ತೀರ್ಥಹಳ್ಳಿಯಲ್ಲಿ NIA ರೇಡ್‌ ! ಶಿವಮೊಗ್ಗ ಪೊಲೀಸರು ರಾಮೇಶ್ವರಂ ಕಫೆ ಸ್ಫೋಟದ ಆರೋಪಿಯ ಗುರುತು ಹಿಡಿದಿದ್ದು ಹೇಗೆ ಗೊತ್ತಾ? JP Exclusive

ಹಂಚಿಕೊಳ್ಳಿ
WhatsApp Facebook X Telegram

Shivamogga  Mar 26, 2024  NIA raid in Thirthahalli, Shivamogga police , Rameswaram cafe blast ಬೆಂಗಳೂರಿನಲ್ಲಿ ನಡೆದಿರುವ ರಾಮೇಶ್ವರಂ ಕಫೆ ಸ್ಫೋಟ ಪ್ರಕರಣ ಸಂಬಂಧ ಎನ್‌ಐಎ ಅಧಿಕಾರಿಗಳು ಶಂಕಿತನ ಗುರುತು ಪತ್ತೆ ಹಚ್ಚಿದ್ದರು. ಇದರ ಹಿನ್ನೆಲೆಯಲ್ಲಿ ಇವತ್ತು ಎನ್‌ಐಎ ಅಧಿಕಾರಿಗಳು ತೀರ್ಥಹಳ್ಳಿಯಲ್ಲಿ ಎನ್‌ಐಎ ಅಧಿಕಾರಿಗಳು ರೇಡ್‌ ನಡೆಸಿದ್ದಾರೆ. 

ಶಿವಮೊಗ್ಗ ಪೊಲೀಸರಿಂದಲೇ ಆರೋಪಿಯ ಗುರುತು ಖಾತರಿ

ಈ ನಿಟ್ಟಿನಲ್ಲಿ ಶಿವಮೊಗ್ಗ ಪೊಲೀಸರು ಮಹತ್ವದ ಕ್ಲೂ ಬಿಟ್ಟುಕೊಟ್ಟಿದ್ದರು. ಶಿವಮೊಗ್ಗ ಜಿಲ್ಲೆ ಪೊಲೀಸರು ಇತ್ತೀಚೆಗೆ ಗಾಂಜಾ ಕೇಸ್‌ನಲ್ಲಿ ಓರ್ವ ಆರೋಪಿಯನ್ನ ಬಂಧಿಸಿದ್ದರು. ಆತ ರಾಮೇಶ್ವರಂ ಕಫೆ ಸ್ಫೋಟದ ಆರೋಪಿಯ ಗುರುತು ಪತ್ತೆ ಮಾಡಿದ್ದ. ಆತನ ಸಹೋದರನೇ ಆರೋಪಿಯಾಗಿದ್ದು, ಪೊಲೀಸರ ಬಳಿ ರಾಮೇಶ್ವರಂ ಕಫೆ ಸ್ಫೋಟದ ಆರೋಪಿಯ ಗುರುತು ಖಾತರಿಗೊಳಿಸಿದ್ದ. ಈ ಬಗ್ಗೆ ರಾಜ್ಯ ಹಾಗೂ ಕೇಂದ್ರ ಗುಪ್ತಚರ ಇಲಾಖೆಯು ಮಾಹಿತಿ ಪಡೆದುಕೊಂಡಿದ್ದು ಎನ್‌ಐಎ ಅಧಿಕಾರಿಗಳು ಇದೀಗ ದಾಳಿ ನಡೆಸಿದ್ದಾರೆ. 

ಶಿವಮೊಗ್ಗ ಐಸಿಸ್‌ ಮಾಡ್ಯುಲ್‌

ಶಿವಮೊಗ್ಗ ಐಸಿಸ್‌ ಮ್ಯಾಡುಲ್‌ ಮೇಲೆ ಎನ್‌ಐಎ ಅಧಿಕಾರಿಗಳ ಕಣ್ಣು ನೆಟ್ಟಿದ್ದು, ಮಹತ್ವದ ಮಾಹಿತಿ ಲಭ್ಯವಾಗಿದೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್‌ ಸ್ಟೇಷನ್‌ ಪೊಲೀಸರು ಈ ಹಿಂದೆ ಅರೆಸ್ಟ್‌ ಮಾಡಿದ್ದ ಆರೋಪಿಗಳು ಜಬೀ, ಯಾಸಿನ್‌, ಮಾಜ್‌ ಸೇರಿದಂತೆ ಹಲವರು ಕೇರಳ ಐಸಿಸ್‌ ಮ್ಯಾಡುಲ್‌ ಜೊತೆಗೆ ಸಂಪರ್ಕದಲ್ಲಿದ್ದರ ಬಗ್ಗೆ ಮಾಹಿತಿ ಸ್ಪಷ್ಟವಾಗಿದೆ. 

ಶಂಕಿತ ಚಟುವಟಿಕೆ 

ಇವರೆಲ್ಲರೂ ಐಸಿಸ್‌ ಸಂಘಟನೆ ಸೇರುವ ಸಲುವಾಗಿ ದುಷ್ಕೃತ್ಯಗಳನ್ನು ಎಸೆಗುತ್ತಿದ್ದರು. ಈ ಮೂಲಕ ತಮ್ಮ ಸಾಮರ್ಥ್ಯ ತೋರಿ ಸಂಘಟನೆಗೆ ಸೇರಲು ಮುಂದಾಗಿದ್ದರು ಎನ್ನಲಾಗಿದೆ.  ಐಸಿಸ್‌ ಸಂಘಟನೆಗೆ ರಿಕ್ಯೂಟ್‌ ಮಾಡುತ್ತಿರುವ ಆರೋಪಿಗಳಲ್ಲಿ ಅಪ್ಸರ್‌ ಫಾಷಾ, ಅರಾಫತ್‌ ಅಲಿ ಹಾಗೂ ಶಾರೀಖ್‌ ಮುಖ್ಯ ವ್ಯಕ್ತಿಗಳಾಗಿದ್ದಾರೆ. ದೇಶದ ಭದ್ರತಾ ಸಂಸ್ಥೆ ಇಂತಹ ವ್ಯಕ್ತಿಗಳ ಮೇಲೆ ಹಾಗೂ ಸಂಘಟನೆ ಮೇಲೆ ಕಣ್ಣಿಟ್ಟಿರುವ ಹಿನ್ನೆಲೆಯಲ್ಲಿ ಶಂಕಿತರು ತಮ್ಮ ಕಾರ್ಯತಂತ್ರವನ್ನು ಸಹ ಬದಲಾಯಿಸಿದ್ದರು ಎಂಬ ಮಾಹಿತಿ ಇದೆ. ಆರೋಪಿಗಳು ಯಾವುದೋ ಒಂದು ಶಂಕಿತ ಚಟುವಟಿಕೆ ನಡೆಸಿ ಎನ್‌ಐಎ ಅಧಿಕಾರಿಗಳ ಟಾರ್ಗೆಟ್‌ ಆದ ಬಳಿಕವಷ್ಟೆ ಅವರನ್ನ ಆತಂಕವಾದಿ ಸಂಘಟನೆಗಳು ತಮ್ಮ ಸಂಘಟನೆಗೆ ಸೇರಿಸಿಕೊಳ್ಳುತ್ತಿವೆ. ಈ ಕಾರಣಕ್ಕೆ ಮೊದಲು ಯಾಸೀನ್‌, ಮಾಜ್‌,  ನಂತರ ಶಾರೀಖ್‌,  ಇದೀಗ ಮುಸಾವೀರ್‌ ಅಲಿಯಾಸ್‌ ಶಾಜೀಬ್‌ ದುಷ್ಕೃತ್ಯಗಳನ್ನು ಎಸೆಗಿದ್ದಾರೆ ಎನ್ನಲಾಗಿದೆ. 

ತೀರ್ಥಹಳ್ಳಿ ಐದಕ್ಕೂ ಹೆಚ್ಚು ಮಂದಿ ಮಿಸ್ಸಿಂಗ್‌ 

ಶಾಜಿಬ್‌ ಹಾಗೂ ಮತೀನ್‌ ಬೆಂಗಳೂರಿನಲ್ಲಿ ನಡೆದ ಸ್ಫೋಟದ ಕೃತ್ಯದಲ್ಲಿ ಪಾಲ್ಗೊಂಡಿದ್ದು, ಅವರ ಕೈವಾಡ ಶಿವಮೊಗ್ಗ ತುಂಗಾ ನದಿ ತೀರದ ಟ್ರಯಲ್‌ ಬ್ಲಾಸ್ಟ್‌ ಹಾಗೂ ಮಂಗಳೂರು ಕುಕ್ಕರ್‌ ಬ್ಲಾಸ್ಟ್‌ ಪ್ರಕರಣದಲ್ಲಿಯು ಇರುವುದು ಎನ್‌ಐಎ ಅಧಿಕಾರಿಗಳಿಗೆ ತಿಳಿದಿದೆ. ಇಷ್ಟೆ ಅಲ್ಲದೆ ತೀರ್ಥಹಳ್ಳಿಯಲ್ಲಿ ಐದಕ್ಕೂ ಹೆಚ್ಚು ಮಂದಿ ಮಿಸ್ಸಿಂಗ್‌ ಇದ್ದು, ಅವರ ಸುಳಿವು ಇದುವರೆಗೂ ಪತ್ತೆಯಾಗಿಲ್ಲ. ಈ ಬಗ್ಗೆ ಶಿವಮೊಗ್ಗ ಪೊಲೀಸ್‌ ಇಲಾಖೆಯು ಹೆಚ್ಚಿನ ಗಮನ ಹರಿಸುತ್ತಿದೆ. ಇದರ ನಡುವೆ ಎನ್‌ಐಎ ಅಧಿಕಾರಿಗಳು ತೀರ್ಥಹಳ್ಳಿಯಲ್ಲಿ ಹೆಚ್ಚಿನ ವಿಚಾರಣೆ ನಡೆಸ್ತಿದೆ. 

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor