ಬೆಳಿಗ್ಗೆಯಿಂದ ಸಂಜೆ ತನಕ ನಗರದ 30 ಕ್ಕೂ ಹೆಚ್ಚು ಪ್ರದೇಶದಲ್ಲಿ ಕರೆಂಟ್​ ಇರಲ್ಲ

ಶಿವಮೊಗ್ಗ :  ಶಿವಮೊಗ್ಗ ನಗರ ಎಂ.ಆರ್.ಎಸ್. 110/11ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ಮೇ 19 ರಂದು ಬೆಳಗ್ಗೆ 9.00 ರಿಂದ ಸಂಜೆ 6.00ರವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.

ಶಿವಮೊಗ್ಗ: 60ಕ್ಕೂ ಹೆಚ್ಚು ಅಡಿಕೆ ಮರಗಳನ್ನು ಕಡಿದು ಹಾಕಿದ ದುಷ್ಕರ್ಮಿಗಳು 

ಎಲ್ಲೆಲ್ಲಿ ಕರೆಂಟ್​​ ಇರಲ್ಲ 

ವಿ.ವಿ ಕೇಂದ್ರದ ವ್ಯಾಪ್ತಿಯ ಬೆಕ್ಕಿನ ಕಲ್ಮಠ, ಕೋಟೆ ರಸ್ತೆ, ಮಾರಿಗದ್ದುಗೆ, ಎಸ್.ಪಿ.ಎಂ. ರಸ್ತೆ, ಒ.ಬಿ.ಎಲ್.ರಸ್ತೆ, ಪೆನ್ಷನ್ ಮೊಹಲ್ಲಾ, ಸಿ.ಎಲ್.ರಾಮಣ್ಣ ರಸ್ತೆ, ಹಳೇ ಪೋಸ್ಟ್ ಆಫೀಸ್ ರಸ್ತೆ, ಲಷ್ಕರ್ ಮೊಹಲ್ಲಾ, ಎಲಕಪ್ಪನ ಕೇರಿ, ನಾಗಪ್ಪನ ಕೇರಿ, ಗಾಂಧಿ ಬಜಾರ್, ಬಿ.ಹೆಚ್.ರಸ್ತೆ ಎಡಭಾಗ, ಅಮಿರ್ ಅಹಮ್ಮದರ್ ವೃತ್ತ, ಶಿವಾಜಿ ರಸ್ತೆ, ತಿರುಪಳಯ್ಯನ ಕೇರಿ. ಬಿ.ಹೆಚ್.ರಸ್ತೆ, ಸಾರ್ವಕರ್ ನಗರ, ಅಶೋಕರಸ್ತೆ, ಕುಚಲಕ್ಕಿ ಕೇರಿ, ಎಂ.ಕೆಕೆ.ರಸ್ತೆ, ಅನವೇರಪ್ಪನ ಕೇರಿ. ಎಲೆ ರೇವಣ್ಣನ ಕೇರಿ. ಗಂಗಾ ಪರಮೇಶ್ವರಿ ದೇವಸ್ಥಾನ ರಸ್ತೆ, ಧರ್ಮರಾಯನ ಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Power Cut 9-Hour Shutdown in 30+ Areas