nia karnataka/ ಲೋಕಾಯುಕ್ತ ರೇಡ್ ಬೆನ್ನಲ್ಲೆ 16 ಕಡೆಗಳಲ್ಲಿ ಎನ್​ಐಎ ದಾಳಿ!

nia karnataka/ After Lokayukta raid, NIA conducts raids at 16 locations / nia raid kamataka,

nia karnataka/ ಲೋಕಾಯುಕ್ತ ರೇಡ್ ಬೆನ್ನಲ್ಲೆ 16 ಕಡೆಗಳಲ್ಲಿ ಎನ್​ಐಎ ದಾಳಿ!

KARNATAKA NEWS/ ONLINE / Malenadu today/ May 31, 2023 SHIVAMOGGA NEWS

ಒಂದು ಕಡೆ ಲೋಕಾಯಕ್ತ ರೇಡ್ ನಡೆಯುತ್ತಿದ್ದರೇ ಇನ್ನೊಂದು ಕಡೆ ರಾಷ್ಟ್ರೀಯ ತನಿಖಾ ದಳ  NIA ರಾಜ್ಯದ ಕರಾವಳಿಯಲ್ಲಿ ದೊಡ್ಡ ಮಟ್ಟದ ದಾಳಿ ನಡೆಸಿದೆ. ಬೆಳಗ್ಗೆಬೆಳಗ್ಗೆ ದಕ್ಷಿಣ ಕನ್ನಡ ಜಿಲ್ಲೆ ಯ ಒಟ್ಟು 16 ಕಡೆಗಳಲ್ಲಿ ಎನ್​​ಐಎ ದಾಳಿ ನಡೆಸಿದದೆ. ಈ ಹಿಂದೆ ಬಿಹಾರದಲ್ಲಿ ನಡೆದಿದ್ದ ಪ್ರಧಾನಿ ನರೇಂದ್ರ ಮೋದಿ ಯವರ ಕಾರ್ಯಕ್ರಮದಲ್ಲಿ ದುಷ್ಕೃತ್ಯವೆಸಗಲು ಸಂಚು ರೂಪಿಸಿದ ಆರೋಪ ಸಂಬಂಧ ಈ ದಾಳಿ ನಡೆದಿದೆ ಎನ್ನಲಾಗುತ್ತಿದೆ. 

ಎಲ್ಲೆಲ್ಲಿ ಎನ್​ಐಎ ರೇಡ್​?

ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿದಂತೆ 16 ಕಡೆಗಳಲ್ಲಿ ದಾಳಿ ನಡೆದಿದ್ದು, ಹಲವರ ಮನೆ ಹಾಗೂ ಕಚೇರಿಗಳಲ್ಲಿ ಅಧಿಕಾರಿಗಳು ದಾಖಲಾತಿಗಳನ್ನ ಪರಿಶೀಲನೆ ನಡೆಸ್ತಿದ್ಧಾರೆ.  

ಶಿವಮೊಗ್ಗ ಸೇರಿದಂತೆ 7 ಜಿಲ್ಲೆಗಳಲ್ಲಿಂದು ಯಲ್ಲೋ ಅಲರ್ಟ್! ಹವಾಮಾನ ಇಲಾಖೆ ವರದಿಯಲ್ಲಿ ಗಾಳಿ, ಮಳೆ, ಸಿಡಿಲು, ಗುಡುಗಿನ ಬಗ್ಗೆ ಮಾಹಿತಿ!

ಶಿವಮೊಗ್ಗವೂ ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ ಜೂನ್ 4 ವರೆಗೂ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತನ್ನ ಹವಾಮಾನ ವರದಿಯಲ್ಲಿ ತಿಳಿಸಿದೆ. 

ಬೆಂಗಳೂರಿನಲ್ಲಿಅಧಿಕ ಮಳೆ

ಬೆಂಗಳೂರಿನಲ್ಲಿ ಜೂನ್ 4ರವರೆಗೂ ಅಧಿಕ ಮಳೆಯಾಗಲಿದೆ ಎಂದು ಹವಾಮಾನವರದಿಯಲ್ಲಿ ತಿಳಿಸಲಾಗಿದೆ. ಸಾಧಾರಣ ಹಾಗೂ ಗುಡುಗು ಸಿಡಿಲಿನೊಂದಿಗೆ ಅಧಿಕ ಮಳೆಯಾಗಲಿದೆ ಎಂದು ತಿಳಿಸಲಾಗದಿದೆ. 

7 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್! 

ನಿನ್ನೆ ಪ್ರಕಟಗೊಂಡಿರುವ ವರದಿಯ ಪ್ರಕಾರ ಏಳು ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್​ ಪ್ರಕಟಗೊಂಡಿದೆ.  8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ,  ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು,  ಕೋಲಾರ , ಶಿವಮೊಗ್ಗ ಜಿಲ್ಲೆಗಳಿಗೆ ಇವತ್ತು ಅಂದರೆ, May 31, 2023 ರಂದು  ಯೆಲ್ಲೋ ಅಲರ್ಟ್​ ನೀಡಲಾಗಿದೆ. 

ಎಲ್ಲೆಡೆ ಮಳೆ

ಇನ್ನೂ ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತು ಗುಡುಗು ಸಿಡಿಲಿನೊಂದಿಗೆ ಜಿಲ್ಲೆಯ ಬಹುಭಾಗಗಳಲ್ಲಿ ಮಳೆಯಾಗುವ ಸೂಚನೆಗಳಿವೆ. ಅಲ್ಲದೆ ತೀವ್ರವಾದ ಗಾಳಿ ಬೀಸುವ ಸಾಧ್ಯತೆ ಇದ್ದು, ಈ ಹಿಂದೆ ನೀಡಿದಂತೆ ಗಾಳಿಯ ವೇಗವನ್ನು ನಮೂದಿಸಿಲ್ಲ.