ಶಿವಮೊಗ್ಗ: ಅಪರೂಪ ಎಂಬಂತೆ ಕೇಸ್ವೊಂದರಲ್ಲಿ ಅಧಿಕಾರಿಯೊಬ್ಬರಿಗೆ ಶಿಕ್ಷೆಯಾಗಿದೆ. ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಅಧಿಕಾರಿಯನ್ನ ಶಿಕ್ಷೆಗೆ ಗುರಿಪಡಿಸಲಾಗಿದೆ. ಪ್ರಕರಣದಲ್ಲಿ ಅಧಿಕಾರಿಗೆ ಎರಡು ವರ್ಷ ಶಿಕ್ಷೆ ಯಾಗಿದೆ. ಅಲ್ಲದೆ 40 ಸಾವಿರ ದಂಡ ವಿಧಿಸಲಾಗಿದೆ.

ಕೋರ್ಟ್ ಪ್ರಕರಣ /ಅಧಿಕಾರಿಗೆ 2 ವರ್ಷ ಜೈಲು
ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆಬಾವಿ ಕೊರೆಸಿಕೊಡಲು ಲಂಚ ಪಡೆದು ಲೋಕಾಯುಕ್ತ ಬಲೆಗೆ ಬಿದ್ದಿದ್ದ ಅಧಿಕಾರಿಯೊಬ್ಬರಿಗೆ ಶಿವಮೊಗ್ಗದ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಹಾಗೂ ವಿಶೇಷ ನ್ಯಾಯಾಲಯ 2 ವರ್ಷಗಳ ಕಾರಾಗೃಹ ಶಿಕ್ಷೆ ಮತ್ತು 40,000 ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ.
ಪ್ರಕರಣದ ವಿವರ
ಸಾಗರ ತಾಲೂಕಿನ ಹೊಸಗುಂದ ಗ್ರಾಮದಶ್ರೀ ಹೆಚ್.ಎಸ್. ಜನಾರ್ದನ ಅವರು 2015-16ನೇ ಸಾಲಿನಲ್ಲಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಕ್ಕೆ ಗಂಗಾ ಕಲ್ಯಾಣ ಯೋಜನೆಯಡಿ ಕೊಳವೆಬಾವಿಗಾಗಿ ಅರ್ಜಿ ಸಲ್ಲಿಸಿದ್ದರು. ಕೊಳವೆಬಾವಿ ಕೊರೆಯಿಸಿಕೊಡುವ ಸಲುವಾಗಿ ನಿಗಮದ ಶಿವಮೊಗ್ಗ ಕಚೇರಿಯ ಜಿಲ್ಲಾ ವ್ಯವಸ್ಥಾಪಕರಾದ ಆರ್.ಎಸ್. ಪರಮೇಶ್ವರಪ್ಪ ಅವರು ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ದಿನಾಂಕ 13-07-2017 ರಂದು ಕಚೇರಿಯಲ್ಲಿ 10,000 ರೂ. ಲಂಚ ಪಡೆಯುವಾಗ ಆರೋಪಿಯನ್ನು ಲೋಕಾಯುಕ್ತ ಪೊಲೀಸರು ಟ್ರ್ಯಾಪ್ ಮಾಡಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ದಿನಾಂಕ 02-04-2026 ರಂದು ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ ಆರೋಪಿಗೆ ಶಿಕ್ಷೆ ಪ್ರಕಟಿಸಿದೆ. ಸರ್ಕಾರದ ಪರವಾಗಿ ವಿಶೇಷ ಸಾರ್ವಜನಿಕ ಅಭಿಯೋಜಕರಾದ ಎಂ.ಡಿ. ಸುಂದರ್ ರಾಜ್ ಅವರು ವಾದ ಮಂಡಿಸಿದ್ದರು.
ಗಂಗಾ ಕಲ್ಯಾಣ ಯೋಜನೆಯಡಿ ಲಂಚ: ಅಧಿಕಾರಿಗೆ 2 ವರ್ಷ ಜೈಲು, 40 ಸಾವಿರ ದಂಡBribe for Ganga Kalyana Scheme: Officer Gets 2 Years Jail and 40K Fine in Shivamogga
ನಮ್ಮ ಮಲೆನಾಡು ಟುಡೆಯ ವಿಡಿಯೋಗಳನ್ನು ನೀವಿಲ್ಲಿ ನೋಡಬಹುದು: https://www.youtube.com/shorts/x8I63rpLvyw