದ ಯುವತಿ ಮನನೊಂದಿದ್ದಳು ಎನ್ನಲಾಗಿದ್ದು,ಕಳೆದ 8 ರಂದು ಯುವತಿ ಕಾಲೇಜಿಗೆ ಹೊರಟವಳು ಅಲ್ಲಿಗೆ ಹೋಗಿ ತಲುಪಿರಲಿಲ್ಲ. ಈ ಮಧ್ಯೆ ಆರೋಪಿ , ಯುವತಿಯ ತಂದೆಗೆ ಕರೆ ಮಾಡಿ ನಿಮ್ಮ ಮಗಳು ಕಾಲೇಜಿಗೆ ಬಂದಿಲ್ಲ ವಿಚಾರಿಸಿ ಎಂದಿದ್ಧಾನೆ. ಆತನಿಗೆ ಜೋರು ಮಾಡಿದ ಯುವತಿ ತಂದೆ, ಆಕೆಯಿದ್ದ ಹಾಸ್ಟೆಲ್​ಗೆ ಕರೆ ಮಾಡಿದಾಗ, ಯುವತಿ ವಿಷ ಸೇವಿಸಿರುವುದು ಗೊತ್ತಾಗಿದೆ. ತಕ್ಷಣ ಸಾಗರ ಉಪವಿಭಾಗೀಯ ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಬಳಿಕ ಯುವತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಮತ್ತು ಅಲ್ಲಿಂದ ಮಣಿಪಾಲ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಆದರೆ ಯುವತಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ. ಸದ್ಯ ಘಟನೆ ಸಂಬಂಧ ಯುವತಿ ಸಹೋದರ ನೀಡಿದ ದೂರಿನನ್ವಯ ಪೊಲೀಸರು ಕೇಸ್ ದಾಖಲಿಸಿ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ಧಾರೆ.