ಶಿವಮೊಗ್ಗ ಜಿಲ್ಲೆಗೆ ಮತ್ತೆ ಬಂದು ಹೋಯಿತೆ NIA | ನಾಲ್ವರಿಗೆ ನೋಟಿಸ್ ನೀಡಿ ಬೆಂಗಳೂರಿಗೆ ಬರಹೇಳಿದ್ದೇಕೆ?

KARNATAKA NEWS/ ONLINE / Malenadu today/ Oct 17, 2023 SHIVAMOGGA NEWS

ಶಿವಮೊಗ್ಗ ಜಿಲ್ಲೆಯಲ್ಲಿನ ಶಂಕಿತ ಚಟುವಟಿಕೆ ಸಂಬಂಧಿಸಿದಂತೆ NIA  ತನಿಖೆ ಇನ್ನೂ ಸಹ ಮುಂದುವರಿದೆ. ಇತ್ತೀಚೆಗೆ ದೆಹಲಿಯಲ್ಲಿ ಅರೆಸ್ಟ್​ ಮಾಡಿರುವ ಶಂಕಿತ ಅರಾಫತ್ ಅಲಿಗೆ ಸಂಬಂಧಿಸಿದಂತೆ ತೀರ್ಥಹಳ್ಳಿ ಮೂಲದ ನಾಲ್ವರಿಗೆ ಎನ್​ಐಎ ನೋಟಿಸ್ ನೋಟಿಸ್ ನೀಡಿದೆ 

ತುಂಗಾ ತೀರದಲ್ಲಿ ನಡೆದ ಟ್ರಯಲ್ ಬ್ಲಾಸ್ಟ್ ಹಾಗೂ ದೇಶದ ತ್ರಿವರ್ಣ ಧ್ವಜ ಸುಟ್ಟ ಪ್ರಕರಣ ಮತ್ತು ತೀರ್ಥಹಳ್ಳಿಯ ಶಂಕಿತ ಉಗ್ರ ಅರಫತ್ ಅಲಿ ಬಂಧನದ ವಿಚಾರವಾಗಿ ನಾಲ್ವರು ಬೆಂಗಳೂರಿಗೆ ಬಂದು ವಿಚಾರಣೆ ಎದುರಿಸಬೇಕು ಎಂದು ಎನ್​ಐಎ ತನ್ನ ನೋಟಿಸ್​ ನಲ್ಲಿ ತಿಳಿಸಿದೆ. 

ಈ ಸಂಬಂಧ ತೀರ್ಥಹಳ್ಳಿಗೆ ಎನ್​ಐಎ ಅಧಿಕಾರಿ ಬಂದು ನೋಟಿಸ್​ ನೀಡಿದ್ದಾರೆ ಎನ್ನಲಾಗಿದೆ. ಬರುವ ಅಕ್ಟೋಬರ್ 19 ರ ಮಧ್ಯಾಹ್ನ 1 ಗಂಟೆಯೊಳಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ. 

ಅರಾಫತ್ ಅಲಿ ಹಾಗೂ ಇತರೇ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಹೊಂದಿರುವ ಮಾಹಿತಿ ಪಡೆಯಲು ಎನ್​ಐಎ ಈ ನೋಟಿಸ್ ಜಾರಿ ಮಾಡಿದೆ ಎನ್ನಲಾಗಿದೆ. 


ಇನ್ನಷ್ಟು ಸುದ್ದಿಗಳು 

ಶೇ…ಹಾವು ಕಚ್ಚಿತು | ಮನೆ ಬಳಿ ಬಂದ ನಾಗರವನ್ನು ಹಿಡಿಯಲು ಹೋದವರ ಸ್ಥಿತಿ ಗಂಭೀರ | VIDEO VIRAL

ಪ್ರಯಾಣಿಕರ ಗಮನಕ್ಕೆ: ನೈಋತ್ಯ ರೈಲ್ವೆಯಿಂದ ದಸರಾ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಸಂಚಾರ | ಪೂರ್ತಿ ವಿವರ ಇಲ್ಲಿದೆ

ಶಿವಮೊಗ್ಗ ದಸರಾಕ್ಕೆ ಚಾಲನೆ | ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದ ಪಾಲಿಕೆ ಸದಸ್ಯರು | ಕುಣಿದು ಸಂಭ್ರಮಿಸಿದ ಶಾಸಕ ಎಸ್​.ಎನ್​. ಚನ್ನಬಸಪ್ಪ


 

Leave a Comment