naxalism : ಮುಂಡಗಾರು ಲತಾ ಸೇರಿದಂತೆ 04 ಜನ ನಕ್ಸಲ್ ಮುಖಂಡರ ಪ್ರಕರಣ ಖುಲಾಸೆ
naxalism : ಕೆಲ ತಿಂಗಳ ಹಿಂದಷ್ಟೆ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ಸಮ್ಮುಖದಲ್ಲಿ ಶರಣಾಗಿದ್ದ ನಕ್ಸಲ್ ಮುಖಂಡರಾದ ಮುಂಡಗಾರು ಲತಾ, ಕೋಟೆಹೊಂಡ ರವೀಂದ್ರ, ವನಜಾಕ್ಷಿ ಮತ್ತು ಸಾವಿತ್ರಿ ವಿರುದ್ಧ ದಾಖಲಾಗಿದ್ದ ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆ (ಯುಎಪಿಎ) ಪ್ರಕರಣಗಳನ್ನು ಖುಲಾಸೆ ಮಾಡಿ ನಗರದ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
ಇದು ರಾಜ್ಯ ಸರ್ಕಾರ ನಕ್ಸಲರ ಶರಣಾಗತಿ ಸಂದರ್ಭದಲ್ಲಿ ನೀಡಿದ್ದ ತ್ವರಿತ ವಿಚಾರಣೆಯ ಭರವಸೆ ಈಡೇರಿದಂತಾಗಿದೆ. ನಕ್ಸಲರನ್ನು ಮುಖ್ಯವಾಹಿನಿಗೆ ಕರೆತರಬೇಕೆಂದು ಸರ್ಕಾರ ನಕ್ಲಲ್ ಶರಣಾಗತಿ ಸಮಿತಿಯನ್ನು ರಚಿಸಿತ್ತು. ಅದರಂತೆ ಸಮಿತಿ ಸದಸ್ಯರು ನಕ್ಸಲರನ್ನು ಕಾಡಿನಲ್ಲಿ ಭೇಟಿ ಮಾಡಿ ಅವರ ಮನವೊಲಿಸುವ ಪ್ರಯತ್ನದಲ್ಲಿ ಯಶಸ್ವಿಯಾಗಿತ್ತು. ನಂತರ ಮುಂಡಗಾರು ಲತಾ ಸೇರಿದಂತೆ ಮೂವರು ಸಿಎಂ ಸಿದ್ದರಾಮಯ್ಯನವರ ಸಮ್ಮುಖದಲ್ಲಿ ಶರಣಾಗಿತ್ತು. ಇವರುಗಳ ವಿರುದ್ಧ ಹಲವು ಕೇಸ್ ಗಳು ದಾಖಲಾಗಿದ್ದವು.
naxalism : ಶೃಂಗೇರಿಯ ಬುಕ್ಕಡಿಬೈಲು ಬಸ್ ನಿಲ್ದಾಣದ ಅಂಗಡಿಯೊಂದರ ಗೋಡೆ ಮೇಲೆ ಲತಾ, ರವೀಂದ್ರ ಮತ್ತು ಸಾವಿತ್ರಿ ಅವರು ಕರಪತ್ರಗಳನ್ನು ಅಂಟಿಸಿ, ಸರ್ಕಾರಿ ವಿರೋಧಿ ಘೋಷಣೆ ಕೂಗಿದ್ದರು ಎಂದು ಶೃಂಗೇರಿ ಪೊಲೀಸ್ ಠಾಣೆಯಲ್ಲಿ 2009ರಲ್ಲಿಯು ಎಪಿಎ ಪ್ರಕರಣ ದಾಖಲಿಸಲಾಗಿತ್ತು. 2005 ರಲ್ಲಿ ಲೇವಾದೇವಿ ವ್ಯವಹಾರ ನಡೆಸುತ್ತಿದ್ದ ಗಂಗಾಧರ ಶೆಟ್ಟಿ ಎಂಬುವವರ ಬೈಕ್ ಸುಟ್ಟ ಆರೋಪವೂ ಈ ಮೂವರ ಮೇಲಿತ್ತು. ಲತಾ, ರವೀಂದ್ರ ಮತ್ತು ವನಜಾಕ್ಷಿ ಅವರು ಶೃಂಗೇರಿ ತಾಲ್ಲೂಕಿನ ನೆಮ್ಮಾರಿನಲ್ಲಿ ಮತ್ತು ಮಾವೋವಾದಿ ಪರ ಘೋಷಣೆ ಕೂಗಿದ್ದ ಆರೋಪದಲ್ಲಿಯೂ ಎಫ್ ಐಆರ್ ದಾಖಲಿಸಲಾಗಿತ್ತು. 2018ರಲ್ಲಿ ಥಣಿಕೋಡು ಅರಣ್ಯ ಚೆಕ್ ಪೋಸ್ಟ್ನಲ್ಲಿ ಸ್ಪೋಟಕಗಳನ್ನು ಎಸೆದು ದಾಖಲೆಗಳನ್ನು ಸುಟ್ಟು ರೂ.34,000 ನಷ್ಟ ಉಂಟು ಮಾಡಿದ್ದರು ಎಂದು ಮತ್ತೊಂದು ಯುಎಪಿಎ ಪ್ರಕರಣವೂ ಇವರ ವಿರುದ್ಧ ದಾಖಲಿಸಲಾಗಿತ್ತು.
ನಗರದ ಯುಎಪಿಎ ಪ್ರಕರಣ ವಿಶೇಷ ನ್ಯಾಯಾಲಯವು ಇವರುಗಳ ವಿರುದ್ಧ ದಾಖಲಾಗಿದ್ದ ಪ್ರಕರಣಗಳ ವಿಚಾರಣೆ ನಡೆಸಿತ್ತು. ತೀರ್ಪು ನೀಡಿದ ನ್ಯಾಯಾಧೀಶ ಸಿ.ಎಂ. ಗಂಗಾಧರ ಅವರು ಈ ಎಲ್ಲ ಪ್ರಕರಣಗಳಲ್ಲಿ, ಈ ನಾಲ್ವರೇ ಅಪರಾಧ ಎಸಗಿದ್ದಾರೆ ಎನ್ನುವುದನ್ನು ಸಾಬೀತುಪಡಿಸುವಲ್ಲಿ ತನಿಖಾಧಿಕಾರಿಗಳು ವಿಫಲರಾಗಿದ್ದಾರೆ.ಆದ್ದರಿಂದ ಇವರ ವಿರುದ್ಧ ಯುಎಪಿಎ ಮತ್ತು ಐಪಿಸಿ ಸೆಕ್ಷನ್ ಗಳ ಅಡಿಯಲ್ಲಿ ದಾಖಲಿಸಿರುವ ಪ್ರಕರಣಗಳನ್ನು ವಜಾ ಮಾಡಬಹುದಾಗಿದೆ ಎಂದು ಅಭಿಪ್ರಾಯಪಟ್ಟು ಆರೋಪಿಗಳನ್ನು ದೋಷಮುಕ್ತಗೊಳಿಸಿದ್ದಾರೆ. ಇನ್ನು ಈ ಪ್ರಕರಣದಲ್ಲಿ ಆರೋಪಿಗಳ ಪರವಾಗಿ ವಕೀಲ ಶಿವಮಣಿಧನ್ ವಾದ ಮಂಡಿಸಿದ್ದರು.