ಶಿವಮೊಗ್ಗ : ಡಿಸೆಂಬರ್ 28 ಮತ್ತು 29 ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಮಾಚೇನಹಳ್ಳಿ 110 ಕೆವಿ ಎಂಆರ್ಎಸ್ ವಿವಿ ಕೇಂದ್ರದಿಂದ 110 ಕೆವಿ ಸಿಂಗಲ್ ಸರ್ಕ್ಯುಟ್ ಮಾರ್ಗವನ್ನು ಡಬಲ್ ಸರ್ಕ್ಯುಟ್ ಮಾರ್ಗವನ್ನಾಗಿ ಬದಲಾಯಿಸುವ ತುರ್ತು ಕಾಮಗಾರಿಯನ್ನು ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ
ನಿಧಿಗೆ, ದುಮ್ಮಳ್ಳಿ, ಓತಿಘಟ್ಟ, ಸೋಗಾನೆ, ರೆಡ್ಡಿಕ್ಯಾಂಪ್, ಆಚಾರಿ ಕ್ಯಾಂಪ್, ಹಾರೆಕಟ್ಟೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಕೋರಿದೆ.
