ಶಿವಮೊಗ್ಗ ಮೆಸ್ಕಾಂ ಘಟಕ-2ರ ನಗರ ಉಪವಿಭಾಗ 1 ರ ವ್ಯಾಪ್ತಿಯ ರಾಘವೇಂದ್ರ ಸ್ವಾಮಿ ಮಠದ ರಸ್ತೆ ಜಿಲ್ಲಾ ಪಂಚಾಯಿತಿ ಎದುರು ಸ್ಪನ್ ಪೋಲ್ ಸ್ಥಳಾಂತರಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂ. 29 ರಂದು ಬೆಳಗ್ಗೆ 9 ರಿಂದ ಸಂಜೆ 5 ರವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
power cut in shivamogga ಎಲ್ಲೆಲ್ಲಿ ಕರೆಂಟ್ ಇರಲ್ಲ
ರಾಘವೇಂದ್ರ ಸ್ವಾಮಿ ಮಠದ ರಸ್ತೆ, ತಿಲಕ್ನಗರ, ರತ್ನಮ್ಮ ಮಾಧವ ರಾವ್ ರಸ್ತೆ, ಕುವೆಂಪು ರಸ್ತೆ, ಪಾರ್ಕ್ ಬಡಾವಣೆ, ದುರ್ಗಿಗುಡಿ, ಶಿವಮೂರ್ತಿ ಸರ್ಕಲ್ ಹಾಗೂ ಜಿಲ್ಲಾ ಪಂಚಾಯಿತಿ ರಸ್ತೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.