ಶಿವಮೊಗ್ಗದ ನೂತನ ಜಿಲ್ಲಾಧಿಕಾರಿಯಾಗಿ ಇಂದು ಪ್ರಭುಲಿಂಗ ಕವಲಿಕಟ್ಟಿ ಅಧಿಕಾರವನ್ನು ವಹಿಸಿಕೊಂಡರು. ನಿರ್ಗಮಿತ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಹೂಗುಚ್ಚ ನೀಡುವ ಮೂಲಕ ನೂತನ ಡಿಸಿಯನ್ನು ಸ್ವಾಗತಿಸಿ ಅಧಿಕಾರವನ್ನು ಹಸ್ತಾತಂರಿಸಿದರು.

ಬೆಂಗಳೂರಿನ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ 2013 ರ ಬ್ಯಾಚ್ನ ಐಎಎಸ್ ಅಧಿಕಾರಿ ಪ್ರಭುಲಿಂಗ ಕವಲಿಕಟ್ಟಿ ಅವರನ್ನು ಶಿವಮೊಗ್ಗ ಜಿಲ್ಲೆಯ ಹೊಸ ಜಿಲ್ಲಾಧಿಕಾರಿಯನ್ನಾಗಿ ರಾಜ್ಯ ಸರ್ಕಾರ ನೇಮಿಸಿ ಡಿಸೆಂಬರ್ 31 ರಂದು ಆದೇಶ ಹೊರಡಿಸಿತ್ತು. ಪ್ರಭುಲಿಂಗ ಕವಲಿಕಟ್ಟಿ ಈ ಹಿಂದೆ ಹಟ್ಟಿ ಚಿನ್ನದ ಗಣಿ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾಗಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿಯೂ ಸಮರ್ಥವಾಗಿ ಕಾರ್ಯನಿರ್ವಹಿಸಿದ ಅನುಭವ ಇವರಿಗಿದೆ.

ಶರಾವತಿ ಸಂತ್ರಸ್ತ್ರರಿಗೆ ಗುಡ್ ನ್ಯೂಸ್ ಕೊಟ್ರು ಡಿಸಿ ಗುರುದತ್ ಹೆಗೆಡೆ! ತುಂಬಾ ಪಾಠ ಕಲಿತೆ ಎಂದಿದ್ದೇಕೆ ಗೊತ್ತಾ






