ಮಲೆನಾಡು ಟುಡೆ ಸುದ್ದಿ ಅಕ್ಟೋಬರ್ 20, 2025 : ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು, ಸಾಗರ ಟೌನ್ನಲ್ಲಿ ಬಸ್ ಒಂದು ಬ್ರೇಕ್ ಪೇಲ್ ಆಗಿ, ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬೈಕ್ ಗಳ ಮೇಲೆ ಹರಿದ ಘಟನೆ ಇಂದು ಸಂಜೆ ಸಂಭವಿಸಿದೆ.

ಇಲ್ಲಿನ ಖಾಸಗಿ ಬಸ್ ನಿಲ್ದಾಣದ ಬಳಿಯಲ್ಲಿ ಈ ಘಟನೆ ನಡೆದಿದೆ. ಇಂದು ಸಂಜೆ ಬ್ರೇಕ್ ಫೇಲ್ ಆದ ಪರಿಣಾಮ, ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ, ಪಾರ್ಕ್ ಮಾಡಿದ್ದ ಮೂರು ಬೈಕ್ಗಳ ಮೇಲೆ ಹರಿದಿದೆ. ಅದೃಷ್ಟಕ್ಕೆ ಘಟನೆಯಲ್ಲಿ ಯಾರಿಗೂ ಸಹ ಪೆಟ್ಟಾಗಿಲ್ಲ. ಆದರೆ ಬಸ್ ಅಡಿಗೆ ಸಿಲುಕಿದ ಬೈಕ್ಗಳು ಜಖಂಗೊಂಡಿದೆ. ಘಟನೆ ಬೆನ್ನಲ್ಲೆ ಸ್ಥಳದಲ್ಲಿ ಜಮಾಯಿಸಿದ ಸ್ಥಳೀಯರು, ಯಾವುದೇ ಅಪಾಯವಾಗಿಲ್ಲ ಎಂಬುದುನ್ನ ಖಾತರಿಪಡಿಸಿಕೊಂಡರು .ಈ ಬಗ್ಗೆ ಇನ್ನಷ್ಟು ಮಾಹಿತಿ ಲಭ್ಯವಾಗಿದೆ.

ಶಿವಮೊಗ್ಗ : ಡಿಜಿಟಲ್ ಅರೆಸ್ಟ್ 19 ಲಕ್ಷ ವಂಚನೆ : ಒಂದೇ ತಿಂಗಳಲ್ಲಿ ಪ್ರಕರಣ ಬೇಧಿಸಿದ ಪೊಲೀಸರು
ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel instagram youtube telegram google business malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!
