ಶಿವಮೊಗ್ಗದಲ್ಲಿ ಒಂದು ದಿನ ಮಾಂಸ ಮಾರಾಟ ಬಂದ್ ! ಕಾರಣವೇನು?

ಹಂಚಿಕೊಳ್ಳಿ
WhatsApp Facebook X Telegram

KARNATAKA NEWS/ ONLINE / Malenadu today/ Sep 16, 2023 SHIVAMOGGA NEWS  

ಸೆಪ್ಟಂಬರ್ 18 ರಂದು  ಗಣೇಶ ಚತುರ್ಥಿ ಪ್ರಯುಕ್ತ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. 

ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಲು ಕೋರಿದೆ. ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಪಾಲಿಕೆ ಆಯುಕ್ತರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ 

ಬೈಕ್​ ರ್ಯಾಲಿಗೆ ನಿಷೇಧ

ಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಿನ್ನೆಲೆಯಲ್ಲಿ ಬಂದೋಬಸ್ತ್​ ಸಂಬಂಧ ಜಿಲ್ಲಾಡಳಿತ ಸಾಕಷ್ಟು ಕ್ರಮಗಳನ್ನು ಕೈಗೊಳ್ಳುತ್ತಿದೆ. ಇದಕ್ಕೆ ಪೂರಕವೆಂಬಂತೆ ಶಿವಮೊಗ್ಗ ಜಿಲ್ಲಾಡಳಿತ ಈ ಅವಧಿಯಲ್ಲಿ ಬೈಕ್ ರ್ಯಾಲಿಯನ್ನು ನಿಷೇಧಿಸಿದೆ. 

ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬಗಳ ಆಚರಣೆ ಹಿನ್ನೆಲೆ ಜಿಲ್ಲಾದ್ಯಂತ ಕಾನೂನು ಸುವ್ಯವಸ್ಥೆ, ಸೌಹಾರ್ದತೆ ಮತ್ತು ಶಾಂತಿ ಕಾಪಾಡುವ ನಿಟ್ಟಿನಲ್ಲಿ ಸೆ.17ರಿಂದ ಅಕ್ಟೋಬರ್ 1ರವರೆಗೆ ಜಿಲ್ಲಾದ್ಯಂತ ಬೈಕ್‌ ರ್ಯಾಲಿ ನಡೆಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ  ಆರ್ ಆದೇಶಿಸಿದ್ದಾರೆ.

 


ಇನ್ನಷ್ಟು ಸುದ್ದಿಗಳು 

 


 

ಹಂಚಿಕೊಳ್ಳಿ
WhatsApp Facebook X Telegram
Malenadu Today
ಲೇಖಕರ ಬಗ್ಗೆ

Malenadu Today

Malenadu Today Contributor