ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಹೋಳಿ ಹಬ್ಬದ ವೇಳೆ ನಗರದ ಏರಿಯಾ ಒಂದರಲ್ಲಿ ಬಾಲಕ ಹಾಗೂ ಯುವಕನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ 10 ಮಂದಿ ಯುವಕರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಣ್ಣದ ಲೋಕದಲ್ಲಿ ಮಿಂದೆದ್ದ ಶಿವಮೊಗ್ಗ: ಗೋಪಿ ವೃತ್ತದಲ್ಲಿ ಹೋಳಿ ಹಬ್ಬದ ಸಂಭ್ರಮ ಹೇಗಿತ್ತು?
ಏನಿದು ಪ್ರಕರಣ
ಹೋಳಿಹಬ್ಬದ ದಿನ ಇಬ್ಬರನ್ನು ಶೆಡ್ ಒಂದರಲ್ಲಿ ಕೂಡಿ ಹಾಕಿ ಹಲ್ಲೆ ಮಾಡಲಾಗಿದೆ ಎಂಬ ಸುದ್ದಿಯೊಂದು ಕೇಳಿಬಂದಿತ್ತು. ಸುದ್ದಿಯನ್ನು ಬೆನ್ನಟ್ಟಿದ್ದ ಸಂದರ್ಭದಲ್ಲಿ ಓರ್ವ ಅಪ್ರಾಪ್ತ ಹಾಗೂ ಇನ್ನೊಬ್ಬ ಯುವಕನಿಗೆ ಗಂಭೀರ ಪೆಟ್ಟು ಬಿದ್ದಿರುವುದು ಗೊತ್ತಾಗಿತ್ತು. ಅಲ್ಲದೆ ಪ್ರಕರಣವೂ ಶಿವಮೊಗ್ಗ ನಗರದ ಎಲ್ & ಓ ವನ್ನು ಪ್ರಶ್ನೆ ಮಾಡುತ್ತಿತ್ತು. ಇದೀಗ ಪೊಲೀಸರು ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಆರೋಪಿಗಳನ್ನ ಬಂಧಿಸಿದ್ದಾರೆ. ತನಿಖೆ ವೇಳೆ ಇನ್ನಷ್ಟು ಸತ್ಯಗಳು ಹೊರಬಿದ್ದಿವೆ.
ಪೊಲೀಸ್ ಮಾಹಿತಿ ಪ್ರಕಾರ, ಒಂದೂವರೆ ತಿಂಗಳ ಹಿಂದೆ ಹಲ್ಲೆಗೊಳಗಾದ ಯುವಕನ ಸ್ನೇಹಿತ ಹಾಗೂ ಇನ್ನೊಬ್ಬನ ನಡುವೆ ವಾಚ್ ಒಂದರ ವಿಚಾರಕ್ಕೆ ಕಿರಿಕ್ ಆಗಿತ್ತು (ಹೆಸರುಗಳನ್ನು ಉಲ್ಲೇಖಿಸಿಲ್ಲ) ಇದೇ ದ್ವೇಷಕ್ಕೆ ಇನ್ನೊಂದು ಪಾರ್ಟಿಯವರು ನಿನ್ನ ಸ್ನೇಹಿತ ಎಲ್ಲಿ ಎಂದು ಸಂತ್ರಸ್ತ ಯುವಕನನ್ನ ಪೀಡಿಸಿ ಹೆದರಿಸಿದ್ದಾರೆ. ಹೋಳಿ ಆಚರಣೆ ವೇಳೆ ಇದೇ ವಿಚಾರದಲ್ಲಿ ಸಂತ್ರಸ್ತ ಯುವಕ ಹಾಗೂ ಇನ್ನೊಬ್ಬ ಅಪ್ರಾಪ್ತನನ್ನು ಥೇಟು ಬೆದರಿಕೆ ಹಾಕಿ ಬೈಕ್ನಲ್ಲಿ ಕೂರಿಸಿಕೊಂಡು ಹೋಗಿದ್ದ ಆರೋಪಿಗಳು, ಶೆಡ್ ಒಂದರ ಬಳಿ ಇಬ್ಬರ ಮೇಲೂ ಹಲ್ಲೆ ನಡೆಸಿದ್ದರು. ಸದ್ಯ ಪೊಲೀಸರು ಎಲ್ಲಾ 10 ಆರೋಪಿಗಳನ್ನ ಅರೆಸ್ಟ್ ಮಾಡಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ದ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಸುದ್ದಿಗಳಿಂದ ಸ್ತಳೀಯ ವಿಶೇಷ ವಿಡಿಯೋ ಸುದ್ದಿಗಳನ್ನು ನೀವು ನೋಡಬಹುದು…ಇಲ್ಲಿದೆ ಅವುಗಳ ಲಿಂಕ್ Facebook , whatsapp , whatsapp chanel instagram, youtube, telegram , ನಮ್ಮದು ಅಧಿಕೃತವಾದ ಮತ್ತು ಉತ್ಪ್ರೇಕ್ಷೆಗಳಲ್ಲಿದ ನೈಜ ಸುದ್ದಿಯ ಸಂಸ್ಥೆ. ನಮ್ಮ ಬಗ್ಗೆ google business, ನಲ್ಲಿ ಮಾಹಿತಿ ಪಡೆಯಬಹುದು. ಅಲ್ಲದೆ malenadu today epaper malenadutoday web ನಲ್ಲಿ ಆಯಾ ದಿನದ ಈ ಪೇಪರ್ಗಳನ್ನು ಕ್ಲಿಕ್ ಮಾಡಿ ಓದಬಹುದು.
