KARNATAKA NEWS/ ONLINE / Malenadu today/ May 6, 2023 GOOGLE NEWS
ಆಯನೂರು/ ಶಿವಮೊಗ್ಗ/ ನಾಳೆ ಶಿವಮೊಗ್ಗದ ಆಯನೂರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra modi) ಬರ್ತಿದ್ದಾರೆ. ಅವರ ಕಾರ್ಯಕ್ರಮಕ್ಕಾಗಿ ಆಯನೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಪಕ್ಕದ ಸುಮಾರು 100 ಎಕರೆ ಜಾಗದಲ್ಲಿ ಸಕಲ ಸಿದ್ಧತೆಗಳನ್ನ ಮಾಡಿಕೊಳ್ಳಲಾಗಿದೆ.
ಎಷ್ಟೊತ್ತಿಗೆ ಬರುತ್ತಾರೆ ಪ್ರಧಾನಿ ನರೇಂದ್ರ ಮೋದಿ
ಮೇ 7ರ ಬೆಳಗ್ಗೆ 11.30ಕ್ಕೆ ಬೆಂಗಳೂರಿನಿಂದ ನೇರವಾಗಿ ಹೆಲಿಕಾಪ್ಟರ್ನಲ್ಲಿ ಆಯನೂರಿಗೆ ಆಗಮಿಸುತ್ತಿದ್ದಾರೆ. ವೇದಿಕೆಯ ಪಕ್ಕದಲ್ಲಿ ಹೆಲಿಪ್ಯಾಡ್ ನಿರ್ಮಿಸಲಾಗಿದೆ. ಬೆಳಗ್ಗೆ 11.30ರಿಂದ ಮಧ್ಯಾಹ್ನ 2.30 ರವರೆಗೆ ಕಾರ್ಯಕ್ರಮ ನಡೆಯಲಿದೆ. ಪ್ರಧಾನಿ ಮೋದಿಯವರು 50 ನಿಮಿಷಗಳ ಕಾಲ ಭಾಷಣ ಮಾಡಲಿದ್ದಾರೆ
3 ಲಕ್ಷ ಜನ ಸೇರುವೆ ನಿರೀಕ್ಷೆ
ಇನ್ನೂ ಶಿವಮೊಗ್ಗದ ಏಳು ಕ್ಷೇತ್ರ ಹಾಗೂ ದಾವಣಗೆರೆಯ 2 ಮತ್ತು ಚಿಕ್ಕಮಗಳೂರಿನ ಒಂದು ಕ್ಷೇತ್ರದ ಅಭ್ಯರ್ಥಿಯ ಪರವಾಗಿ ಪ್ರಧಾನಿ ನರೇಂದ್ರ ಮೋದಿಯವರು ಪ್ರಚಾರ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರು ಕಾರ್ಯಕ್ರಮದ ಸಿದ್ದತೆಯಲ್ಲಿ ತೊಡಗಿದ್ದು, ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ನಲ್ಲಿ ತಲ್ಲೀನವಾಗಿದೆ.
ಊಟದ ವ್ಯವಸ್ಥೆಯಿಲ್ಲ
ಇನ್ನೂ ನೀತಿಸಂಹಿತೆ ಹಿನ್ನೆಲೆಯಲ್ಲಿ ಮೋದಿ ಕಾರ್ಯಕ್ರಮದಲ್ಲಿ ಊಟದ ವ್ಯವಸ್ಥೆಯನ್ನು ಕೈಗೊಳ್ಳಲಾಗಿಲ್ಲ. ಕುಡಿಯಲು ನೀರು ಹಾಗೂ ಮಜ್ಜಿಗೆಯ ವ್ಯವಸ್ಥೆಯನ್ನು ಕೈಗೊಳ್ಳಲಾಗಿದ್ದು, ಜನರನ್ನ ಕರೆತರಲು ವಾಹನಗಳ ವ್ಯವಸ್ಥೆಯನ್ನು ಸಹ ಮಾಡಿಲ್ಲ ಎನ್ನುತ್ತಿದ್ದಾರೆ ಮುಖಂಡರು.
ಸಿಂಗಾರಗೊಂಡ ಆಯನೂರು
ಆಯನೂರಿನಿಂದ ಶಿವಮೊಗ್ಗ ಕಡೆ ಬರುವ 2 ಕಿಮೀ. ಹಾಗೂ ಆಯನೂರಿನಿಂದ ಕುಂಸಿಗೆ ಹೋಗುವ 1 ಕಿಮೀ. ರಸ್ತೆ ಉದ್ದಕ್ಕೂ ಮೋದಿ ಕಾರ್ಯಕ್ರಮಕ್ಕಾಗಿ ಬ್ಯಾನರ್ ಬಂಟಿಂಗ್ಸ್ ಪ್ಲೆಕ್ಸ್ಗಳನ್ನು ಹಾಕಲಾಗುತ್ತಿದೆ. ಕೇಸರಿ ಬಣ್ಣಗಳ ತಳಿರು ತೋರಣಗಳಲ್ಲಿ ಸಿಂಗಾರಗೊಳ್ಳುತ್ತಿರುವ ಆಯನೂರಿನಲ್ಲಿ ನಾಳೆ ಪ್ರಧಾನಿ ನರೇಂದ್ರ ಮೋದಿ ಈ ಚುನಾವಣೆಯ ಕೊನೆಯ ಬಹಿರಂಗ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.
ಶಿವಮೊಗ್ಗದಲ್ಲಿ ದುಬಾರಿ ಶಾಲೆಗಳಿವೆ ಆದರೆ ಸರ್ಕಾರಿ ಶಾಲೆಗಳೇಕೆ ತೆರೆಯಲಾಗುತ್ತಿಲ್ಲ? ಆಯನೂರು ಮಂಜುನಾಥ್ ಪ್ರಶ್ನೆ?
ಶಿವಮೊಗ್ಗ/ ಇಲ್ಲಿನ ಪತ್ರಿಕಾ ಭವನದಲ್ಲಿ ಇವತ್ತು ನಡೆದ ಸಂವಾದದಲ್ಲಿ ಶಿವಮೊಗ್ಗ ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಪಾಲ್ಗೊಂಡಿದ್ದರು. ಈ ವೇಳೇ ಸ್ಮಾರ್ಟ್ ಸಿಟಿ ಪ್ರಸ್ತಾಪಿಸಿದ ಆಯನೂರು ಮಂಜುನಾಥ್ ಶಿವಮೊಗ್ಗದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಸರಿಯಾಗಿ ಜಾರಿಯಾಗಿಲ್ಲ. ಬಹುತೇಕ ಕಳಪೆಯಾಗಿದೆ. ನಿತ್ಯ ಅಗೆಯುವುದೇ ದೊಡ್ಡ ಕಾಮಗಾರಿಯಾಗಿದೆ. ಭ್ರಷ್ಟಾಚಾರ ತಾಂಡವವಾಡಿದೆ ಎಂದು ಆರೋಪಿಸಿದ್ದಾರೆ.
ಮತ್ತೆ ಬಂತು ಬ್ಯಾರಿ ಮಾಲ್ ವಿಚಾರ
ಬಿಜೆಪಿ ಹಾಗೂ ಕಾಂಗ್ರೆಸ್ನ ಸ್ಪರ್ಧಿಗಳಲ್ಲಿ ಒಬ್ಬರು ಶಿವಮೊಗ್ಗ ಮಹಾ ನಗರ ಪಾಲಿಕೆ ಆಡಳಿತ ಪಕ್ಷದ ನಾಯಕರಾದವರು, ಇನ್ನೊಬ್ಬರು ವಿರೋಧ ಪಕ್ಷದ ಮುಖಂಡರಾದವರು. ಇಬ್ಬರು ಕಾರ್ಪೊರೇಟರ್ಗಳಾಗಿ ಮಾಡಿದ ಕಾರ್ಯ ನೋಡಿದಾಗ ಅವರಲ್ಲಿ ಪ್ರಬುದ್ಧತೆ ಕಂಡುಬಂದಿಲ್ಲ. ಬ್ಯಾರಿ ಮಾಲ್ನ್ನು 99 ವರ್ಷಕ್ಕೆ ಬರೆದು ಕೊಡುವ ಕೆಲಸವಾಯಿತು. ಕೆಲವು ನಾಯಕರ ಹಪಾಹಪಿತನದಿ೦ದ ಶಿವಮೊಗ್ಗ ಹಾಳಾಗಿದೆ ಎಂದು ದೂರಿರು.
ಶಾಸಕ ಸ್ಥಾನ ಹೊಸದಲ್ಲ
ನಗರದಲ್ಲಿ ರೈಲು, ವಿಮಾನ ಸಹಿತ ಎಲ್ಲಾ ಮೂಲ ಸೌಕರ್ಯಗಳಿದ್ದರೂ ಕೈಗಾರಿಕೆಗಳು ಬರುತ್ತಿಲ್ಲ ಎಂದು ಆರೋಪಿಸಿದ ಆಯನೂರು ಮಂಜುನಾಥ್ ನನಗೆ ಶಾಸಕ ಸ್ಥಾನ ಹೊಸದಲ್ಲ. ಲೋಕಸಭೆ, ರಾಜ್ಯಸಭೆ, ವಿಧಾನಪರಿಷತ್ ಸದಸ್ಯನಾಗಿ ಕೆಲಸ ಮಾಡಿದ್ದೇನೆ. ಅಗತ್ಯ ಬಿದ್ದಾಗ ಆಡಳಿತ ಪಕ್ಷದಲ್ಲಿದ್ದರೂ ಸಹ ಕಾರ್ಮಿಕರ ಸಮಸ್ಯೆ ಮತ್ತು ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಸದನದಲ್ಲಿ ಮಂಡಿಸಿದ್ದೇನೆ. ಸರ್ಕಾರವನ್ನು ಎಚ್ಚರಿಸುವ ಪ್ರಯತ್ನ ಮಾಡಿ ಗಮನ ಸೆಳೆದಿದ್ದೆನೆ ಎಂದರು.
ಶಿವಮೊಗ್ಗದಲ್ಲಿ ಶಾಂತಿ ನೆಲಸಬೇಕು
ಶಿವಮೊಗ್ಗದಲ್ಲಿ ವಾತಾವರಣ ಬದಲಾಗದಿದ್ದರೆ ಬರಡು ಜಿಲ್ಲೆಯಾಗುತ್ತದೆ. ನಗರದಲ್ಲಿ ಶಾಂತಿ ತರಬೇಕು, ಅಶಾಂತಿ ಉಂಟು ಮಾಡಿದವರ ಮೇಲೆ ವಾಗ್ದಾಳಿ ನಡೆಸಿ ಹೋರಾಟ ಮಾಡಿ ಚುನಾವಣೆಗೆ ಸ್ಪರ್ಧಿಸಿದ್ದೇನೆ ಎಂದರು.
ದುಬಾರಿ ಶಾಲೆಗಳು
ಶಿವಮೊಗ್ಗದಲ್ಲಿ ಉತ್ತಮವಾದ ಮತ್ತೊಂದು ಸರ್ಕಾರಿ ಶಾಲೆಗಳು ತೆರೆಯುವುದಕ್ಕೆ ಆಗಿಲ್ಲ. ಆದರೆ ಖಾಸಗಿ ಶಾಲೆಗಳು ಪ್ರತಿವರ್ಷ ಆರಂಭವಾಗುತ್ತಲೇ ಇದೆ. ದುಬಾರಿ ಕಾಲೇಜುಗಳು ಪ್ರಾರಂಭವಾಗುತ್ತಿವೆ. ಆದರೆ ಸರ್ಕಾರಿ ಶಾಲೆಗಳೇಕೆ ತೆರೆಯಲಾಗ್ತಿಲ್ಲ ಎಂದು ಪ್ರಶ್ನಿಸಿದ್ರು.
ಪ್ರಯಾಣಿಕರಲ್ಲಿ ವಿನಂತಿ/ 2 ದಿನ ಸರ್ಕಾರಿ ಸಾರಿಗೆ ಬಸ್ ಸಂಚಾರದಲ್ಲಿ ವ್ಯತ್ಯಯ!
ಶಿವಮೊಗ್ಗ Karnataka election/ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೇ- 09 ಮತ್ತು 10 ರಂದು ಜಿಲ್ಲೆಯಲ್ಲಿ ಸಾರಿಗೆ ಬಸ್ಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರು; ಸಹಕರಿಸಲು ಸಾರಿಗೆ ನಿಗಮ ಮನವಿ ಮಾಡಿದೆ.
ಮೇ-10 ರಂದು ನಡೆಯುವ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಚುನಾವಣಾ ಸಿಬ್ಬಂದಿಗಳನ್ನು ಕರೆದೊಯ್ಯಲು ಕ.ರಾ.ರ.ಸಾ.ನಿಗಮ ಶಿವಮೊಗ್ಗ ವಿಭಾಗದ ವತಿಯಿಂದ 262 ಬಸ್ಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ಒದಗಿಸಲಾಗುತ್ತಿದೆ.
ಆದ್ದರಿಂದ ಮೇ-09 ಮತ್ತು 10 ರಂದು ಜಿಲ್ಲಾ ವ್ಯಾಪ್ತಿಯ ನಗರ, ಸಾಮಾನ್ಯ ಹಾಗೂ ವೇಗದೂತ ಸಾರಿಗೆಗಳ ಸಂಚಾರದಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕ ಪ್ರಯಾಣಿಕರು ಹಾಗೂ ಶಾಲಾ/ಕಾಲೇಜು ವಿದ್ಯಾರ್ಥಿಗಳು ನಿಗಮದೊಂದಿಗೆ ಸಹಕರಿಸುವಂತೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಕೋರಿರುತ್ತಾರೆ.
ಬಿಜೆಪಿಗೂ ತಟ್ಟಿದ ಕೇಸ್/ ಅಮಿತ್ ಶಾ ರೋಡ್ ಶೋ ಕಾರ್ಯಕ್ರಮದ ವಿಚಾರದಲ್ಲಿ ದಾಖಲಾಯ್ತು ಎಫ್ಐಆರ್
ಶಿವಮೊಗ್ಗ/ ರಾಜ್ಯ ವಿಧಾನಸಭಾ ಚುನಾವಣೆಯ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಸಾಲು ಸಾಲ ಎಫ್ಐಆರ್ಗಳು ರಿಜಿಸ್ಟರ್ ಆಗುತ್ತಿವೆ. ಮತಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಂಡ ಸಂಬಂಧ ಜೆಡಿಎಸ್, ಉತ್ತಮ ಪ್ರಜಾಕೀಯದ ಅಭ್ಯರ್ಥಿ ವಿರುದ್ಧ ಕೇಸ್ ಆದ ಬೆನ್ನಲ್ಲೆ ಇದೀಗ ಬಿಜೆಪಿ ರಾಷ್ಟ್ರೀಯ ಮುಖಂಡ ಕೇಂದ್ರ ಗೃಹಸಚಿವ ಅಮಿತ್ ಶಾ ಪಾಲ್ಗೊಂಡಿದ್ದ ರೋಡ್ ಶೋ ಸಂಬಂಧ ಕೇಸ್ವೊಂದು ದಾಖಲಾಗಿದೆ.
ದಿನಾಂಕ: 01-05-2023 ರಂದು ಭಾರತೀಯ ಜನತಾ ಪಾರ್ಟಿ ವತಿಯಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರವರ ರೋಡ್ ಶೋ ಕಾರ್ಯಕ್ರಮವನ್ನು ಶಿವಮೊಗ್ಗದಲ್ಲಿ ಹಮ್ಮಿಕೊಳ್ಳಳಾಗಿತ್ತು.
ಬಿಹೆಚ್ ರಸ್ತೆಯ ಶಿವಪ್ಪ ನಾಯಕ ಸರ್ಕಲ್ ನಿಂದ ಲಕ್ಷ್ಮಿ ಟಾಕೀಸ್ ವೃತ್ತದವರೆಗೆ ಈ ರೋಡ್ ಶೋ ಅದ್ದೂರಿಯಾಗಿ ನಡೆದಿತ್ತು. ಈ ವೇಳೆ ಚುನಾವಣಾ ಪ್ರಚಾರಕ್ಕೆ 4-5 ಜನ ಮಕ್ಕಳನ್ನ ಬಳಸಿಕೊಳ್ಳಲಾಗಿದೆ ಎಂಬ ಆರೋಪದಡಿ ಎಫ್ಐಆರ್ ದಾಖಲಾಗಿದೆ.
ಬಿಜೆಪಿ ಪಕ್ಷದ ಬಾವುಟ ಮತ್ತು ಪಕ್ಷದ ಚಿಹ್ನೆಗಳಿರುವ ಶಾಲ್ ಗಳನ್ನು ಮಕ್ಕಳಿಗೆ ಕೊಟ್ಟು ಅವರನ್ನು ಬಿಜೆಪಿ ಪಕ್ಷದ ಚುನಾವಣಾ ಪ್ರಚಾರದ ರೋಡ್ ಶೋ ಕಾರ್ಯಕ್ರಮಕ್ಕೆ ಬಳಸಿಕೊಂಡಿರುವುದು ವಿಡಿಯೋ ಸರ್ವೆಲೆನ್ಸ್ ತಂಡದವರು ಮಾಡಿರುವ ವಿಡಿಯೋ ಚಿತ್ರೀಕರಣದಲ್ಲಿ ಕಂಡು ಬಂದಿದೆ.
ಚುನಾವಣಾ ಪ್ರಚಾರದಲ್ಲಿ, ಚಿಕ್ಕ ಮಕ್ಕಳನ್ನು ಬಳಸಿಕೊಳ್ಳುವುದು CHILD LABOUR (PROHIBITION & REGULATION) ACT, 1986 (U/s-14) ಅಪರಾಧವಾಗುತ್ತದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಫ್ಲೈಯಿಂಗ್ ಸ್ಕ್ವ್ಯಾಡ್ ತಂಢದ ಅಧಿಕಾರಿಗಳು ಪರಿಶೀಲನೆ ನಡೆಸಿ ಕಾನೂನ ಕ್ರಮಕ್ಕೆ ಸೂಚಿಸಿದ್ದಾರೆ. ಪ್ರಕರಣ ಸಂಬಂಧ ಆನಂದಪ್ಪ ಎಂಬ ಅಧಿಕಾರಿ ದೂರು ನೀಡಿದ್ದು, ಬಿಜೆಪಿ ಪಕ್ಷದ ಕಾರ್ಯದರ್ಶಿ ವಿರುದ್ಧ, ದೊಡ್ಡಪೇಟೆ ಪೊಲೀಸ್ ಸ್ಟೇಷನ್ನಲ್ಲಿ ಕೇಸ್ ಆಗಿದೆ.
Read/ Bhadravati/ ಸಂಜೆ ಹೊತ್ತಿನಲ್ಲಿ ಮನೆಗೆ ನುಗ್ಗಿ ದರೋಡೆ! ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ರಾ ಪೊಲೀಸ್
Read/ Kichcha Sudeepa/ ನಟ ಸುದೀಪ್ಗೆ ಬೆದಕಿಗೆ ಹಾಕಿದ್ದ ಆಪ್ತ ಡೈರಕ್ಟರ್ ಬಂಧನ! ಸಿಕ್ಕಿಬಿದ್ದಿದ್ದು ಹೇಗೆ ಗೊತ್ತಾ?
Malenadutoday.com Social media