ಡಿಗ್ರಿಯಾದವರಿಗೆ 3 ಸಾವಿರ/ ಡಿಪ್ಲೋಮಾ ಓದಿದವರಿಗೆ 1.5 ಸಾವಿರ! ನಿರುದ್ಯೋಗಿಗಳಿಗೆ ಮಾಸಿಕ ಭತ್ಯೆ ಪ್ಯಾಕೇಜ್​ಗೆ ಶಿವಮೊಗ್ಗದಲ್ಲಿ ಸಂಭ್ರಮ

NSUI celebrates Congress guarantee announcement for unemployed graduate youth

ಡಿಗ್ರಿಯಾದವರಿಗೆ 3 ಸಾವಿರ/ ಡಿಪ್ಲೋಮಾ ಓದಿದವರಿಗೆ 1.5 ಸಾವಿರ! ನಿರುದ್ಯೋಗಿಗಳಿಗೆ ಮಾಸಿಕ ಭತ್ಯೆ ಪ್ಯಾಕೇಜ್​ಗೆ ಶಿವಮೊಗ್ಗದಲ್ಲಿ ಸಂಭ್ರಮ
ಡಿಗ್ರಿಯಾದವರಿಗೆ 3 ಸಾವಿರ/ ಡಿಪ್ಲೋಮಾ ಓದಿದವರಿಗೆ 1.5 ಸಾವಿರ! ನಿರುದ್ಯೋಗಿಗಳಿಗೆ ಮಾಸಿಕ ಭತ್ಯೆ ಪ್ಯಾಕೇಜ್​ಗೆ ಶಿವಮೊಗ್ಗದಲ್ಲಿ ಸಂಭ್ರಮ

MALENADUTODAY.COM  |SHIVAMOGGA| #KANNADANEWSWEB

ಮುಂಬರುವ  ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್​ ನೀಡುತ್ತಿದೆ. ಇದಕ್ಕೆ ಪೂರಕವಾಗಿ ನಾಲ್ಕನೇ  ಗ್ಯಾರಂಟಿಯಾಗಿ ನಿರುದ್ಯೋಗಿ ಯುವಕರಿಗಾಗಿ ‘ಯುವನಿಧಿ’ ಅಡಿಯಲ್ಲಿ  ನಿರುದ್ಯೋಗ ಭತ್ಯೆ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಇವತ್ತು ಶಿವಮೊಗ್ಗದಲ್ಲಿ  ಎನ್.ಎಸ್.ಯು.ಐ. ಕಾರ್ಯಕರ್ತರು ಭಗವಾನ್ ಮಹಾವೀರ ವೃತ್ತದಲ್ಲಿ ಇಂದು ಸಂಜೆ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ಶಿವಮೊಗ್ಗ ಡಿಸಿ ಆಫೀಸ್ ಆವರಣ ಗೋಮೂತ್ರದಿಂದ ಶುದ್ಧ! ಪೊಲೀಸರು ತಡೆದರೂ ನಡೀತು ಗೋಮೂತ್ರ ಸ್ವಚ್ಚತೆ!

ಈ ಸಂದರ್ಭದಲ್ಲಿ  ಮಾತನಾಡಿದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್, ಕಾಂಗ್ರೆಸ್ ನುಡಿದಂತೆ ನಡೆಯುತ್ತಿದೆ. ಬಿಜೆಪಿ ಸರ್ಕಾರ ಬಂದ ಮೇಲೆ ನಿರುದ್ಯೋಗ ತಾಂಡವವಾಡುತ್ತಿದೆ. ವಿದ್ಯಾವಂತ ಯುವಕರು ನಿರುದ್ಯೋಗದಿಂದ ಭ್ರಮನಿರಸನಕ್ಕೊಳಗಾಗಿದ್ದಾರೆ. ಅವರಲ್ಲಿ ಭರವಸೆ ಮೂಡಿಸುವ ನಿಟ್ಟಿನಲ್ಲಿ ರಾಹುಲ್ ಗಾಂಧಿಯವರು ಯುವನಿಧಿ ಅಡಿಯಲ್ಲಿ ಘೋಷಿಸಿರುವ ನಿರುದ್ಯೋಗಿ ಪದವೀಧರರಿಗೆ ಮಾಸಿಕ 3 ಸಾವಿರ, ನಿರುದ್ಯೋಗಿ ಡಿಪ್ಲೊಮಾ ಪದವೀಧರರಿಗೆ ಮಾಸಿಕ 1500 ರೂ.ಗಳ ನಿರುದ್ಯೋಗ ಭತ್ಯೆ ಆಶಾಕಿರಣವಾಗಿದೆ ಎಂದರು.

ಮಾಜಿ ವಿಧಾನ ಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್ ಮಾತನಾಡಿ, ಕಾಂಗ್ರೆಸ್ ಜನಪರವಾಗಿರುವ ಪಕ್ಷ. ಕಾಂಗ್ರೆಸ್ ಆಡಳಿತ ನಡೆಸಿದಾಗ ಎಂದೂ ಜನವಿರೋಧಿಯಾಗಿ ನಡೆದುಕೊಂಡಿಲ್ಲ. ಈ ಹಿಂದೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಬಹುತೇಕ ಎಲ್ಲಾ ಭರವಸೆಗಳನ್ನೂ ಈಡೇರಿಸಿತ್ತು. ಈಗ ನಿರುದ್ಯೋಗಿ ಯುವಕರಿಗೆ ಆಸರೆಯಾಗಲಿ ಎಂದು ಯುವನಿಧಿ ಯೋಜನೆಯನ್ನು ಘೋಷಿಸಿದ್ದಾರೆ. ಯುವಕರು ಕಾಂಗ್ರೆಸ್ ಪರವಾಗಿರಬೇಕೆಂದು ಮನವಿ ಮಾಡಿದರು.

*ಡಾನ್ ಆಗುವ ಆಸೆಯಲ್ಲಿ ಮಂಗಳೂರಿಂದ ಶಿವಮೊಗ್ಗಕ್ಕೆ ಬಂದವ ಫಸ್ಟ್​ ಕೇಸ್​ನಲ್ಲಿಯೇ ಫಿಟ್​ ಆದ! ರೋಚಕವಾಗಿದೆ ಒಂದು ಮಾತ್ರೆ ಕಥೆ*

ಮಾಜಿ ವಿಧಾನಸಭೆ ಸದಸ್ಯ ಕೆ.ಬಿ. ಪ್ರಸನ್ನಕುಮಾರ್ ಮಾತನಾಡಿ, ಕಾಂಗ್ರೆಸ್ ಪಕ್ಷ ಈಗಾಗಲೇ ರಾಜ್ಯದ ಜನತೆಗೆ ಮೂರು ಗ್ಯಾರಂಟಿಗಳನ್ನು ನೀಡಿದೆ. ಮನೆಯೊಡತಿಗೆ ಮಾಸಿಕ 2 ಸಾವಿರ ರೂ. ಭತ್ಯೆ, ಪ್ರತಿ ವ್ಯಕ್ತಿಗೆ ತಲಾ 10 ಕೆ.ಜಿ. ಅಕ್ಕಿ, ಪ್ರತಿ ಮನೆಗೆ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವ ಗ್ಯಾರಂಟಿಯನ್ನು ನೀಡಿದೆ. ಈಗ ನಾಲ್ಕನೇ ಗ್ಯಾರಂಟಿಯಾಗಿ ನಿರುದ್ಯೋಗಿ ಪದವೀಧರರಿಗೆ ಮಾಸಿಕ 1500-3000 ರೂ.ಗಳ ನಿರುದ್ಯೋಗ ಭತ್ಯೆಯ ಗ್ಯಾರಂಟಿ ನೀಡುತ್ತಿದ್ದು, ಕಾಂಗ್ರೆಸ್ ಎಂದಿಗೂ ಜನಪರ, ಯುವಪರ ಪಕ್ಷವಾಗಿದೆ ಎಂದರು.

ಕಾಂಗ್ರೆಸ್ ಮುಖಂಡರಾದ ಎನ್.ರಮೇಶ್, ಎಸ್.ಪಿ. ದಿನೇಶ್ ಮಾತನಾಡಿ, ಬಿಜೆಪಿಯ ಭ್ರಷ್ಟ ಆಡಳಿತದಿಂದಾಗಿ ಇಂದು ದೇಶಾದ್ಯಂತ ಯುವಕರು ನಿರುದ್ಯೋಗಿಗಳಾಗಿದ್ದಾರೆ. ಬಿಜೆಪಿ ಉದ್ಯೋಗ ಸೃಷ್ಟಿಸುವ ಬದಲು ನಿರುದ್ಯೋಗ ಸೃಷ್ಟಿಸುತ್ತಿದೆ. ಕಾಂಗ್ರೆಸ್ ಯುವಕರಲ್ಲಿ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡುತ್ತದೆ. ಯುವಜನತೆ ಬಿಜೆಪಿಯ ದುರಾಡಳಿತವನ್ನು ಖಂಡಿಸಬೇಕೆಂದರು.

ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS| sagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynewsChilsagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್