ಮತ್ತೊಮ್ಮೆ ಶಿವಮೊಗ್ಗ ಏರ್​ಪೋರ್ಟ್​ನಲ್ಲಿ ಬಂದಿಳಿಯಲಿದ್ದಾರೆ ನರೇಂದ್ರ ಮೋದಿ! ಹುಬ್ಬಳ್ಳಿ ಬಿಟ್ಟು ಶಿವಮೊಗ್ಗವನ್ನೇ ಆಯ್ಕೆ ಮಾಡಿದ್ದೇಕೆ ಪ್ರಧಾನಿ!?

Malenadu Today

MALENADUTODAY.COM  |SHIVAMOGGA| #KANNADANEWSWEB

ಪ್ರಧಾನಿ ನರೇಂದ್ರ ಮೋದಿಯವರು ಇದೇ  ಮಾರ್ಚ್‌ 25ರಂದು ದಾವಣಗೆರೆಯಲ್ಲಿ ನಡೆಯಲಿರುವ ವಿಜಯಸಂಕಲ್ಪ ಯಾತ್ರೆ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ದಾವಣಗೆರೆ ನಗರದ  ಜಿ.ಎಂ.ಐ.ಟಿ ಕಾಲೇಜಿನ ಪಕ್ಕದಲ್ಲಿರುವ  400 ಹೆಕ್ಟೇರ್‌ ಜಾಗದಲ್ಲಿ ಈ ಸಮಾವೇಶ ನಡೆಯಲಿದೆ. ಕಾರ್ಯಕ್ರಮದ ಸೂಕ್ತ ನಿರ್ವಹಣೆಯ ಜವಾಬ್ದಾರಿಯನ್ನ ಜಿಲ್ಲಾಡಳಿತ ಕೈಗೊಂಡಿದ್ದು, ಆ ನಿಟ್ಟಿನಲ್ಲಿ ವಿವಿಧ ತಂಡಗಳಾಗಿ ಕಾರ್ಯನಿರ್ವಹಿಸುತ್ತಿದೆ. ಇದರ ನಡುವೆ ಪ್ರಧಾನಿ ನರೇಂದ್ರ ಮೋದಿಯುವರ ದಾವಣಗೆರೆ ಭೇಟಿಯ ರೂಟ್ ಮ್ಯಾಪ್​ನಲ್ಲಿ ಕುತೂಹಲವೊಂದು ಮೂಡಿದೆ. ಏಕೆಂದರೆ, ದಾವಣಗೆರೆ ಕಾರ್ಯಕ್ರಮಕ್ಕೆ ಬರುತ್ತಿರುವ ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗಕ್ಕೆ ಮತ್ತೊಮ್ಮೆ ಬರಲಿದ್ದಾರೆ. 

ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಶಿವಮೊಗ್ಗಕ್ಕೆ!

  • ಯುಗಾದಿ ಹಬ್ಬದ ಬೆನ್ನಲ್ಲೆ  ಮಾರ್ಚ್​ 25ರಂದು ದಾವಣಗೆರೆಯಲ್ಲಿ ನಡೆಯಲಿರುವ ಸಮಾವೇಶಕ್ಕೂ ಮೊದಲು ಪ್ರಧಾನಿ ನರೇಂದ್ರ ಮೋದಿ ಮೊದಲು ಬೆಂಗಳೂರಿಗೆ ಬರಲಿದ್ದಾರೆ.  
  • ಮಾರ್ಚ್ 25ರಂದು ಬೆಳಗ್ಗೆ 7.40 ಕ್ಕೆ ನವದೆಹಲಿ ವಿಮಾನ ನಿಲ್ದಾಣದಿಂದ ಭಾರತೀಯ ವಾಯುಪಡೆ ವಿಮಾನದಲ್ಲಿ ಹೊರಡಲಿರುವ ಪ್ರಧಾನಿ ನರೇಂದ್ರ ಮೋದಿ ಬೆಳಗ್ಗೆ 10.10ಕ್ಕೆ ಬೆಂಗಳೂರಿನ ಹೆಚ್​ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.
  • ಅಲ್ಲಿಂದ 10.15 ಕ್ಕೆ ಹೆಲಿಕಾಪ್ಟರ್​ನಲ್ಲಿ ಚಿಕ್ಕಬಳ್ಳಾಪುರಕ್ಕೆ ತೆರಳಿರುವ ಪ್ರಧಾನಿ 10.35ಕ್ಕೆ ಚಿಕ್ಕಬಳ್ಳಾಪುರ ತಲುಪಲಿದ್ದಾರೆ. 10.45 ರಿಂದ 12 ಗಂಟೆಯ ನಡುವಿನ ಸಮಯದಲ್ಲಿ  ಮದುಸೂಧನ್ ಸಾಯಿ ವೈದ್ಯಕೀಯ ವಿಜ್ಞಾನಗಳ ಸಂಶೋಧನಾ ಸಂಸ್ಥೆಯನ್ನು ಉದ್ಘಾಟನೆ ಮಾಡಲಿದ್ದಾರೆ.
  • ಈ ಕಾರ್ಯಕ್ರಮದ ಬಳಿಕ ಹೆಲಿಕಾಪ್ಟರ್ ಮೂಲಕ 12.40 ಕ್ಕೆ ಬೆಂಗಳೂರಿಗೆ ವಾಪಸಾಗಲಿದ್ದಾರೆ. ಅಲ್ಲಿ ಮಧ್ಯಾಹ್ನ 1 ಗಂಟೆಯಿಂದ 1.35 ರವರೆಗೆ ವೈಟ್​ಫೀಲ್ಡ್ ಮೆಟ್ರೋ ಮಾರ್ಗ ಉದ್ಘಾಟನೆ ನೆರವೇರಿಸಲಿದ್ದು, ಮೈಟ್ರೋ ರೈಲಿನಲ್ಲಿ  ಪ್ರಯಾಣಿಸಲಿದ್ದಾರೆ.
  • ಈ ಎಲ್ಲಾ ಕಾರ್ಯಕ್ರಮಗಳ ನಂತರ,  ವೈಟ್​ಫೀಲ್ಡ್ ಮೆಟ್ರೋ ಸ್ಟೇಷನ್​ನಿಂದ ಪ್ರಧಾನಿ ನರೇಂದ್ರ ಮೋದಿ  ಹೆಲಿಪ್ಯಾಡ್​ಗೆ ಬೈ ರೋಡ್ ತೆರಳಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ದಾವಣಗೆರೆಗೆ ತೆರಳಲಿದ್ದಾರೆ.   
  • ಮಧ್ಯಾಹ್ನ 3.15ಕ್ಕೆ ದಾವಣಗೆರೆ ತಲುಪಲಿರುವ ಪ್ರಧಾನಿಯವರು ಅಲ್ಲಿ 3.30 ರಿಂದ 5.00 ಗಂಟೆವರೆಗೆ ವಿಜಯ ಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ.  
  • ದಾವಣಗೆರೆಯ ಕಾರ್ಯಕ್ರಮವನ್ನು ಮುಗಿಸಿಕೊಂಡು ಪ್ರಧಾನಿ ನರೇಂದ್ರ ಮೋದಿ ನೇರವಾಗಿ ನವದೆಹಲಿಗೆ ವಾಪಸ್ ಆಗುವುದಿಲ್ಲ. ಬದಲಾಗಿ, ದಾವಣಗೆರೆಯಿಂದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಹೆಲಿಕಾಪ್ಟರ್ ನಲ್ಲಿ ಬಂದು ಲ್ಯಾಂಡ್ ಆಗಲಿದ್ದಾರೆ. 
  • ಶಿವಮೊಗ್ಗ ವಿಮಾನ ನಿಲ್ದಾಣದಿಂದ ಸಂಜೆ 5.55ಕ್ಕೆ ಹೊರಟು ರಾತ್ರಿ 8.25ಕ್ಕೆ ದೆಹಲಿ ವಿಮಾನ ನಿಲ್ದಾಣ ತಲುಪಲಿದ್ದಾರೆ.

Ayanur Manjunath : ಪೋಸ್ಟರ್ ವೈರಲ್​​ ಬೆನ್ನಲ್ಲೆ​ ಮತದಾರರಿಗೆ ಬಹಿರಂಗ ಪತ್ರ ಬರೆದ ಆಯನೂರು ಮಂಜುನಾಥ್! ಮಾಜಿ ಸಚಿವ ಕೆ.ಎಸ್​.ಈಶ್ವರಪ್ಪನವರು ನೀಡಿದ ಉತ್ತರವೇನು!?

ಹುಬ್ಬಳ್ಳಿ ಏರ್​ಪೋರ್ಟ್​ ಬಿಟ್ಟು ಶಿವಮೊಗ್ಗ ಏರ್​ಪೋರ್ಟ್ ಆಯ್ಕೆ ಮಾಡಿದ ಪ್ರಧಾನಿ

ಇದಿಷ್ಟು ಪ್ರಧಾನಿ ನರೇಂದ್ರ ಮೋದಿಯವರ ರಾಜ್ಯಪ್ರವಾಸದ ಕಾರ್ಯಕ್ರಮವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ದಾವಣಗೆರೆಯಿಂದ ಹುಬ್ಬಳ್ಳಿ ವಿಮಾನ ನಿಲ್ಧಾಣಕ್ಕೆ ತೆರಳಿ ಅಲ್ಲಿಂದ ದೆಹಲಿಗೆ ಹೋಗುವ ಅವಕಾಶವಿತ್ತು. ಆದಾಗ್ಯು ಅವರು, ಶಿವಮೊಗ್ಗ ಏರ್​ಫೋರ್ಟ್​ನ ಮೂಲಕ ದೆಹಲಿಗೆ ತೆರಳುತ್ತಿದ್ದಾರೆ. ಏರ್​ಪೋರ್ಟ್​ನಲ್ಲಿ ಪ್ರಧಾನಿ ನರೇಂದ್ರ ಮೋದಿಯುವರು ಯಾರನ್ನು ಭೇಟಿಯಾಗುವುದಿಲ್ಲ ಎನ್ನಲಾಗುತ್ತಿದೆ. ಇದರ ಹೊರತಾಗಿ ನರೇಂದ್ರ ಮೋದಿಯವರು ಶಿವಮೊಗ್ಗ ಏರ್​ಫೋರ್ಟ್​ಗೆ ಮತ್ತೊಮ್ಮೆ ಭೇಟಿಕೊಟ್ಟು ಅಲ್ಲಿಂದಲೇ ದೆಹಲಿಗೆ ಸಾಗುತ್ತಿರುವುದು ವಿಶೇಷ ಸಂದೇಶ ರವಾನೆ ಮಾಡಲಿದೆ. 

ಇದೇ ಫೆಬ್ರವರಿ 27 ರಂದು ಪ್ರಧಾನಿ ನರೇಂದ್ರ ಮೋದಿ ಖುದ್ದು ವಿಮಾನದಲ್ಲಿ  ಶಿವಮೊಗ್ಗ ಏರ್​ಫೋರ್ಟ್​ನಲ್ಲಿ ಲ್ಯಾಂಡ್ ಆಗಿ, ಉದ್ಘಾಟಿಸಿದ್ದರು. ಆ ಬಳಿಕ ಇದೀಗ ಮತ್ತೊಮ್ಮೆ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿರುವ ಪ್ರಧಾನಿ ನರೇಂದ್ರ ಮೋದಿ, ರಾಜ್ಯ ಹಾಗು ಶಿವಮೊಗ್ಗದ ಜನರಿಗೆ ಏರ್​ಪೋರ್ಟ್​ನ ವಿಶೇಷತೆಯನ್ನು ಪರೋಕ್ಷವಾಗಿ ಸಾರಲಿದ್ದಾರೆ.  

 ನಮ್ಮ ವಾಟ್ಸ್ಯಾಪ್ ಗ್ರೂಪ್ ಲಿಂಕ್ ಇದು  ಕ್ಲಿಕ್ ಮಾಡಿ

Twitter ನಲ್ಲಿ ನಾವಿದ್ದೇವೆ, ಫಾಲೋ ಮಾಡಿ : Malenadutoday.com

Instagram ನಲ್ಲಿ ಕ್ಲಿಕ್​ ಮಾಡಿ : Malenadutoday.com

Telegram ನಲ್ಲಿ ಸುದ್ದಿ ಪಡೆಯಲು ಲಿಂಕ್ ಒತ್ತಿ : Malenadutoday.com 

HASHTAGS| sagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNews #LocalNews #KannadaNewsWebsite #LatestNewsKannada #ಮಲೆನಾಡು_ಸುದ್ಧಿ #ಶಿವಮೊಗ್ಗ_ನ್ಯೂಸ್ #malenadutodaynews, #todaynewsChilsagar karnataka Bhadravathi Latest News, #shivamogga live news #karnatakalocalnews, #karnataka assembly elections 2023shivamogga today news,shivamogga latest news#Shivamogga #ShivamoggaNews #Shimoga #MalnadNewsshivamogga news,shivamogga,shivamogga airport,kannada news live,kannada news,shivamogga airport inauguration,shivamogga latest news,pm modi in shivamogga,latest kannada news,shivamogga mp,live news,shivamogga today news,shivamogga airport​,kannada live news,karnataka latest news,kannada latest news,pm modi inaugurate shivamogga airport,shivamogga new airport,latest news,karnataka news,breaking news,shivamogga news today

Share This Article