ಶಿವಮೊಗ್ಗ ನಗರದ ಕೆಲವು ಭಾಗಗಳಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಏಪ್ರಿಲ್ 15 ರಂದು ದಿನವಿಡೀ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂಪ್ರಕಟಣೆಯಲ್ಲಿ ತಿಳಿಸಿದೆ.
ಶಿವಮೊಗ್ಗ : ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ನುಗ್ಗಿದ ಲಾರಿ
ಶಿವಮೊಗ್ಗ ನಗರ ಉಪವಿಭಾಗ-1 ಮತ್ತು ಘಟಕ-1ರ ವ್ಯಾಪ್ತಿಯ 11 ಕೆವಿ ಮಾರ್ಗದಲ್ಲಿ ವಿದ್ಯುತ್ ಪರಿವರ್ತಕಗಳನ್ನು ಸ್ಥಳಾಂತರಿಸುವ ಮಹತ್ವದ ಕಾಮಗಾರಿ ನಡೆಯಲಿದೆ. ಈ ಕಾರಣದಿಂದಾಗಿ ಅಂದು ಬೆಳಿಗ್ಗೆ 9:30 ರಿಂದ ಸಂಜೆ 6:00 ರವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು
ವಿದ್ಯಾನಗರ ಮುಖ್ಯ ರಸ್ತೆ, ದುರ್ಗಮ್ಮನ ಬೀದಿ, ಜಗದಾಂಬ ಬೀದಿ ಜನರಲ್ ಹಾಸ್ಟೆಲ್ ಪ್ರದೇಶಗಳು ಹಾಗೂ ಸುತ್ತಮುತ್ತಲಿನ ಬಡಾವಣೆಗಳು.
ಈ ಕಾಮಗಾರಿಯು ವ್ಯವಸ್ಥೆಯ ಸುಧಾರಣೆಗಾಗಿ ಅನಿವಾರ್ಯವಾಗಿದ್ದು, ಸಾರ್ವಜನಿಕರು ಮತ್ತು ಗ್ರಾಹಕರು ಮೆಸ್ಕಾಂನೊಂದಿಗೆ ಸಹಕರಿಸಬೇಕೆಂದು ಪ್ರಕಟಣೆಯಲ್ಲಿ ಕೋರಲಾಗಿದೆ.
Power Cut Areas Affected on April 15

