ಚಿತ್ರದುರ್ಗ ಸಮಾವೇಶ ನಡುವೆ ಎರಡು ಸಲ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದ ಪ್ರಿಯಾಂಕಾ ಗಾಂಧಿ

Priyanka Gandhi came to Shimoga airport twice between Chitradurga convention

ಚಿತ್ರದುರ್ಗ ಸಮಾವೇಶ ನಡುವೆ ಎರಡು ಸಲ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂದ ಪ್ರಿಯಾಂಕಾ ಗಾಂಧಿ
Priyanka Gandhi

SHIVAMOGGA | MALENADUTODAY NEWS | Apr 24, 2024 | Priyanka Gandhi 

ನಿನ್ನೆ ಚಿತ್ರದುರ್ಗದಲ್ಲಿ ನಡೆದ ಕಾಂಗ್ರೆಸ್‌ ಸಮಾವೇಶದಲ್ಲಿ ಕಾಂಗ್ರೆಸ್‌ ಫೈರ್‌ ಬ್ರ್ಯಾಂಡ್‌ ಪ್ರಿಯಾಂಕಾ ಗಾಂದಿ ವಾದ್ರಾ ಪಾಲ್ಗೊಂಡಿದ್ದರು. ಸಮಾವೇಶದಲ್ಲಿ ಪಾಲ್ಗೊಂಡ ಅವರು ತಮ್ಮ ತಾಯಿಯ ಮಂಗಲಸೂತ್ರ ಈ ದೇಶಕ್ಕಾಗಿ ಬಲಿದಾನಗೊಂಡಿದೆ ಎಂದಿದ್ದರು. ಸದ್ಯ ಅವರ ಮಾತು ಎಲ್ಲೆಡೆ ಚರ್ಚೆಯಾಗುತ್ತಿದೆ. ಈ ನಡುವೆ ಪ್ರಿಯಾಂಕಾ ಗಾಂಧಿ ಒಂದೇ ದಿನ ಎರಡು ಸಲ ಶಿವಮೊಗ್ಗಕ್ಕೆ ಬಂದು ಹೋಗಿದ್ದಾರೆ. 

ಶಿವಮೊಗ್ಗ ವಿಮಾನ ನಿಲ್ದಾಣ

ಶಿವಮೊಗ್ಗದ ಸೋಗಾನೆಯಲ್ಲಿ ವಿಮಾನ ನಿಲ್ದಾಣವಾಗಿರುವುದು, ಮಧ್ಯ ಕರ್ನಾಟಕದ ಜಿಲ್ಲೆಗಳನ್ನ ಸಂಪರ್ಕಿಸಲು ಅನುಕೂಲ ಮಾಡಿಕೊಟ್ಟಿದೆ. ಅದರಲ್ಲಿಯು ರಾಷ್ಟ್ರನಾಯಕರ ಓಡಾಟಕ್ಕೆ ಏರ್‌ಪೋರ್ಟ್‌ ವೇದಿಕೆಯಾಗುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ನಿನ್ನೆ ಚಿತ್ರದುರ್ಗದಲ್ಲಿ ನಡೆದ ಸಮಾವೇಶದಲ್ಲಿ ಪಾಲ್ಗೊಳಲು ಆಗಮಿಸಿದ್ದ ಪ್ರಿಯಾಂಕಾ ಗಾಂಧಿ ಮೊದಲು ವಿಮಾನದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಮಧ್ಯಾಹ್ನ 2 ಗಂಟೆ ಸುಮಾರಿಗೆ ಬಂದಿದ್ದ ಅವರು,  ಅಲ್ಲಿಂದ ಹೆಲಿಕಾಪ್ಟರ್‌ ಮೂಲಕ ಚಿತ್ರದುರ್ಗಕ್ಕೆ ತೆರಳಿದ್ರು. ಆನಂತರ ವಾಪಸ್‌ ನಾಲ್ಕು ಗಂಟೆ ಹೆಲಿಕಾಪ್ಟರ್‌  ಮೂಲಕ ಏರ್‌ಪೋರ್ಟ್‌ಗೆ ಬಂದು ಅಲ್ಲಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ  ತೆರಳಿದರು.  

ನಿಲ್ದಾಣದಲ್ಲಿ ಪ್ರಿಯಾಂಕಾ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಸ್ವಾಗತಿಸಲಾಯಿತು. ಈ ವೇಳೆ  ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಆರ್.ಪ್ರಸನ್ನಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎನ್.ರಮೇಶ್, ಮುಖಂಡರಾದ ಕಲಗೋಡು ರತ್ನಾಕರ್, ಎಚ್.ಸಿ.ಯೋಗೀಶ್, ಬಲ್ಕೀಶ್ ಬಾನು ಹಾಜರಿದ್ದರು