protest against state government ರಾಷ್ಟ್ರ ಭಕ್ತ ಬಳಗದಿಂದ ರಾಜ್ಯ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ | ಕಾರಣವೇನು
ವಸತಿ ಯೋಜನೆಯಲ್ಲಿ ನಿರ್ಮಾಣವಾಗುವ ಮನೆಗಳಲ್ಲಿ ಮುಸ್ಲೀಮರಿಗೆ ಶೇ 15 ರಷ್ಟು ಮೀಸಲಿಡಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಇದರ ವಿರುದ್ದವಾಗಿ ರಾಷ್ಟ್ರ ಭಕ್ತ ಬಳಗದ ವತಿಯಿಂದ ನಗರದಲ್ಲಿ ಜೂನ್ 25 ರಂದು ರಾಮಣ್ಣ ಶೆಟ್ಟಿ ಪಾರ್ಕ್ನಿಂದ ಶಿವಪ್ಪನಾಯಕ ವೃತ್ತದ ವರೆಗೆ ಬೃಹತ್ ಪ್ರತಿಭಟನಾ ರ್ಯಾಲಿಯನ್ನು ಹಮ್ಮಿಕೊಂಡಿದ್ದೇವೆ ಎಂದು ರಾಷ್ಟ್ರ ಭಕ್ತ ಬಳಗದ ಪ್ರಮುಕರಾದ ಕೆ ಈ ಕಾಂತೇಶ್ ಹೇಳಿದರು.
ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಕಾಂಗ್ರೆಸ್ ಸರ್ಕಾರ ಮುಸ್ಲಿಂ ಸಮುದಾಯದ ಓಟ್ ಬ್ಯಾಂಕ್ಗಾಗಿ ಅವರನ್ನು ಓಲೈಸುವ ದೃಷ್ಠಿಯಿಂದ ಇಂತಹ ಕಾನೂನುಗಳನ್ನು ಜಾರಿಗೆ ತರುತ್ತಿದೆ. ಈ ಹಿಂದೆ ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ 4 ರಷ್ಟು ಮೀಸಲಾತಿ ನೀಡಿದ್ದರು. ಅಷ್ಟೇ ಅಲ್ಲದೆ ಈ ಬಾರಿಯ ರಾಜ್ಯ ಬಜೆಟ್ನಲ್ಲಿ ಸಹ 1000 ಕೋಟಿ ರೂಪಾಯಿ ಹಣವನ್ನು ಮುಸ್ಲಿಂ ಸಮುದಾಯಕ್ಕೆ ನೀಡಿದ್ದರು. ಇದರ ನಡುವೆ ಬಡವರಿಗಾಗಿ ಮೀಸಲಿರುವ ಮನೆಗಳನ್ನು ಕಿತ್ತು ಅಲ್ಪ ಸಂಖ್ಯಾತರಿಗೆ ಹಂಚಲು ಹೊರಟಿರುವ ಸರ್ಕಾರದ ನಡೆ ಖಂಡನೀಯ ಎಂದು ಆಕ್ರೋಶ ವ್ಯಕ್ತ ಪಡಿಸಿದರು
protest against state government ಬಾಬಾ ಸಾಹೇಬ್ ಅಂಬೇಡ್ಕರ್ರವರು ಧರ್ಮಾದರಿತ ಮೀಸಲಾತಿಯನ್ನು ವಿರೋಧಿಸಿದ್ದರು. ಆದರೆ ಯಾವಾಗಲು ಬುದ್ದ, ಬಸವ, ಅಂಬೇಡ್ಕರ್ ಎಂದು ಹೇಳುವ ಸಿದ್ದರಾಮಯ್ಯ ಅಂಬೇಡ್ಕರ್ರವರ ಸಂವಿಧಾನವನ್ನು ವಿರೋಧಿಸಿ ಧರ್ಮಾಧರಿತ ಮೀಸಲಾತಿಯನ್ನು ನೀಡಿದ್ದಾರೆ. ದಲಿತ ವರ್ಗದ ಚಾಂಪಿಯನ್ ನಾನು ಎಂದು ಹೇಳುವ ಸಿದ್ದರಾಮಯ್ಯ ದಲಿತರಿಗೆ ದೋಹ ಮಾಡುತ್ತಿದ್ದಾರೆ. ಕಾಂಗ್ರೆಸಿಗರಿಗೆ ಮುಸ್ಲಿಮರ ಓಟು ಮಾತ್ರ ಸಾಕೆನಿಸಿದೆ. ಆದ್ದರಿಂದಲೇ ಈ ರೀತಿಯ ಕಾನೂನನನ್ನು ಜಾರಿಗೆ ತರುತ್ತಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ವಸತಿ ಯೋಜನೆಯಲ್ಲಿ ನಿರ್ಮಾಣವಾಗುತ್ತಿರುವ ಮನೆಗಳಲ್ಲಿ ಮುಸ್ಲಿಮರಿಗೆ ನೀಡಿರುವ ಮೀಸಲಾತಿಯನ್ನು ಹಿಂಪಡೆಯಬೇಕು. ಹಾಗೆಯೇ ದಲಿತರ ಬಡವರಿಗಾಗಿ ಅಬಿವೃದ್ದಿ ಕಾರ್ಯಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು. ಈ ಹಿನ್ನೆಲೆ ಕೆಎಸ್ ಈಶ್ವರಪ್ಪನವರ ನೇತೃತ್ವದಲ್ಲಿ ಈ ರ್ಯಾಲಿಯನ್ನು ಹಮ್ಮಿಕೊಂಡಿದ್ದೇವೆ.
