ಸಾರ್ವಜನಿಕರಲ್ಲಿ ವಿನಂತಿ! ಜೂನ್​ 07,08 ಮತ್ತು 09 ರಂದು ಶಿವಮೊಗ್ಗದ ಈ ಪ್ರಮುಖ ಭಾಗಗಳಲ್ಲಿ ದಿನವಿಡಿ ವಿದ್ಯುತ್ ಇರೋದಿಲ್ಲ

KARNATAKA NEWS/ ONLINE / Malenadu today/ Jun 5, 2023 SHIVAMOGGA NEWS

ಶಿವಮೊಗ್ಗ/ ಜೂ. 07 ರಂದು ವಿದ್ಯುತ್ ವ್ಯತ್ಯಯ; ಸಹಕರಿಸಲು ಮನವಿ

ಶಿವಮೊಗ್ಗ ನಗರದ ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ಜೂ. 07 ರಂದು  ಬೆಳಿಗ್ಗೆ 09-30 ರಿಂದ ಸಂಜೆ 05-00 ಗಂಟೆವರೆಗೆ ಎಫ್-5 ಫೀಡರ್ ವ್ಯಾಪ್ತಿಯಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ 

ಎಲ್ಲೆಲ್ಲಿ?

 ಎಂ.ಆರ್.ಎಸ್. ವಾಟರ್ ಸಪ್ಲೈ,  ಎಂ.ಆರ್.ಎಸ್.  ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಎಪ್-3 ಫೀಡರ್ ವ್ಯಾಪ್ತಿಯ ಜ್ಯೋತಿನಗರ, ವಿದ್ಯಾನಗರ, ಕಂಟ್ರಿ ಕಬ್ಲ್ ರಸ್ತೆ, ಚಿಕ್ಕಲ್, ಗುರುಪುರ, ಪುರಲೆ, ಸಿದ್ದೇಶ್ವರ ನಗರ, ಶಾಂತಮ್ಮ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶ, ಎಫ್-2 ಫೀಡರ್ ವ್ಯಾಪ್ತಿಯ ಬಿ.ಹೆಚ್.ರಸ್ತೆ, ನೆಹರು ರಸ್ತೆ, ದುರ್ಗಿಗುಡಿ ಮುಖ್ಯರಸ್ತೆ, ಪಾರ್ಕ್ ಬಡಾವಣೆ, ತಿಲಕ್‍ನಗರ, ಸರ್.ಎಂ.ವಿ.ರಸ್ತೆ, ಬಾಲ್‍ರಾಜ್ ಅರಸ್ ರಸ್ತೆ, ಗಾಂಧಿ ಪಾರ್ಕ್. ಲೂರ್ದುನಗರ, ಕಾನ್ವೆಂಟ್ ರಸ್ತೆ, ಬಾಪುಜಿನಗರ, ಚರ್ಚ್ ಕಾಂಪೌಂಡ್, ಟಿ.ಜಿ.ಎನ್.ಬಡಾವಣೆ, ಟ್ಯಾಂಕ್ ಬೌಂಡ್‍ರಸ್ತೆ, ಮೀನಾಕ್ಷಿ ಭವನ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಜೂ. 08 ಮತ್ತು 09 ರಂದು ವಿದ್ಯುತ್ ವ್ಯತ್ಯಯ; ಸಹಕರಿಸಲು ಮನವಿ

ಶಿವಮೊಗ್ಗ ತಾಲ್ಲೂಕಿನ  ಕುಂಸಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ಕಾಮಗಾರಿ ಇರುವುದರಿಂದ ಜೂ.08 ಮತ್ತು 09 ರಂದು  ಬೆಳಿಗ್ಗೆ 09-00 ರಿಂದ ಸಂಜೆ 06-00 ಗಂಟೆವರೆಗೆ ಈ ಕೆಳಕಂಡ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. 

ಎಲ್ಲೆಲ್ಲಿ?

ಕುಂಸಿ, ಬಾಳೆಕೊಪ್ಪ, ಜೋರಡಿ, ತುಪ್ಪೂರು, ಕೋಣಿಹೊಸೂರು, ಹೊರಬೈಲು,  ಹಾರ್ನಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟೆಹಳ್ಳಿ, ಆಯನೂರು, ಮಂಡಘಟ್ಟ, ಸಿರಿಗೆರೆ, ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ, ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಕಾರ್ಯಕರ್ತನ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡು ಹೆಗಲುಕೊಟ್ಟ ಸ್ಪೀಕರ್ ಯುಟಿ ಖಾದರ್​!

ಶಿವಮೊಗ್ಗ/ ನಿಧನ‌ ಹೊಂದಿದ ಕಾಂಗ್ರೆಸ್‌ ಕಾರ್ಯಕರ್ತನ ಅಂತ್ಯಸಂಸ್ಕಾರದಲ್ಲಿ ಸ್ಪೀಕರ್ ಯುಟಿ ಖಾದರ್ ಪಾಲ್ಗೊಂಡು, ತಮ್ಮ ಪಕ್ಷದ ಕಾರ್ಯಕರ್ತನಿಗೆ ಅಂತಿಮ ನಮನ ಸಲ್ಲಿಸಿದರು. ಅಂತ್ಯಸಂಸ್ಕಾರಕ್ಕೆ ಮೃತದೇಹವನ್ನು ಕೊಂಡೊಯ್ಯುವಾಗ ಹೆಗಲು ಕೊಟ್ಟ ಸ್ಪೀಕರ್​, ಕೊನೆಕ್ಷಣದವರೆಗೂ ಇದ್ದು, ಅಗಲಿದ ಕಾರ್ಯಕರ್ತನಿಗೆ ವಿದಾಯ ಹೇಳಿದರು. 

ಕುರ್ನಾಡು ಮಿತ್ತಕೋಡಿ ವೆಂಕಪ್ಪ ಕಾಜವ ಅವರ ಪುತ್ರ ಹಾಗೂ ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವರ ಸಹೋದರ ಶರತ್ ಕಾಜವ ಎಂಬುವವರು ಹೃದಯಾಘಾತದಿಂದ ನಿಧನರಾಗಿದ್ದರು.

 ಅವರ ಅಂತಿಮ ಸಂಸ್ಕಾರದಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಆಪ್ತ ಬಳಗದವರು ಪಾಲ್ಗೊಂಡಿದ್ದರು. ಈ ವೇಳೆ   ಸ್ಪೀಕರ್ ಯು.ಟಿ.ಖಾದರ್ ಕೂಡ ಅಲ್ಲಿದ್ದು, ಅಂತ್ಯಕ್ರಿಯೆ ವ್ಯವಸ್ಥೆಗಳನ್ನು ಗಮನಿಸಿದರಷ್ಟೆ ಅಲ್ಲದೆ ಮೃತದೇಹ ಸಾಗಿಸಲು ಹೆಗಲು ಕೊಟ್ಟು ಭಾವುಕರಾದರು.  

 

 

TAgs:   M.R.S. Water Supply, M.R.S.  Colony, Harige, Malavagoppa, Vaddinakoppa, Nanjappa Layout, Priyanka Layout, Jyothinagar, Vidyanagar, Country Kabble Road, Chikkal, Gurupura, Purale, Siddeshwara Nagar, Shanthamma Layout and surrounding areas under F-3 feeder limits, B.H. Road, Nehru Road, Durgagudi Main Road, Park Layout, Tilak Nagar, Sir M.V. Road, Balraj Urs Road, Gandhi Park. Loordunagar, Convent Road, Bapujinagar, Church Compound, TGN Layout, Tank Bound Road, Meenakshi Bhavan, Kunsi, Balekoppa, Joradi, Thuppur, Kone Hosur, Horabailu, Harnalli, Ramanagara, Muduvala, Yadawala, Devabalu, Tyajavalli, Konagavalli, Hittur, Narayanapura, Mallapura, Rattehalli, Ayanur, 

Leave a Comment