ಚಾಲಕನ ನಿಯಂತ್ರಣ ತಪ್ಪಿ ಕಾಂಪೌಂಡ್ಗೆ ಗುದ್ದಿದ ಒಮಿನಿ / ಓರ್ವ ಸಾವು!
Omni loses control of the driver and hits the compound Death on the spot!
KARNATAKA NEWS/ ONLINE / Malenadu today/ Apr 27, 2023 GOOGLE NEWS
ಸಾಗರ/ಶಿವಮೊಗ್ಗ/ ಇಲ್ಲಿನ ಗೌತಮಪುರದ ಬಳಿಯಲ್ಲಿ ನಿನ್ನೆ ಅಪಘಾತವೊಂದು ಸಂಭವಿಸಿದ್ದು ಘಟನೆಯಲ್ಲಿ ಓರ್ವ ಯುವಕ ಸಾವನ್ನಪ್ಪಿದ್ದಾನೆ.
ಇದನ್ನು ಕೂಡ ಓದಿ- ಶಿವಮೊಗ್ಗದಲ್ಲಿ ಬಸ್ ಹತ್ತಿದ ಎಸ್ಪಿ ಮಿಥುನ್ ಕುಮಾರ್, ಡಿಸಿ ಡಾ.ಆರ್ ಸೆಲ್ವಮಣಿ! ವಿವರ ಇಲ್ಲಿದೆ
ಘಟನೆ ನಡೆದಿದ್ದೇಗೆ?
ಆನಂದಪುರ ಸಮೀಪದ ಗೌತಮಪುರದ ಬಳಿ ಒಮಿನಿಯೊಂದು ಕಾಂಪೌಂಡಿಗೆ ಡಿಕ್ಕಿ ಹೊಡೆದ ಪರಿಣಾಮ, ವಾಹನದಲ್ಲಿದ್ದ ಯುವಕ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾನೆ. ಮೃತನನ್ನ ಪ್ರಜ್ವಲ್ ಎಂದು ಗುರುತಿಸಲಾಗಿದೆ.
ಓದಿ / ಶಿವಮೊಗ್ಗದಲ್ಲಿ ಬಸ್ ಹತ್ತಿದ ಎಸ್ಪಿ ಮಿಥುನ್ ಕುಮಾರ್, ಡಿಸಿ ಡಾ.ಆರ್ ಸೆಲ್ವಮಣಿ! ವಿವರ ಇಲ್ಲಿದೆ
ಗೌತಮಪುರದಿಂದ ಕೋಟೆ ಕೊಪ್ಪಕ್ಕೆ ಹೋಗುತ್ತಿದ್ದ ವೇಳೆ, ಚಾಲಕನ ನಿಯಂತ್ರಣ ತಪ್ಪಿ ಒಮಿನಿ ಅಲ್ಲಿಯೇ ಬದಿಯಲ್ಲಿದ್ದ ಕಾಂಪೌಂಡ್ಗೆ ಗುದ್ದಿದೆ. ಪರಿಣಾಮ ಒಮಿನಿ ವಾಹನ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಅಪಘಾತದ ರಭಸಕ್ಕೆ ಕಾರಿನ್ಲಲಿದ್ದವರಿಗೆ ತೀವ್ರ ಪೆಟ್ಟು ಬಿದ್ದಿದೆ. ಇನ್ನೂ ಆನಂದಪುರ ಪೊಲೀಸ್ ಸ್ಟೇಷನ್ನಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ಓದಿ / ಡಿಪ್ಲೋಮೋ ಕೋರ್ಸ್ಗೆ ಅರ್ಜಿ ಆಹ್ವಾನ/ ತರಬೇತಿ ಬಳಿಕ 100 % ಉದ್ಯೋಗಾವಕಾಶ/ ವಿವರ ಇಲ್ಲಿದೆ
ಓದಿ / ಶಿವಮೊಗ್ಗದ ರಸ್ತೆಗಳಲ್ಲಿ ಯುವಕನ ಬೈಕ್ ಸ್ಟಂಟ್/ ಸೈಲೆಂಟ್ ಆಗಿ ಪುಂಡರಿಗೆ ವಾರ್ನಿಂಗ್ ಕೊಟ್ಟ ಪೊಲೀಸ್
Malenadutoday.com Social media