ಶಿವಮೊಗ್ಗದ ಮಲ್ಲಾಪುರದಲ್ಲಿ ಕಾಟ ಕೊಡ್ತಿದ್ದ ಚಿರತೆಗಳ ಪೈಕಿ ಒಂದು ಸೆರೆ! ಇನ್ನೊಂದರ ಸುಳಿವು ಇನ್ನೂ ನಿಗೂಢ

Malenadu Today

ಕೆಲವು ದಿನಗಳಿಂದ ಶಿವಮೊಗ್ಗ ತಾಲೂಕಿನ ಮಲ್ಲಾಪುರ ಗ್ರಾಮದ ಸುತ್ತಮುತ್ತಲಿನ ಹೊಲಗದ್ದೆ, ತೋಟಗಳಲ್ಲಿ ಎರಡು ಚಿರತೆಗಳು ಓಡಾಡು್ತಾ ಆತಂಕ ಮೂಡಿಸಿದ್ದವು. ಈ ಪೈಕಿ ನಿನ್ನೆ ಸೋಮವಾರ ಒಂದು ಚಿರತೆಯನ್ನು ಸೆರೆಹಿಡಿಯಲಾಗಿದೆ.

ಚಿರತೆ ಓಡಾಟ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿತ್ತು. ಸೆರೆಗೆ ಅರಣ್ಯ ಇಲಾಖೆಗೆ ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಆಯನೂರು ಅರಣ್ಯ ಇಲಾಖೆ ಸಿಬ್ಬಂದಿಗಳು ಚಿರತೆಗಳು ಓಡಾಡುವ ಸ್ಥಳದಲ್ಲಿ ಬೋನೊಂದನ್ನು ಇರಿಸಿದ್ದರು.

ಹೆರಿಗೆ ವಾರ್ಡ್​ನಲ್ಲಿ ಮಗು ಕೊಟ್ಟು ಹೋದವಳು ನಾಪತ್ತೆ! ಕಾಣೆಯಾಗಿದ್ದ ಮಗುವಿನ ಶವ ಕೆರೆಯಲ್ಲಿ ಪತ್ತೆ

ನಿನ್ನೆ  ಮುಂಜಾನೆ ಚಿರತೆ ಬೋನಿನಲ್ಲಿ ಬಿದ್ದಿದೆ. ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಬೋನಿನಲ್ಲಿ ಬಿದ್ದ ಚಿರತೆಯನ್ನು ತ್ಯಾವರೆಕೊಪ್ಪ ಹುಲಿ-ಸಿಂಹಾಧಾಮಕ್ಕೆ ಕೊಂಡೊಯ್ದಿದ್ದಾರೆ. ಮತ್ತೊಂದು ಚಿರತೆ ಗ್ರಾಮದ ಸುತ್ತಮುತ್ತ ಸಂಚರಿಸುತ್ತಿದ್ದು, ಆ ಚಿರತೆಯ ಸೆರೆಗೂ ಅರಣ್ಯ ಇಲಾಖೆ ಕ್ರಮಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Facebook ನಲ್ಲಿ ನಮ್ಮ ಪೇಜ್​ ನೋಡಿ : Malenadutoday.com

Twitter ನಲ್ಲಿ ನಾವಿದ್ದೇವೆಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com

Share This Article