ದೇವಸ್ಥಾನಕ್ಕೆ ಬಂದು ಗಂಟೆ ಕದ್ದು ಕಾಡಿಗೆ ಓಡಿದ ಕಳ್ಳ/ ಹಿಡಿದು ಕಂಬಕ್ಕೆ ಕಟ್ಟಿದ ಗ್ರಾಮಸ್ಥರು
The people who tried to steal from a temple in Tirthahalli have been caught by the people and handed over to the police.ತೀರ್ಥಹಳ್ಳಿಯ ದೇವಸ್ಥಾನವೊಂದರಲ್ಲಿ ಕಳ್ಳತನಕ್ಕೆ ಯತ್ನಿಸಿದ್ದವರನ್ನ ಜನರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ
KARNATAKA NEWS/ ONLINE / Malenadu today/ Sep 29, 2023 SHIVAMOGGA NEWS’
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಕಳ್ಳತನಕ್ಕೆ ಬಂದಿದ್ದ ವ್ಯಕ್ತಿಯೊಬ್ಬನನ್ನ ಗ್ರಾಮಸ್ಥರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ತೀರ್ಥಹಳ್ಳಿ ತಾಲ್ಲೂಕಿನ ವಾಟೆಮನೆ ಬಳಿಯಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ದೇವಸ್ಥಾನದಲ್ಲಿದ್ದ ಸಾಮಗ್ರಿಗಳನ್ನು ಕಳ್ಳರು ಕಳ್ಳತನ ಮಾಡಲು ಬಂದಿದ್ದರು. ಈ ವೇಳೆ ಅವರನ್ನು ಗಮನಿಸಿ ಹಿಡಿದ ಗ್ರಾಮಸ್ಥರು ವಿಚಾರಿಸಿದಾಗ ಕಳ್ಳರು ಸತ್ಯ ಬಾಯಿಬಿಟ್ಟಿದ್ದಾರೆ.
ಈ ಮಧ್ಯೆ ಒಬ್ಬ ಕಳ್ಳ ಅಲ್ಲಿಯೇ ಇದ್ದ ಕಾಡಿನಲ್ಲಿ ತಪ್ಪಿಸಿಕೊಂಡು ಓಡಿ ಹೋಗಿದ್ದ. ಆನಂತರ ಆತ ಸಿಕ್ಕಿಬಿದ್ದಿದ್ದು, ಸ್ಥಳೀಯರು ಆತನನ್ನು ಕಂಬಕ್ಕೆ ಕಟ್ಟಿಹಾಕಿದ್ದರು. ನಂತರ ಪೊಲೀಸರು ಸ್ಥಳಕ್ಕೆ ಬಂದು ಮೂವರು ಕಳ್ಳರನ್ನು ವಶಕ್ಕೆ ಪಡೆದು ಕೇಸ್ ದಾಖಲಿಸಿದ್ದಾರೆ.
.
ಇನ್ನಷ್ಟು ಸುದ್ದಿಗಳು
-
ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವ! ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳ ನೇಮಕ! ಎಲ್ಲೆಲ್ಲಿಗೆ ಯಾರ್ಯಾರು ಓದಿ
-
2 ಲಕ್ಷ ಜನ! 3 ಸಾವಿರಕ್ಕೂ ಹೆಚ್ಚು ಪೊಲೀಸ್ ! ನಾಳಿನ ಬಂದೋಬಸ್ತ್ ಬಗ್ಗೆ ಎಸ್ಪಿ ಬ್ರೀಫಿಂಗ್!
-
ಹಿಂದೂ ಮಹಾಸಭಾದ ಮೊದಲ ಗಣಪತಿ ಪ್ರತಿಷ್ಟಾಪನೆಯಾಗಿದ್ದು ಶಿವಮೊಗ್ಗದಲ್ಲೆ! ಇಲ್ಲಿದೆ ನೋಡಿ ಇತಿಹಾಸದ ವಿನಾಯಕನ ದೃಶ್ಯಗಳು!