ಮಲೆನಾಡು ಟುಡೆ ಸುದ್ದಿ / ಬೆಂಗಳೂರು / ಮಲೆನಾಡಿಗರ ಜ್ವಲಂತ ಸಮಸ್ಯೆಗೊಂದು ಸದ್ಯದಲ್ಲಿಯೇ ವ್ಯಾಕ್ಸಿನ್ ಸಿಗುವ ಸಾಧ್ಯತೆ ಇದೆ. ಹೌದು, ಮಂಗನ ಕಾಯಿಲೆಗೆ ಅಥವಾ ಕೆಎಫ್ಡಿ ಎಂದು ಕರೆಯಲ್ಪಡುವ ಕಾಯಿಲೆಗೆ ನೂತನ ಲಸಿಕೆ ಸಿದ್ಧಗೊಂಡಿದ್ದು, ಪ್ರಸ್ತುತ ಕ್ಲಿನಿಕಲ್ ಟ್ರಯಲ್ ಹಂತದಲ್ಲಿದೆ. ಪ್ರಸಕ್ತ ವರ್ಷದ ಅಂತ್ಯದ ವೇಳೆಗೆ ಈ ಲಸಿಕೆಯು ಸಾರ್ವಜನಿಕರ ಬಳಕೆಗೆ ಮುಕ್ತವಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ವಿಧಾನಸಭೆಯಲ್ಲಿ ಪ್ರಕಟಿಸಿದ್ದಾರೆ.

ಸದನದಲ್ಲಿ ಈ ಬಗ್ಗೆ ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ ಮತ್ತು ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಮಂಗನ ಕಾಯಿಲೆ ನಿಯಂತ್ರಣಕ್ಕಾಗಿ ಪ್ರಸ್ತುತ ಬಳಕೆಯಲ್ಲಿರುವ ಚುಚ್ಚುಮದ್ದು ಅಷ್ಟಾಗಿ ಪರಿಣಾಮಕಾರಿಯಾಗಿಲ್ಲ ಎಂಬ ವರದಿಗಳು ಬಂದಿದ್ದವು. ಈ ಹಿನ್ನೆಲೆಯಲ್ಲಿ ತಾವೇ ಖುದ್ದಾಗಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ಐಸಿಎಂಆರ್) ಮುಖ್ಯಸ್ಥರನ್ನು ಭೇಟಿಯಾಗಿ ಹೊಸ ಲಸಿಕೆಗಾಗಿ ಮನವಿ ಸಲ್ಲಿಸಿದ್ದಾಗಿ ಅವರು ವಿವರಿಸಿದರು.
ಶಿವಮೊಗ್ಗ: ಭದ್ರಾ ಚಾನೆಲ್ನಲ್ಲಿ ಈಜಲು ಹೋದ 13 ವರ್ಷದ ಬಾಲಕ ನೀರುಪಾಲು
ಇದೀಗ ಇಂಡಿಯನ್ ನ್ಯೂರಾಲಾಜಿಕಲ್ ಸಂಸ್ಥೆಯ ತಜ್ಞರು ನೂತನ ಲಸಿಕೆಯನ್ನು ಶೋಧಿಸಿದ್ದು, ಇದರ ಪ್ರಾಯೋಗಿಕ ಪರೀಕ್ಷೆಗಳು ಪ್ರಗತಿಯಲ್ಲಿವೆ. ಈ ಲಸಿಕೆಯು ಬಹುತೇಕ ಯಶಸ್ವಿಯಾದ ಹಿನ್ನೆಲೆಯಲ್ಲಿ, ಈ ವರ್ಷದ ಕೊನೆಯ ಭಾಗದಲ್ಲಿ ಜನಸಾಮಾನ್ಯರಿಗೆ ವಿತರಿಸಲು ಲಭ್ಯವಾಗಲಿದೆ. ಆದುದರಿಂದ ಮಲೆನಾಡು ಭಾಗದ ನಾಗರಿಕರು ಈ ಕಾಯಿಲೆಯ ಬಗ್ಗೆ ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಮಲೆನಾಡು ಟುಡೆ ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್ Facebook , whatsapp , whatsapp chanel instagram, youtube, telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್ಗಳನ್ನು ಕ್ಲಿಕ್ ಮಾಡಿ ಓದಬಹುದು.

ಶಿವಮೊಗ್ಗ: ಮನೆಗೆ ಕ್ಯೂರಿಂಗ್ ಮಾಡುವಾಗ ಆಕಸ್ಮಿಕವಾಗಿ ಬಿದ್ದು ಗಾರೆ ಮೇಸ್ತ್ರಿ ಸಾವು
