ದೀಪಾವಳಿ ಅಂಗಡಿ ಪೂಜೆಯ ದಿನವೇ ನಡೀಯಿತು ಅಗ್ನಿ ದುರಂತ! ಏನಿದು ಘಟನೆ
ದೀಪಾವಳಿ ಹಬ್ಬದ ದಿನವೇ ಅಂಗಡಿಯೊಂದರಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದೆ On the day of Diwali, a fire incident happened in a shop
KARNATAKA NEWS/ ONLINE / Malenadu today/ Nov 13, 2023 SHIVAMOGGA NEWS
Shivamogga | ದೀಪಾವಳಿ ಹಬ್ಬದ ಅಂಗಡಿ ಪೂಜೆಯ ದಿನವೇ ಪ್ರಾವಿಜನ್ ಸ್ಟೋರ್ನಲ್ಲಿ ಅಗ್ನಿ ದುರಂತವೊಂದು ಸಂಭವಿಸಿದೆ. ಇವತ್ತು ಬೆಳಗಿನ ಜಾವ ಅಂಗಡಿಗೆ ಬೆಂಕಿಬಿದ್ದು ಅಂಗಡಿಯಲ್ಲಿದ್ದ ಸಾಮಗ್ರಿಗಳು ಸುಟ್ಟು ಹೋಗಿವೆ.
ಶಿವಮೊಗ್ಗ ನಗರದ ವಿದ್ಯಾನಗರದಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಇಲ್ಲಿನ ದಿನಸಿ ಅಂಗಡಿಯಲ್ಲಿ ಇವತ್ತು ಬೆಳಗಿನ ಜಾವ ಬೆಂಕಿ ಕಾಣಿಸಿಕೊಂಡಿದ್ದು, ಅಂಗಡಿಯಲ್ಲಿರುವ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಇನ್ನೂ ಸುಟ್ಟ ವಾಸನೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣ ಅಂಗಡಿ ಬಳಿಗೆ ತೆರಳಿದ್ದಾರೆ
READ : ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಪತ್ತೆಯಾದ ಅಪ್ರಾಪ್ತ ಬಾಲಕಿ! ನಡೆದಿದ್ದೇನು?
ಹೊಗೆ ಬರುವುದನ್ನ ಗಮನಿಸಿ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳೀಯರ ಸಹಾಯದಿಂದ ಬೆಂಕಿ ನಂದಿಸಿದ್ಧಾರೆ.
READ : ತುಂಗಾ ನಗರ ಪೊಲೀಸ್ ಸ್ಟೇಷನ್ ರೌಡಿಶೀಟರ್ ಬಚ್ಚನ್ಗೆ ಶಾಕ್ ! ಕೋರ್ಟ್ ನಿಂದ ಶಿಕ್ಷೆ ! ಏನಿದು ಪ್ರಕರಣ?