THIRTHAHALLI

ಕೊಡಚಾದ್ರಿಯಲ್ಲಿ ನಿರ್ಮಾಪಕರ ಬಾ.ಮಾ. ಹರೀಶ್​ರ ಪುತ್ರ ಸಾವು! ದೇವಸ್ಥಾನದ ಬಳಿ ಏನಾಯ್ತು ಘಟನೆ!

ajjimane ganesh ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

Ba Ma Harishs Son Ullas Gowda / ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಕೊಡಚಾದ್ರಿ ಟ್ರಕ್ಕಿಂಗ್​ಗೆ ಬಂದಿದ್ದ ನಿರ್ಮಾಪಕ ಬಾ.ಮಾ ಹರೀಶ್​ರ ಪುತ್ರ ಉಲ್ಲಾಸ್ ಗೌಡ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. 29 ವರ್ಷದ ಉಲ್ಲಾಸ್ ಗೌಡರಿಗೆ ಇತ್ತೀಚೆಗೆಷ್ಟೆ ನಿಶ್ಚಿತಾರ್ಥವಾಗಿತ್ತು, ಚಾರಣಕ್ಕೆ ಅಂತಾ ಕೊಡಚಾದ್ರಿಗೆ ಬಂದಿದ್ದು. ಈ ವೇಳೆ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರ ಜೊತೆಯಲ್ಲಿದ್ದವರು, ಉಲ್ಲಾಸ್​ರನ್ನು ನಗರ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿಂದ ಹೊಸನಗರ ಆಸ್ಪತ್ರೆಗೆ ಶಿಫ್ಟ್ ಮಾಡುವಷ್ಟರಲ್ಲಿ ಉಲ್ಲಾಸ್ ಸಾವನ್ನಪ್ಪಿದ್ದಾರೆ. ಸದ್ಯ ಅವರ ಮೃತದೇಹ ಹೊಸನಗರ ಶವಾಗಾರದಲ್ಲಿ ಇರಿಸಲಾಗಿದ್ದು, ಕುಟುಂಬಸ್ಥರಿಗೆ ವಿಷಯ ತಿಳಿಸಲಾಗಿದೆ. ಕುಟುಂಬಸ್ಥರ ಆಗಮನದ ಬಳಿಕ ಮರಣೋತ್ತರ ಪರೀಕ್ಷೆ ನಡೆಯಲಿದೆ.

ಉಲ್ಲಾಸ್ ಗೌಡ ಹಾಗೂ ಅವರ ಸ್ನೇಹಿತರು ಒಟ್ಟು 13 ಮಂದಿ ಬೆಂಗಳೂರಿನಿಂದ ಟಿಟಿಯಲ್ಲಿ ಕೊಡಚಾದ್ರಿಗೆ ಬಂದಿದ್ದರು, ಕೊಡಚಾದ್ರಿ ಬೆಟ್ಟದ ಸರ್ವಜ್ಞ ಪೀಠದವರೆಗೆ ಟ್ರೆಕ್ಕಿಂಗ್ ಹೊರಟಿದ್ದರು. ಮೇಲಿನವರೆ ಟ್ರಕ್ ಮಾಡಿದ ಅವರು ವಾಪಸ್ ಇಳಿಯುವಾಗ ದೇವಸ್ಥಾನದ ಬಳಿ ಉಲ್ಲಾಸ್ ಅವರಿಗೆ ಎದೆನೋವು ಕಾಣಿಸಿದೆ. ಅಲ್ಲಿ ಕುಸಿದು ಬಿದ್ದ ಅವರನ್ನು ಬೆಟ್ಟದಿಂದ ಕೆಳಕ್ಕೆ ತಂದು ನಗರ ಆಸ್ಪತತ್ರೆಗೆ ಶಿಫ್ಟ್ ಮಾಡಲಾಗಿತ್ತು. ಅಲ್ಲಿಂದ ಹೊಸನಗರ ತಾಲೂಕು ಆಸ್ಪತ್ರೆಗೆ ಕರೆತರುವಾಗ ಉಲ್ಲಾಸ್‌ ಸಾವನ್ನಪ್ಪಿದ್ಧಾರೆ.

ನಿಮ್ಮ ವಾಟ್ಸಾಪ್​ಗೆ ಸುದ್ದಿ ಕಳುಹಿಸಲು ಕ್ಲಿಕ್​ ಮಾಡಿ ಗ್ರೂಪ್​ಗೆ ಜಾಯಿನ್ ಆಗಿ :  Whatsapp / https://chat.whatsapp.com/JrsZ8He4nN600n0r3tJItz

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ಟ್ಯಾಗ್‌ಗಳು:
ajjimane ganesh

ಅಜ್ಜಮನೆ ಗಣೇಶ, ಪತ್ರಕರ್ತ, ಸಮಯ, ಟಿವಿ9, ನ್ಯೂಸ್​ ಫಸ್ಟ್​ನಲ್ಲಿ ವೃತ್ತಿ ನಿರ್ವಹಿಸಿರುವ ಅನುಭವವಿದೆ. ಗಳಿಸಿದ ಅನುಭವದ ಅನುಭಾವದ ಜೊತೆಗೆ ಮಲೆನಾಡು ಟುಡೆಯಲ್ಲಿ ಸೀನಿಯರ್​​ ಜರ್ನಲಿಸ್ಟ್​ ಆಗಿ ಕೆಲಸ ನಿರ್ವಹಿಸುತ್ತಿರುವೆ