pakistan war : ಕಳೆದ ತಡರಾತ್ರಿ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಪಾಕಿಸ್ತಾನದ ಉಗ್ರರ ಅಡಗು ತಾಣಗಳ ಮೇಲೆ ದಾಳಿ ನಡೆಸಿದೆ. ಈ ದಾಳಿಯಲ್ಲಿ ಪಾಕಿಸ್ತಾನದ 9 ಉಗ್ರ ನೆಲೆಗಳು ದ್ವಂಸಗೊಂಡಿವೆ. ಈ ದಾಳಿಯ ಪರಿಣಾಮ ಹೇಗಿತ್ತು ಎಂಬುವುದರ ಪ್ರಮುಖ 10 ಪಾಯಿಂಟ್ ಈ ಕೆಳಕಂಡಂತಿವೆ
pakistan war : ಆಪರೇಷನ್ ಸಿಂಧೂರ್ ನ 10 ಪಾಯಿಂಟ್ಗಳು
ಭಾರತದ ಕ್ಷಿಪಣಿ ದಾಳಿಯಲ್ಲಿ 26 ನಾಗರಿಕರು ಸಾವನ್ನಪ್ಪಿದ್ದಾರೆ ಮತ್ತು 46 ಜನರು ಗಾಯಗೊಂಡಿದ್ದಾರೆ ಎಂದು ಇಸ್ಲಾಮಾಬಾದ್ ಹೇಳಿದೆ. ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಈ ದಾಳಿಯನ್ನು “ಯುದ್ಧದ ಸ್ಪಷ್ಟ ಕೃತ್ಯ” ಎಂದು ಕರೆದಿದ್ದ ಮತ್ತು “ಸೂಕ್ತ ಪ್ರತ್ಯುತ್ತರ” ನೀಡುವ ಎಲ್ಲ ಹಕ್ಕನ್ನು ತಮ್ಮ ದೇಶ ಹೊಂದಿದೆ ಎಂದು ಹೇಳಿದ್ದಾರೆ.
ದಾಳಿಯಲ್ಲಿ ಭಾರತ ಸೇನೆ ಭಯೋತ್ಪಾದಕ ಅಡಗುತಾಣಗಳನ್ನು ಮಾತ್ರ ಗುರಿಯಾಗಿಸಿಕೊಂಡಿದ್ದು, ಪಾಕಿಸ್ತಾನದ ಯಾವುದೇ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿಕೊಂಡಿಲ್ಲ ಎಂದು ಭಾರತ ಸೇನೆ ಹೇಳಿದೆ ಸೇನೆ ಮತ್ತು ವಾಯುಪಡೆ ಜಂಟಿಯಾಗಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ)ದಲ್ಲಿನ ಮೂಲಸೌಕರ್ಯಗಳ ಮೇಲೆ ದಾಳಿ ನಡೆಸಿವೆ. ಅಲ್ಲಿಂದ ಭಾರತದ ವಿರುದ್ಧ ಪಾಕಿಸ್ತಾನ ಭಯೋತ್ಪಾದಕ ದಾಳಿಗಳನ್ನು ಯೋಜಿಸಿದೆ ಎಂದು ತಿಳಿದು ಬಂದಿದೆ.
ಹಿರಿಯ ಅಧಿಕಾರಿಗಳ ಪ್ರಕಾರ, ಜೆಇಎಂ ಭದ್ರಕೋಟೆಯಾದ ಬಹವಾಲ್ಪುರ್ ಮತ್ತು ಮುರಿಡ್ಕೆಯಲ್ಲಿ ಎರಡು ದೊಡ್ಡ ದಾಳಿಗಳನ್ನು ನಡೆಸಲಾಗಿದ್ದು, ಪ್ರತಿ ಸ್ಥಳದಲ್ಲಿ ಅಂದಾಜು 25–30 ಭಯೋತ್ಪಾದಕರು ಸಾವನ್ನಪ್ಪಿದ್ದಾರೆ.
ಮುರಿಡ್ಕೆಯಲ್ಲಿ ಎಲ್ಇಟಿಯ ನರ ಕೇಂದ್ರ ಮತ್ತು ಸೈದಾಂತಿಕ ಪ್ರಧಾನ ಕಚೇರಿಯಾದ ಮಸ್ಜಿದ್ ವಾ ಮರ್ಕಜ್ ತೈಬಾ ಗುರಿಯಾಗಿತ್ತು, ಇದನ್ನು ದೀರ್ಘಕಾಲದಿಂದ ಪಾಕಿಸ್ತಾನದ “ಭಯೋತ್ಪಾದನಾ ನರ್ಸರಿ” ಎಂದು ಪರಿಗಣಿಸಲಾಗಿದೆ.
ಇತರ ಗುರಿ ಸ್ಥಳಗಳಲ್ಲಿ ಸಾವುನೋವುಗಳ ಸಂಖ್ಯೆಯನ್ನು ಗುಪ್ತಚರ ಸಂಸ್ಥೆಗಳು ಇನ್ನೂ ಪರಿಶೀಲಿಸುತ್ತಿದ್ದು, ಪ್ರಾಥಮಿಕ ಅಂದಾಜಿನ ಪ್ರಕಾರ ಒಟ್ಟು 80 ರಿಂದ 90 ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ.
ಹ್ರಾ ಕಲಾನ್ನಲ್ಲಿರುವ ಸರ್ಜಲ್, ಕೋಟ್ಲಿಯ ಮರ್ಕಜ್ ಅಬ್ಬಾಸ್ ಮತ್ತು ಮುಜಫರಾಬಾದ್ನ ಸೈಯದ್ನಾ ಬಿಲಾಲ್ ಶಿಬಿರಗಳು ಜೈಷ್-ಸಂಬಂಧಿತ ಇತರ ಸ್ಥಳಗಳ ಮೇಲೆ ದಾಳಿ ನಡೆಸಲಾಗಿದೆ. ಎಲ್ಇಟಿಗೆ ಸಂಬಂಧಿಸಿದ ಬರ್ನಾಲಾದ ಮರ್ಕಜ್ ಅಹ್ಲೆ ಹದೀಸ್ ಮತ್ತು ಮುಜಫರಾಬಾದ್ನ ಶ್ವಾಯಿ ನಲ್ಲ ಶಿಬಿರಗಳು ಇವುಗಳ ಮೇಲೆಯೂ ದಾಳಿ ನಡೆದಿದೆ.
ಒಂಬತ್ತು ತಾಣಗಳಲ್ಲಿ ನಾಲ್ಕು ಪಾಕಿಸ್ತಾನದೊಳಗೆ ನೆಲೆಗಳಾಗಿದ್ದರೆ, ಉಳಿದ ಐದು ಪಿಒಕೆಯಲ್ಲಿರುವ ಉಗ್ರ ನೆಲೆಗಳಾಗಿವೆ. ಪಾಕಿಸ್ತಾನಿ ಸೇನೆ, ಐಎಸ್ಐ ಮತ್ತು ವಿಶೇಷ ಸೇವಾ ಗುಂಪು (ಎಸ್ಎಸ್ಜಿ) ಭಯೋತ್ಪಾದಕ ತರಬೇತಿ ಮೂಲಸೌಕರ್ಯವನ್ನು ಬೆಂಬಲಿಸುವಲ್ಲಿ ಭಾಗಿಯಾಗಿವೆ ಎಂದು ಮೂಲಗಳು ತಿಳಿಸಿವೆ.
ಕಾರ್ಯಾಚರಣೆಯ ಸಮಯದಲ್ಲಿ ಭಾರತವು ಮುಂದುವರಿದ, ದೀರ್ಘ-ಶ್ರೇಣಿಯ ನಿಖರ ಶಸ್ತ್ರಾಸ್ತ್ರಗಳನ್ನು ನಿಯೋಜಿಸಿತ್ತು. SCALP ಕ್ರೂಸ್ ಕ್ಷಿಪಣಿಗಳಿಂದ ಶಸ್ತ್ರಸಜ್ಜಿತವಾದ ರಫೇಲ್ ಫೈಟರ್ ಜೆಟ್ಗಳು ಪಾಕಿಸ್ತಾನದ ಪ್ರದೇಶದೊಳಗೆ ದಾಳಿಯನ್ನು ನಡೆಸಿದವು, ಈ ಕ್ಷಿಪಣಿಗಳು ಹೆಚ್ಚಿನ ದೂರದಲ್ಲಿರುವ ಹೆಚ್ಚಿನ ಮೌಲ್ಯದ ಗುರಿಗಳನ್ನು ಭೇದಿಸುವ ಸಾಮರ್ಥ್ಯವನ್ನು ಹೊಂದಿವೆ
ದಾಳಿಯ ನಂತರ, ಪಾಕಿಸ್ತಾನವು ಜಮ್ಮು ಮತ್ತು ಕಾಶ್ಮೀರದ ನಿಯಂತ್ರಣ ರೇಖೆ ಮತ್ತು ಅಂತರರಾಷ್ಟ್ರೀಯ ಗಡಿಯಲ್ಲಿ ಶೆಲ್ ದಾಳಿ ನಡೆಸಿದೆ. ಇದಕ್ಕೆ ಭಾರತೀಯ ಪಡೆಗಳು ಪ್ರತಿಯಾಗಿ ಪ್ರತಿದಾಳಿ ನಡೆಸಿಸಿದ್ದು ಪಾಕಿಸ್ತಾನದ ಗುಂಡಿನ ದಾಳಿಯಲ್ಲಿ ಮೂವರು ಭಾರತೀಯರು ಸಾವನ್ನಪ್ಪಿದ್ದಾರೆ.
pakistan war : ಪಾಕಿಸ್ತಾನಿ ಪಡೆಗಳ ಗಡಿಯಾಚೆಗಿನ ಗುಂಡಿನ ದಾಳಿ ಮತ್ತು ಶೆಲ್ ದಾಳಿಯ ನಂತರ ಎಲ್ಒಸಿಯ ಉದ್ದಕ್ಕೂ ಇರುವ ಹಳ್ಳಿಗಳಿಂದ ನಾಗರಿಕರನ್ನು ಬಂಕರ್ಗಳಿಗೆ ಸ್ಥಳಾಂತರಿಸಲು ಸರ್ಕಾರ ಆದೇಶಿಸಿದೆ. ಗೃಹ ಸಚಿವ ಅಮಿತ್ ಶಾ ಅವರು ಬಿಎಸ್ಎಫ್ ಮಹಾನಿರ್ದೇಶಕ ಜೆ & ಕೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ. ಮತ್ತು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ.