ಹೊಸ ಆರಂಭ! VISL ನಲ್ಲಿನ NRM ಘಟಕದಲ್ಲಿ ಮಷಿನ್ ಸದ್ದು! ವಿಡಿಯೋ ಹಂಚಿಕೊಂಡ ಸಂಸದ ಬಿ.ವೈ.ರಾಘವೇಂದ್ರ
Production has started at Bhadravathi Visvesvaraya Iron and Steel Plant ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯಲ್ಲಿ ಉತ್ಪಾದನೆ ಆರಂಭವಾಗಿದೆ
KARNATAKA NEWS/ ONLINE / Malenadu today/ Aug 29, 2023 SHIVAMOGGA NEWS
ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿರುವ ಭದ್ರಾವತಿ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ (Bhadravathi Vishweshwara Iron and Steel Factory) ಯಲ್ಲಿ ಮತ್ತೆ ಉತ್ಪಾದನೆ ಆರಂಭಗೊಂಡಿದೆ. ಈ ಸಂಬಂಧ ಸಂಸದ ಬಿ.ವೈ.ರಾಘವೇಂದ್ರರವರು ಟ್ವೀಟ್ ಮಾಡಿದ್ಧಾರೆ. ತಮ್ಮಟ್ವಿಟ್ಟರ್ನಲ್ಲಿ ಸಂಸದರು, ವಿಐಎಸ್ಎಲ್ ಮತ್ತೆ ಕೆಲಸ ಶುರು ಮಾಡಿರುವುದು ಎಲ್ಲ ಕಾರ್ಮಿಕರ ನಿರಂತರ ಪ್ರಾರ್ಥನೆ ಹಾಗೂ ಪ್ರಯತ್ನಕ್ಕೆ ಸಂದ ಫಲ. ಆ ಪ್ರಯತ್ನದಲ್ಲಿ ಭಾಗಿಯಾಗಿರುವ ಕಿಂಚಿತ್ ಸಂತೋಷ ಹಾಗೂ ಸಾರ್ಥಕ ಭಾವ ನನ್ನದು. ಸದ್ಯದಲ್ಲೇ ಈ ಹೆಮ್ಮೆಯ ಕಾರ್ಖಾನೆ ಪೂರ್ಣರೂಪದಲ್ಲಿ ಮತ್ತೆ ಹಿಂದಿನ ವೈಭವಕ್ಕೆ ಮರಳುವ ವಿಶ್ವಾಸವಿದೆ. ಆ ನಿಟ್ಟಿನಲ್ಲಿ ನನ್ನ ಪ್ರಯತ್ನ ನಿರಂತರ ಎಂದು ಬರೆದುಕೊಂಡಿದ್ಧಾರೆ.
ವಿಐಎಸ್ಎಲ್ ಮತ್ತೆ ಕೆಲಸ ಶುರು ಮಾಡಿರುವುದು ಎಲ್ಲ ಕಾರ್ಮಿಕರ ನಿರಂತರ ಪ್ರಾರ್ಥನೆ ಹಾಗೂ ಪ್ರಯತ್ನಕ್ಕೆ ಸಂದ ಫಲ. ಆ ಪ್ರಯತ್ನದಲ್ಲಿ ಭಾಗಿಯಾಗಿರುವ ಕಿಂಚಿತ್ ಸಂತೋಷ ಹಾಗೂ ಸಾರ್ಥಕ ಭಾವ ನನ್ನದು.
ಸದ್ಯದಲ್ಲೇ ಈ ಹೆಮ್ಮೆಯ ಕಾರ್ಖಾನೆ ಪೂರ್ಣರೂಪದಲ್ಲಿ ಮತ್ತೆ ಹಿಂದಿನ ವೈಭವಕ್ಕೆ ಮರಳುವ ವಿಶ್ವಾಸವಿದೆ. ಆ ನಿಟ್ಟಿನಲ್ಲಿ ನನ್ನ ಪ್ರಯತ್ನ ನಿರಂತರ. pic.twitter.com/EzqR7Fu3dc — B Y Raghavendra (@BYRBJP) August 28, 2023
ಕಾರ್ಖಾನೆಯಲ್ಲಿ ನಿನ್ನೆ ಸೋಮವಾರ ಬೆಳಿಗ್ಗೆ ಎನ್ಆರ್ಎಂ ಘಟಕ ಆರಂಭಗೊಂಡಿದೆ. 6 ದಿನಗಳ ಹಿಂದೆ ಉಕ್ಕು ಪ್ರಾಧಿಕಾರ ಬಿಲಾಯ್ ಘಟಕದಿಂದ ಕಾರ್ಖಾನೆಗೆ19 ವ್ಯಾಗನ್ಗಳಲ್ಲಿ ಬ್ಲೂಮ್ಗಳು ಕಾರ್ಖಾನೆಗೆ ಬಂದಿದ್ದವು. ಇದರ ಮುಂದಿನ ಭಾಗವಾಗಿ, ಎನ್ಆರ್ಎಂ ಘಟಕ ಆರಂಭಗೊಂಡಿದೆ. ಈ ನಡುವೆ ಕಳೆದ ಸುಮಾರು 8 ತಿಂಗಳಿನಿಂದ ಕಾರ್ಖಾನೆ ಮುಂಭಾಗದಲ್ಲಿ ಹೋರಾಟ ನಡೆಸುತ್ತಿರುವ ಗುತ್ತಿಗೆ ಕಾರ್ಮಿಕರು ತಮ್ಮ ಹೋರಾಟ ಮುಂದುವರೆಸಿದ್ದಾರೆ.
ಇನ್ನಷ್ಟು ಸುದ್ದಿಗಳು
-
ಪ್ರೀತಿ ಪೆಟ್ಟು ಹುಷಾರು! ಪ್ರೇಮಿಸಿದ ಯುವಕನನ್ನ ಕೂಡಿ ಹಾಕಿ ಹೊಡೆದ ಹುಡುಗಿ ಕಡೆಯವರು! ದಾಖಲಾಯ್ತು ಎಫ್ಐಆರ್!
-
ಮನೆ ಹಿತ್ತಲಲ್ಲಿದ್ದ ಬಾವಿಗೆ ಬಿದ್ದ ಮಹಿಳೆ! ಬಚಾವ್ ಆಗಿದ್ದೇ ಹೆಚ್ಚು! ನಡೆದಿದ್ದೇನು?