Wednesday, 30 Jul 2025
Subscribe
Malenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
  • 🔥
  • SHIVAMOGGA NEWS TODAY
  • STATE NEWS
  • POLITICS
  • NATIONAL NEWS
  • ARECANUT RATE
  • INFORMATION NEWS
  • Uncategorized
  • DISTRICT
  • SHIMOGA NEWS LIVE
  • RAIN NEWS LIVE
Font ResizerAa
Malenadu TodayMalenadu Today
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Search
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Have an existing account? Sign In
Follow US
© 2022 Foxiz News Network. Ruby Design Company. All Rights Reserved.
SHIVAMOGGA NEWS TODAYDISTRICT

ಆನೆ ದಾಳಿ ಸಾವು, ಪ್ರತಿಭಟನೆಗೆ ಮಣಿದ ಸರ್ಕಾರ, ಆನೆ ಸೆರೆ ಕಾರ್ಯಾಚರಣೆ ಆರಂಭ

prathapa thirthahalli
Last updated: July 28, 2025 3:24 pm
Prathapa thirthahalli - content producer
Share
SHARE

NR Pura Taluk ಆನೆ ದಾಳಿ ಸಾವು, ಪ್ರತಿಭಟನೆಗೆ ಮಣಿದ ಸರ್ಕಾರ, ಆನೆ ಸೆರೆ ಕಾರ್ಯಾಚರಣೆ ಆರಂಭ

NR Pura Taluk ಚಿಕ್ಕಮಗಳೂರು, ಎನ್.ಆರ್.ಪುರ ತಾಲ್ಲೂಕು: ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲ್ಲೂಕಿನ ಬಾಳೆಹೊನ್ನೂರಿನಲ್ಲಿ ನಡೆದ ಆನೆ ದಾಳಿಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಸ್ಥಳೀಯರು ಮತ್ತು ವಿವಿಧ ಸಂಘಟನೆಗಳ ತೀವ್ರ ಆಕ್ರೋಶಕ್ಕೆ ರಾಜ್ಯ ಸರ್ಕಾರ ಕೊನೆಗೂ ಮಣಿದಿದೆ.

ಮೃತದೇಹವನ್ನಿಟ್ಟುಕೊಂಡು ಬಾಳೆಹೊನ್ನೂರು ಅರಣ್ಯ ವಲಯ ಕಚೇರಿ ಎದುರು ನೂರಾರು ಮಂದಿ ಪ್ರತಿಭಟನೆ ನಡೆಸಿ, ಚಿಕ್ಕಮಗಳೂರು-ಶೃಂಗೇರಿ ರಾಜ್ಯ ಹೆದ್ದಾರಿಯನ್ನು ಸಂಪೂರ್ಣ ಬಂದ್ ಮಾಡಿದರು. ಅರಣ್ಯ ಸಚಿವ ಈಶ್ವರ ಖಂಡ್ರೆ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಮತ್ತು ಸಂಸದರು ಸ್ಥಳಕ್ಕೆ ಬರುವವರೆಗೂ ಪ್ರತಿಭಟನೆಯನ್ನು ಹಿಂಪಡೆಯುವುದಿಲ್ಲ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದರು.

- Advertisement -

ಮಲೆನಾಡು ಟುಡೆ ವಾಟ್ಸಾಪ್ ಗ್ರೂಪ್​ ಸೇರಲು ಇಲ್ಲಿ ಕ್ಲಿಕ್ ಮಾಡಿ

ರೈತರ ಪ್ರತಿಭಟನೆಗೆ ಮಣಿದ ಸರ್ಕಾರ

car decor
NES Head Office, Balaraja Urs Road, Shivamogga

ಪ್ರತಿಭಟನೆಯ ಕಾವು ಹೆಚ್ಚುತ್ತಿದ್ದಂತೆ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಕೂಡಲೇ ಆನೆ ಸೆರೆಗೆ ಮುಂದಾಗಿದೆ. ರೈತರ ಪ್ರತಿಭಟನೆ ಮುಗಿಯುವ ಮೊದಲೇ ಶಿವಮೊಗ್ಗದ ಸಕ್ರೆಬೈಲು ಆನೆ ಬಿಡಾರದಿಂದ ಬಾಲಣ್ಣ, ಬಹದ್ದೂರು, ಸೋಮಣ್ಣ ಮತ್ತು ಸಾಗರ್ ಎಂಬ ನಾಲ್ಕು ಕುಮ್ಕಿ ಆನೆಗಳನ್ನು ಬಾಳೆಹೊನ್ನೂರಿಗೆ ಸಾಗಿಸಲಾಗಿದೆ.

ಸ್ಥಳದಲ್ಲಿದ್ದ ಅಧಿಕಾರಿಗಳು, ತಕ್ಷಣವೇ ಆನೆ ಸೆರೆ ಹಿಡಿಯುವ ಕಾರ್ಯಾಚರಣೆ ಆರಂಭಿಸುತ್ತೇವೆ ಎಂದು ರೈತರಿಗೆ ಭರವಸೆ ನೀಡಿದರು. ಅದರಂತೆ, ಇಂದು ಮಧ್ಯಾಹ್ನದಿಂದಲೇ ಬಾಳೆಹೊನ್ನೂರಿನಲ್ಲಿ ಆನೆ ಸೆರೆ ಕಾರ್ಯಾಚರಣೆ ಆರಂಭಗೊಂಡಿದೆ. ರೈತರ ಕಷ್ಟಕ್ಕೆ ಸರ್ಕಾರ ಇಷ್ಟೊಂದು ವೇಗವಾಗಿ ಸ್ಪಂದಿಸಿದ್ದು ಇದೇ ಮೊದಲು ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.

ಆನೆ ಸೆರೆ ಹಿಡಿಯುವ ಕಾರ್ಯಾಚರಣೆಗಾಗಿ ಕೊಡಗು, ಮೈಸೂರು ಮತ್ತು ಶಿವಮೊಗ್ಗದಿಂದ ವಿಶೇಷ ವೈದ್ಯರ ತಂಡಗಳು ಆಗಮಿಸಿವೆ. ಅರಣ್ಯ ಇಲಾಖೆ ಮತ್ತು ಇ.ಟಿ.ಎಫ್. (ಎಲಿಫೆಂಟ್ ಟಾಸ್ಕ್ ಫೋರ್ಸ್) ಸಿಬ್ಬಂದಿ ಸಹ ಕಾರ್ಯಾಚರಣೆಗೆ ಸನ್ನದ್ಧರಾಗಿದ್ದಾರೆ. ಆನೆ ಹಾವಳಿಯಿಂದ ತತ್ತರಿಸಿದ್ದ ಸ್ಥಳೀಯ ರೈತರು, ಸರ್ಕಾರದ ಈ ತಕ್ಷಣದ ಕ್ರಮದಿಂದ ಸ್ವಲ್ಪ ಮಟ್ಟಿಗೆ ನಿಟ್ಟುಸಿರು ಬಿಟ್ಟಿದ್ದಾರೆ.

NR Pura Taluk ಪ್ರತಿಭಟನೆ ನಡೆಸುತ್ತಿರುವ ಸಾರ್ವಜನಿಕರು
NR Pura Taluk ಪ್ರತಿಭಟನೆ ನಡೆಸುತ್ತಿರುವ ಸಾರ್ವಜನಿಕರು

 

 

malenadutoday add
Share This Article
Facebook Whatsapp Whatsapp Telegram Threads Copy Link
prathapa thirthahalli
ByPrathapa thirthahalli
content producer
Follow:
Prathapa thirthahalli - Malenadu Today : ತೀರ್ಥಹಳ್ಳಿ ತಾಲ್ಲೂಕು ಗಬಡಿ ಮೂಲದ ಪತ್ರಕರ್ತ ಪ್ರತಾಪ್ ತೀರ್ಥಹಳ್ಳಿ ಕಳೆದ ಮೂರು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ಮಲೆನಾಡು ಟುಡೆಯಲ್ಲಿ content producer ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Previous Article ಮಾಧ್ಯಮಗಳು ಧರ್ಮಗುರುಗಳ ಆಯುಧವಾಗಿ ಪರಿಣಮಿಸಿವೆ: ದಿನೇಶ್ ಅಮೀನ್‌ಮಟ್ಟು ಕಳವಳ
Next Article Fighter Jet in shivamogga ಸ್ಥಳ ವೀಕ್ಷಣೆ ಮಾಡುತ್ತಿರುವ ಶಾಸಕರು ಹಾಗು ಆಯುಕ್ತರು ಶಿವಮೊಗ್ಗಕ್ಕೆ ಮೊದಲ ಬಾರಿಗೆ ಯುದ್ಧ ವಿಮಾನ, ಶಾಸಕರು ಮತ್ತು ಆಯುಕ್ತರಿಂದ ಸ್ಥಳ ಪರಿಶೀಲನೆ
Leave a Comment

Leave a Reply Cancel reply

Your email address will not be published. Required fields are marked *

You Might Also Like

SHIVAMOGGA NEWS TODAY

ಯಶಸ್ವಿನಿ ಯೋಜನೆಯಡಿ ನೋಂದಣಿಗೆ ಅವಕಾಶ | ಲಾಸ್ಟ್‌ ಡೇಟ್‌ ಯಾವಾಗ

By 131
sn channabasappa
SHIVAMOGGA NEWS TODAYPOLITICS

sn channabasappa 20-06-25:  ತುಂಗಾ ಹಳೇ ಸೇತುವೆ ಜಾಗದಲ್ಲಿ ನಿರ್ಮಾಣವಾಗುತ್ತಾ ಹೊಸ ಸೇತುವೆ | ಶಾಸಕರಿಂದ ಮಹತ್ವದ ಹೆಜ್ಜೆ

By Prathapa thirthahalli
SHIVAMOGGA NEWS TODAY

ಮನೆಗೆ ಕಲ್ಲು, ಮನೆಯವರ ಮೇಲೆ ಹಲ್ಲೆ | ರೋಡಲ್ಲೆ ಕೇಕ್‌ ಕಟ್‌, ಕೇಳಿದ್ದಕ್ಕೆ ಕಣ್ಣಿಗೆ ಪೆಟ್ಟು | ರೋಡಲ್ಲಿ ಸಿಕ್ಕಮಾಜಿ ಸಚಿವ, ಚಟ್‌ ಪಟ್‌ ನ್ಯೂಸ್

By 13

ಕ್ರಾಂತಿದೀಪ ಪತ್ರಿಕೆಯ ಸಂಪಾದಕ ಎನ್ ಮಂಜುನಾಥ್‌ರವರಿಗೆ ಅಭಿನಂದನಾ ಕಾರ್ಯಕ್ರಮ

By 131
Malenadu Today
Facebook Twitter Youtube Rss Medium

About US

 

Malenadu Today Jana Manada Jeevanadi Daily News Media and kannada news channel and shimoga News , organisation that has been providing special reports of public news shivamogga . The purpose of MalenaduToday or Malnadtoday is to bring interesting news from Shimoga, Chikkamagaluru, Hassan, Davanagere, Haveri, Uttara Kannada and the wonders of Malnad, which are hitherto unknown to the people.

Top Categories
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA
Usefull Links
  • SHIVAMOGGA NEWS TODAY
  • ARECANUT RATE
  • STATE NEWS
  • POLITICS
  • INFORMATION NEWS
  • DISTRICT
  • NATIONAL NEWS
  • JP STORY
  • RAIN NEWS LIVE
  • SAGARA

© Malenadu Today kannada News. All Rights Reserved.

Welcome Back!

Sign in to your account

Username or Email Address
Password

Lost your password?

Not a member? Sign Up