ಹಬ್ಬದ ತಯಾರಿ/ ಸಾವಿರದ ಇನ್ನೂರು ಹೆಚ್ಚುವರಿ ಬಸ್ಗಳನ್ನು ರೋಡಿಗಿಳಿಸಿದ KSRTC
On the occasion of Ganeshotsav, KSRTC has provided additional 1200 busesಗಣೇಶೋತ್ಸವ ಹಿನ್ನೆಲೆಯಲ್ಲಿ ಕೆಎಸ್ಆರ್ ಟಿಸಿ ೧೨೦೦ ಬಸ್ ಗಳನ್ನು ಹೆಚ್ಚುವರಿಯಾಗಿ ಒದಗಿಸಿದೆ

KARNATAKA NEWS/ ONLINE / Malenadu today/ Sep 12, 2023 SHIVAMOGGA NEWS
ಇನ್ನೇನು ಕೆಲವೇ ದಿನಗಳು ಕಳೆದ ಗೌರಿ ಗಣೇಶ ಮನೆಗೆ ಬರುತ್ತಾರೆ.. ಗೌರಿ ಮತ್ತು ಗಣೇಶನ ಹಬ್ಬಕ್ಕೆ ಇಡೀ ಕರುನಾಡು ಸಿದ್ದಗೊಳ್ಳುತ್ತಿದೆ. ಇದರ ಬೆನ್ನಲ್ಲೆ ಜನರಿಗೆ ಯಾವುದೇ ತೊಂದರೆಯಾಗದಂತೆ ಕೆಎಸ್ಆರ್ಟಿಸಿ ಸಂಸ್ಥೆ 1200 ವಿಶೇಷ ಬಸ್ಗಳ ವ್ಯವಸ್ತೆಯನ್ನು ಕಲ್ಪಿಸಿದೆ. ಇರುವ ಬಸ್ಗಳ ಜೊತೆಗೆ ಹೆಚ್ಚುವರಿ ಬಸ್ಗಳನ್ನು ಕಲ್ಪಿಸುತ್ತಿದ್ದು, ಈ ಬಸ್ ಗಳು ಸಪ್ಟೆಂಬರ್ 15 ರಿಂದ 18ವರೆಗೂ ಸಂಚರಿಸಲಿವೆ.
ಕೆಂಪೇಗೌಡ ಬಸ್ ನಿಲ್ದಾಣದಿಂದ (ಮೆಜೆಸ್ಟಿಕ್) ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ ಸೇರಿದಂತೆ ಹೊರರಾಜ್ಯಗಳಿಗೂ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
ಇನ್ನೂ ಸ್ಯಾಟ್ಲೈಟ್ ಬಸ್ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆಗೆ ಬಸ್ ಸೌಲಭ್ಯವನ್ನು ಹೆಚ್ಚುವರಿಯಾಗಿ ನೀಡಲಾಗಿದೆ. ಆಡ್ವಾನ್ಸ್ ಬುಕ್ಕಿಂಗ್ ಸೌಲಭ್ಯವನ್ನು ನೀಡಲಾಗಿದ್ದು, ನಾಲ್ಕಕ್ಕಿಂತ ಹೆಚ್ಚು ಪ್ರಯಾಣಿಕರು ಒಟ್ಟಿಗೆ ಆಡ್ವಾನ್ಸ್ ಟಿಕೆಟ್ ಬುಕ್ ಮಾಡಿದರೆ, ಟಿಕೆಟ್ ದರದಲ್ಲಿ ಐದು ಪರ್ಸೆಂಟ್ ರಿಯಾಯಿತಿ ಸಹ ನೀಡುತ್ತಿದೆ.
ಇನ್ನಷ್ಟು ಸುದ್ದಿಗಳು
-
ಬಾರ್ನಲ್ಲಿ ಎಣ್ಣೆ ಕೊಡ್ಲಿಲ್ಲ ಎಂದು ಸಿಬ್ಬಂದಿಯನ್ನ ಅಟ್ಟಾಡಿಸಿ ಹಲ್ಲೆ! ಬಿಹೆಚ್ ರೋಡ್ನಲ್ಲಿ ನಿನ್ನೆ ನಡೆದಿದ್ದೇನು?
-
ಸಚಿವರ ಶಾಕ್/ 48 ಗಂಟೆಯಲ್ಲಿ ಬದಲಾಯ್ತು ಶಿವಮೊಗ್ಗ AIRPORT ನಲ್ಲಿದ್ದ ಈ ವ್ಯವಸ್ಥೆ!