SHIVAMOGGA NEWS TODAY

ಶಿಕಾರಿಪುರ-ಆನಂದಪುರಕ್ಕೆ ಹೊಸ ಸರ್ಕಾರಿ ಬಸ್ ಸೇವೆ

ajjimane ganesh ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

New KSRTC Bus : ಆನಂದಪುರ: ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿದ್ದ ಶಿಕಾರಿಪುರದಿಂದ ಆನಂದಪುರದ ಮಾರ್ಗವಾಗಿ ಸಂಚರಿಸುವ ನೂತನ ಕೆಎಸ್‌ಆರ್‌ಟಿಸಿ ಸರ್ಕಾರಿ ಬಸ್‌ಗೆ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಚಾಲನೆ ನೀಡಿದ್ದಾರೆ.

ಸಮೀಪದ ಬೈರಾಪುರದಲ್ಲಿ ಹೊಸ ಬಸ್‌ಗೆ ಹಸಿರು ನಿಶಾನೆ ತೋರಿಸಿ ಮಾತನಾಡಿದ ಅವರು, ಕಳೆದ 2 ವರ್ಷಗಳಿಂದ ಈ ಮಾರ್ಗದಲ್ಲಿ ಸರ್ಕಾರಿ ಬಸ್ ಸೇವೆ (Bus service) ಆರಂಭಿಸಬೇಕೆಂದು ಸಾರ್ವಜನಿಕರು ನಿರಂತರವಾಗಿ ಮನವಿ ಸಲ್ಲಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಮಹಿಳೆಯರು, ವಿದ್ಯಾರ್ಥಿಗಳು ಮತ್ತು ಸಾಮಾನ್ಯ ಪ್ರಯಾಣಿಕರ ಅನುಕೂಲಕ್ಕಾಗಿ ಈ ಹೊಸ ಬಸ್ ಸೇವೆಯನ್ನು ಒದಗಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ 4,000 ಹೊಸ ಬಸ್‌ಗಳನ್ನು ಖರೀದಿಸಿದ್ದು, ಅವುಗಳಲ್ಲಿ 9 ಬಸ್‌ಗಳನ್ನು ಸಾಗರ ಘಟಕಕ್ಕೆ ನೀಡಲಾಗಿದೆ. ಮುಂಬರುವ ದಿನಗಳಲ್ಲಿ ಸಾಗರಕ್ಕೆ ಇನ್ನೂ 10 ಬಸ್‌ಗಳನ್ನು ನೀಡುವ ಭರವಸೆಯನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ನೀಡಿದ್ದಾರೆ ಎಂದು ಬೇಳೂರು ತಿಳಿಸಿದರು. ಬೆಳೆ ಮತ್ತು ಮನೆಹಾನಿಯಿಂದ ಸಂಕಷ್ಟಕ್ಕೆ ಒಳಗಾದ ಸಂತ್ರಸ್ತರಿಗೆ ಸರ್ಕಾರದಿಂದ ಪರಿಹಾರ (Compensation) ಬಿಡುಗಡೆಯಾಗಿದ್ದು, ಅದು ಶೀಘ್ರದಲ್ಲೇ ಫಲಾನುಭವಿಗಳನ್ನು ತಲುಪಲಿದೆ. ಹಾಗೆಯೇ, ಕಾಂಗ್ರೆಸ್ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ‘ಶಕ್ತಿ’ ಯೋಜನೆಯಿಂದಾಗಿ ಮಹಿಳೆಯರಿಗೆ ರಾಜ್ಯದಾದ್ಯಂತ ಸಂಚರಿಸಲು ಬಹಳಷ್ಟು ಸಹಕಾರಿಯಾಗಿದೆ. ಅದರಲ್ಲೂ ವಿಶೇಷವಾಗಿ ಧರ್ಮಸ್ಥಳದಂತಹ ಧಾರ್ಮಿಕ ಕೇಂದ್ರಗಳಿಗೆ ಪ್ರಯಾಣಿಸಲು ಸುಲಭವಾಗಿದೆ ಎಂದರು. ಸಾಗರ ಬಸ್ ಡಿಪೋದ ನವೀಕರಣಕ್ಕಾಗಿ 4 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಅವರು ಹೇಳಿದರು.

New KSRTC Bus

Shikaripur-Anandapura Gets Daily Bus Service

 

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ajjimane ganesh

ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯರ್​​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ