ಸಾಗರ: ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಬೆಂಕಿ,ತಪ್ಪಿದ ಭಾರಿ ಅನಾಹುತ

ಹಂಚಿಕೊಳ್ಳಿ
WhatsApp Facebook X Telegram
Private Bus Catches Fire
Private Bus Catches Fire

ಸಾಗರ |  ಸಿಗಂದೂರು ಚೌಡೇಶ್ವರಿ ಸನ್ನಿಧಿಯಿಂದ ಸಾಗರ ಪಟ್ಟಣದತ್ತ ಪ್ರಯಾಣಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಪ್ರಯಾಣಿಕರು ಕೆಲಕಾಲ ಆತಂಕಕ್ಕೊಳಗಾದ ಘಟನೆ ಭಾನುವಾರ ಸಂಜೆ ಹುಲಿದೇವರಬನ ಸಮೀಪ ನಡೆದಿದೆ. 

ಶಿವಮೊಗ್ಗ ಸುದ್ದಿ ರೌಂಡ್ಸ್​ |ಭದ್ರಾ ನಾಲೆ 2 ಶವ ಪತ್ತೆ | ಶಿವಮೊಗ್ಗ ಜೈಲಿಗೆ ಬಂದ ಅಲೋಕ್​ ಕುಮಾರ್|ಕಾಶಿಪುರ ಗೇಟ್​ ಬಳಿ ವೃದ್ಧನ ಸಾವು!

ಎಸ್‌ಬಿಕೆ (SBK) ಸಂಸ್ಥೆಗೆ ಸೇರಿದ ಈ ಬಸ್ ಸಂಚರಿಸುತ್ತಿದ್ದ ವೇಳೆ ಬಲಭಾಗದ ಹಿಂಬದಿಯ ಟಯರ್‌ನಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಸ್ಥಳೀಯ ಗ್ರಾಮಸ್ಥರು ಕೂಡಲೇ ಚಾಲಕನಿಗೆ ಎಚ್ಚರಿಕೆ ನೀಡಿ ವಾಹನ ನಿಲ್ಲಿಸುವಂತೆ ಸೂಚಿಸಿದ್ದಾರೆ. ಇದರಿಂದ ಎಚ್ಚೆತ್ತ ಚಾಲಕ ತಕ್ಷಣ ರಸ್ತೆ ಬದಿಗೆ ಬಸ್ ನಿಲ್ಲಿಸಿದ್ದು, ಈ ವೇಳೆ ಒಳಗಿದ್ದ ಪ್ರಯಾಣಿಕರು ಭಯದಿಂದ ಹೊರಬಂದಿದ್ದಾರೆ.

ಬಸ್, ಚಾಲಕ, ಗ್ರಾಮಸ್ಥರು ಹಾಗೂ ಸಿಬ್ಬಂದಿಯ ಸಮಯಪ್ರಜ್ಞೆಯಿಂದಾಗಿ ಬೆಂಕಿ ಹರಡುವ ಮುನ್ನವೇ ಹತೋಟಿಗೆ ತರಲಾಗಿದ್ದು, ಸಂಭವಿಸಬಹುದಾದ ಭಾರಿ ಅನಾಹುತ ತಪ್ಪಿದಂತಾಗಿದೆ.

Private Bus Catches Fire
Private Bus Catches Fire

Private Bus Catches Fire Near Sagara

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor